AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorists Encounter: ಜಮ್ಮು ಕಾಶ್ಮೀರದಲ್ಲಿ ಮಾಜಿ ಪತ್ರಕರ್ತ ಸೇರಿ ಇಬ್ಬರು ಉಗ್ರರ ಎನ್​ಕೌಂಟರ್

ಎನ್​ಕೌಂಟರ್​​ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ರಯೀಸ್ ಅಹ್ ಭಟ್ ಅನಂತನಾಗ್ ಜಿಲ್ಲೆಯಲ್ಲಿ ಆನ್‌ಲೈನ್ ನ್ಯೂಸ್ ಪೋರ್ಟಲ್ 'ವ್ಯಾಲಿ ನ್ಯೂಸ್ ಸರ್ವೀಸ್' ಅನ್ನು ನಡೆಸುತ್ತಿದ್ದ.

Terrorists Encounter: ಜಮ್ಮು ಕಾಶ್ಮೀರದಲ್ಲಿ ಮಾಜಿ ಪತ್ರಕರ್ತ ಸೇರಿ ಇಬ್ಬರು ಉಗ್ರರ ಎನ್​ಕೌಂಟರ್
ಎನ್​ಕೌಂಟರ್ ಆದ ಪತ್ರಕರ್ತ
TV9 Web
| Updated By: ಸುಷ್ಮಾ ಚಕ್ರೆ|

Updated on:Mar 30, 2022 | 2:26 PM

Share

ನವದೆಹಲಿ: ಜಮ್ಮು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ (Encounter) ಮಾಜಿ ಪತ್ರಕರ್ತ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಎನ್​ಕೌಂಟರ್​​ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ರಯೀಸ್ ಅಹ್ ಭಟ್ ಅನಂತನಾಗ್ ಜಿಲ್ಲೆಯಲ್ಲಿ ಆನ್‌ಲೈನ್ ನ್ಯೂಸ್ ಪೋರ್ಟಲ್ ‘ವ್ಯಾಲಿ ನ್ಯೂಸ್ ಸರ್ವೀಸ್’ ಅನ್ನು ನಡೆಸುತ್ತಿದ್ದ. ರಯೀಸ್ ಅಹ್ ಭಟ್ ಕಳೆದ ವರ್ಷ ಆಗಸ್ಟ್‌ನಲ್ಲಿ ಭಯೋತ್ಪಾದಕ ಶ್ರೇಣಿಗೆ ಸೇರಿದ್ದ. ಆತನನ್ನು ಜಮ್ಮು ಕಾಶ್ಮೀರದ (Jammu Kashmir) ಪೊಲೀಸರ ಪಟ್ಟಿಯಲ್ಲಿ ‘ಸಿ’ ಎಂದು ವರ್ಗೀಕರಿಸಲಾಯಿತು. ಉಗ್ರವಾದಿ ಕೃತ್ಯಗಳಿಗೆ ಸಂಬಂಧಿಸಿದ ಅಪರಾಧಗಳಿಗಾಗಿ ಆತನ ವಿರುದ್ಧ ಈಗಾಗಲೇ ಎರಡು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಎರಡನೇ ಭಯೋತ್ಪಾದಕನನ್ನು ಅನಂತನಾಗ್ ಜಿಲ್ಲೆಯ ಬಿಜ್ಬೆಹರಾ ನಿವಾಸಿ ಹಿಲಾಲ್ ಅಹ್ ರಾಹ್ ಎಂದು ಗುರುತಿಸಲಾಗಿದೆ. ಈತ ಸಿ ಕೆಟಗರಿ ಭಯೋತ್ಪಾದಕ ಎಂದು ಪೊಲೀಸರು ತಿಳಿಸಿದ್ದಾರೆ. ರಯೀಸ್ 2021ರ ಆಗಸ್ಟ್ 8ರಂದು ನಾಪತ್ತೆಯಾಗಿದ್ದ ಎಂದು ಹೇಳಲಾಗುತ್ತಿದ್ದರೆ, ಹಿಲಾಲ್ ಅಹ್ ರಾಹ್ ಅದಾಗಿ 2 ತಿಂಗಳ ನಂತರ ಅಂದರೆ ಅಕ್ಟೋಬರ್ 18ರಂದು ಕಾಣೆಯಾಗಿದ್ದರು.

ಆ ಇಬ್ಬರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವರ್ಷ ಪೊಲೀಸರು ನೀಡಿದ ಅಂಕಿ-ಅಂಶಗಳ ಪ್ರಕಾರ, ಭಾರತೀಯ ಭದ್ರತಾ ಪಡೆಗಳು ಇದುವರೆಗೆ 30 ವಿವಿಧ ಎನ್‌ಕೌಂಟರ್‌ಗಳಲ್ಲಿ 40ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿವೆ ಎಂಬುದು ಗಮನಾರ್ಹ. ಹಾಗೇ, 26 ಸಕ್ರಿಯ ಭಯೋತ್ಪಾದಕರು ಮತ್ತು 150 ಭಯೋತ್ಪಾದಕರ ಸಹಚರರನ್ನು ಸಹ ಬಂಧಿಸಲಾಗಿದೆ.

ಇದನ್ನೂ ಓದಿ: 60 ಪ್ರಕರಣಗಳ ಆರೋಪಿಯನ್ನು ಎನ್​ಕೌಂಟರ್​​ನಲ್ಲಿ ಕೊಂದ ತಮಿಳುನಾಡು ಪೊಲೀಸರು; ತನಿಖೆ ಪ್ರಾರಂಭ

ವಿಶೇಷ ಸ್ಥಾನಮಾನ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ ಮಾಡಿದವರು ಎಷ್ಟು ಮಂದಿ?-ಇಲ್ಲಿದೆ ನೋಡಿ ಕೇಂದ್ರ ನೀಡಿದ ಮಾಹಿತಿ

Published On - 1:58 pm, Wed, 30 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ