AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorists Encounter: ಜಮ್ಮು ಕಾಶ್ಮೀರದಲ್ಲಿ ಮಾಜಿ ಪತ್ರಕರ್ತ ಸೇರಿ ಇಬ್ಬರು ಉಗ್ರರ ಎನ್​ಕೌಂಟರ್

ಎನ್​ಕೌಂಟರ್​​ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ರಯೀಸ್ ಅಹ್ ಭಟ್ ಅನಂತನಾಗ್ ಜಿಲ್ಲೆಯಲ್ಲಿ ಆನ್‌ಲೈನ್ ನ್ಯೂಸ್ ಪೋರ್ಟಲ್ 'ವ್ಯಾಲಿ ನ್ಯೂಸ್ ಸರ್ವೀಸ್' ಅನ್ನು ನಡೆಸುತ್ತಿದ್ದ.

Terrorists Encounter: ಜಮ್ಮು ಕಾಶ್ಮೀರದಲ್ಲಿ ಮಾಜಿ ಪತ್ರಕರ್ತ ಸೇರಿ ಇಬ್ಬರು ಉಗ್ರರ ಎನ್​ಕೌಂಟರ್
ಎನ್​ಕೌಂಟರ್ ಆದ ಪತ್ರಕರ್ತ
TV9 Web
| Edited By: |

Updated on:Mar 30, 2022 | 2:26 PM

Share

ನವದೆಹಲಿ: ಜಮ್ಮು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ (Encounter) ಮಾಜಿ ಪತ್ರಕರ್ತ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಎನ್​ಕೌಂಟರ್​​ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ರಯೀಸ್ ಅಹ್ ಭಟ್ ಅನಂತನಾಗ್ ಜಿಲ್ಲೆಯಲ್ಲಿ ಆನ್‌ಲೈನ್ ನ್ಯೂಸ್ ಪೋರ್ಟಲ್ ‘ವ್ಯಾಲಿ ನ್ಯೂಸ್ ಸರ್ವೀಸ್’ ಅನ್ನು ನಡೆಸುತ್ತಿದ್ದ. ರಯೀಸ್ ಅಹ್ ಭಟ್ ಕಳೆದ ವರ್ಷ ಆಗಸ್ಟ್‌ನಲ್ಲಿ ಭಯೋತ್ಪಾದಕ ಶ್ರೇಣಿಗೆ ಸೇರಿದ್ದ. ಆತನನ್ನು ಜಮ್ಮು ಕಾಶ್ಮೀರದ (Jammu Kashmir) ಪೊಲೀಸರ ಪಟ್ಟಿಯಲ್ಲಿ ‘ಸಿ’ ಎಂದು ವರ್ಗೀಕರಿಸಲಾಯಿತು. ಉಗ್ರವಾದಿ ಕೃತ್ಯಗಳಿಗೆ ಸಂಬಂಧಿಸಿದ ಅಪರಾಧಗಳಿಗಾಗಿ ಆತನ ವಿರುದ್ಧ ಈಗಾಗಲೇ ಎರಡು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಎರಡನೇ ಭಯೋತ್ಪಾದಕನನ್ನು ಅನಂತನಾಗ್ ಜಿಲ್ಲೆಯ ಬಿಜ್ಬೆಹರಾ ನಿವಾಸಿ ಹಿಲಾಲ್ ಅಹ್ ರಾಹ್ ಎಂದು ಗುರುತಿಸಲಾಗಿದೆ. ಈತ ಸಿ ಕೆಟಗರಿ ಭಯೋತ್ಪಾದಕ ಎಂದು ಪೊಲೀಸರು ತಿಳಿಸಿದ್ದಾರೆ. ರಯೀಸ್ 2021ರ ಆಗಸ್ಟ್ 8ರಂದು ನಾಪತ್ತೆಯಾಗಿದ್ದ ಎಂದು ಹೇಳಲಾಗುತ್ತಿದ್ದರೆ, ಹಿಲಾಲ್ ಅಹ್ ರಾಹ್ ಅದಾಗಿ 2 ತಿಂಗಳ ನಂತರ ಅಂದರೆ ಅಕ್ಟೋಬರ್ 18ರಂದು ಕಾಣೆಯಾಗಿದ್ದರು.

ಆ ಇಬ್ಬರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವರ್ಷ ಪೊಲೀಸರು ನೀಡಿದ ಅಂಕಿ-ಅಂಶಗಳ ಪ್ರಕಾರ, ಭಾರತೀಯ ಭದ್ರತಾ ಪಡೆಗಳು ಇದುವರೆಗೆ 30 ವಿವಿಧ ಎನ್‌ಕೌಂಟರ್‌ಗಳಲ್ಲಿ 40ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿವೆ ಎಂಬುದು ಗಮನಾರ್ಹ. ಹಾಗೇ, 26 ಸಕ್ರಿಯ ಭಯೋತ್ಪಾದಕರು ಮತ್ತು 150 ಭಯೋತ್ಪಾದಕರ ಸಹಚರರನ್ನು ಸಹ ಬಂಧಿಸಲಾಗಿದೆ.

ಇದನ್ನೂ ಓದಿ: 60 ಪ್ರಕರಣಗಳ ಆರೋಪಿಯನ್ನು ಎನ್​ಕೌಂಟರ್​​ನಲ್ಲಿ ಕೊಂದ ತಮಿಳುನಾಡು ಪೊಲೀಸರು; ತನಿಖೆ ಪ್ರಾರಂಭ

ವಿಶೇಷ ಸ್ಥಾನಮಾನ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ ಮಾಡಿದವರು ಎಷ್ಟು ಮಂದಿ?-ಇಲ್ಲಿದೆ ನೋಡಿ ಕೇಂದ್ರ ನೀಡಿದ ಮಾಹಿತಿ

Published On - 1:58 pm, Wed, 30 March 22

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್