AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorists Encounter: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಎನ್​ಕೌಂಟರ್

ಉಗ್ರರು ಮಸೀದಿಯ ಕಟ್ಟಡದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದರಿಂದ ಭದ್ರತಾ ಪಡೆಯ ಸಿಬ್ಬಂದಿ ಹಾಗೂ ಪೊಲೀಸರು ಆ ಸ್ಥಳಕ್ಕೆ ತೆರಳಿದ್ದರು.

Terrorists Encounter: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಎನ್​ಕೌಂಟರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 10, 2022 | 6:14 PM

Share

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ (Pulwama) ಜಿಲ್ಲೆಯ ನೈನಾ ಬಟ್ಪೋರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಎನ್​ಕೌಂಟರ್​​ನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಇಬ್ಬರೂ ಭಯೋತ್ಪಾದಕ ಸಂಘಟನೆ ಎಲ್ಇಟಿ (ಲಷ್ಕರ್-ಎ-ತೊಯ್ಬಾ)ಯವರಾಗಿದ್ದರು ಎಂದು ತಿಳಿಸಲಾಗಿದೆ. ಇನ್ನೂ ಉಳಿದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸೇನಾಪಡೆಯವರು ಮೃತ ಉಗ್ರರಿ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಮಸೀದಿಯ ಕಟ್ಟಡದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದರಿಂದ ಭದ್ರತಾ ಪಡೆಯ ಸಿಬ್ಬಂದಿ ಹಾಗೂ ಪೊಲೀಸರು ಆ ಸ್ಥಳಕ್ಕೆ ತೆರಳಿದ್ದರು. ಮಸೀದಿಗೆ ಯಾವುದೇ ಹಾನಿಯಾಗದಂತೆ ನಾವು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಉಗ್ರರಿದ್ದ ಪ್ರದೇಶವನ್ನು ಸುತ್ತುವರೆದಿತ್ತು. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಭಯೋತ್ಪಾದಕರು ಅಡಗಿರುವ ಸ್ಥಳದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಇದರಿಂದ ಉಗ್ರರ ಮೇಲೆ ಎನ್​ಕೌಂಟರ್ ನಡೆಸಲಾಯಿತು.

ಇದನ್ನೂ ಓದಿ: Terrorists Encounter: ಜಮ್ಮು ಕಾಶ್ಮೀರದ ಶೋಪಿಯಾನ್​ನಲ್ಲಿ ಎನ್​ಕೌಂಟರ್; ಇಬ್ಬರು ಎಲ್​ಇಟಿ ಉಗ್ರರ ಹತ್ಯೆ

ಶ್ರೀನಗರದಲ್ಲಿ ಪೊಲೀಸರಿಂದ ಎನ್‌ಕೌಂಟರ್: ಕಾನ್ಸ್‌ಟೇಬಲ್‌ ಹತ್ಯೆ ಮಾಡಿದ್ದ ಉಗ್ರ ಸಾವು

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ