Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorists Encounter: ಜಮ್ಮು ಕಾಶ್ಮೀರದಲ್ಲಿ ಮಾಜಿ ಪತ್ರಕರ್ತ ಸೇರಿ ಇಬ್ಬರು ಉಗ್ರರ ಎನ್​ಕೌಂಟರ್

ಎನ್​ಕೌಂಟರ್​​ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ರಯೀಸ್ ಅಹ್ ಭಟ್ ಅನಂತನಾಗ್ ಜಿಲ್ಲೆಯಲ್ಲಿ ಆನ್‌ಲೈನ್ ನ್ಯೂಸ್ ಪೋರ್ಟಲ್ 'ವ್ಯಾಲಿ ನ್ಯೂಸ್ ಸರ್ವೀಸ್' ಅನ್ನು ನಡೆಸುತ್ತಿದ್ದ.

Terrorists Encounter: ಜಮ್ಮು ಕಾಶ್ಮೀರದಲ್ಲಿ ಮಾಜಿ ಪತ್ರಕರ್ತ ಸೇರಿ ಇಬ್ಬರು ಉಗ್ರರ ಎನ್​ಕೌಂಟರ್
ಎನ್​ಕೌಂಟರ್ ಆದ ಪತ್ರಕರ್ತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Mar 30, 2022 | 2:26 PM

ನವದೆಹಲಿ: ಜಮ್ಮು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ (Encounter) ಮಾಜಿ ಪತ್ರಕರ್ತ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಎನ್​ಕೌಂಟರ್​​ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ರಯೀಸ್ ಅಹ್ ಭಟ್ ಅನಂತನಾಗ್ ಜಿಲ್ಲೆಯಲ್ಲಿ ಆನ್‌ಲೈನ್ ನ್ಯೂಸ್ ಪೋರ್ಟಲ್ ‘ವ್ಯಾಲಿ ನ್ಯೂಸ್ ಸರ್ವೀಸ್’ ಅನ್ನು ನಡೆಸುತ್ತಿದ್ದ. ರಯೀಸ್ ಅಹ್ ಭಟ್ ಕಳೆದ ವರ್ಷ ಆಗಸ್ಟ್‌ನಲ್ಲಿ ಭಯೋತ್ಪಾದಕ ಶ್ರೇಣಿಗೆ ಸೇರಿದ್ದ. ಆತನನ್ನು ಜಮ್ಮು ಕಾಶ್ಮೀರದ (Jammu Kashmir) ಪೊಲೀಸರ ಪಟ್ಟಿಯಲ್ಲಿ ‘ಸಿ’ ಎಂದು ವರ್ಗೀಕರಿಸಲಾಯಿತು. ಉಗ್ರವಾದಿ ಕೃತ್ಯಗಳಿಗೆ ಸಂಬಂಧಿಸಿದ ಅಪರಾಧಗಳಿಗಾಗಿ ಆತನ ವಿರುದ್ಧ ಈಗಾಗಲೇ ಎರಡು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಎರಡನೇ ಭಯೋತ್ಪಾದಕನನ್ನು ಅನಂತನಾಗ್ ಜಿಲ್ಲೆಯ ಬಿಜ್ಬೆಹರಾ ನಿವಾಸಿ ಹಿಲಾಲ್ ಅಹ್ ರಾಹ್ ಎಂದು ಗುರುತಿಸಲಾಗಿದೆ. ಈತ ಸಿ ಕೆಟಗರಿ ಭಯೋತ್ಪಾದಕ ಎಂದು ಪೊಲೀಸರು ತಿಳಿಸಿದ್ದಾರೆ. ರಯೀಸ್ 2021ರ ಆಗಸ್ಟ್ 8ರಂದು ನಾಪತ್ತೆಯಾಗಿದ್ದ ಎಂದು ಹೇಳಲಾಗುತ್ತಿದ್ದರೆ, ಹಿಲಾಲ್ ಅಹ್ ರಾಹ್ ಅದಾಗಿ 2 ತಿಂಗಳ ನಂತರ ಅಂದರೆ ಅಕ್ಟೋಬರ್ 18ರಂದು ಕಾಣೆಯಾಗಿದ್ದರು.

ಆ ಇಬ್ಬರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವರ್ಷ ಪೊಲೀಸರು ನೀಡಿದ ಅಂಕಿ-ಅಂಶಗಳ ಪ್ರಕಾರ, ಭಾರತೀಯ ಭದ್ರತಾ ಪಡೆಗಳು ಇದುವರೆಗೆ 30 ವಿವಿಧ ಎನ್‌ಕೌಂಟರ್‌ಗಳಲ್ಲಿ 40ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿವೆ ಎಂಬುದು ಗಮನಾರ್ಹ. ಹಾಗೇ, 26 ಸಕ್ರಿಯ ಭಯೋತ್ಪಾದಕರು ಮತ್ತು 150 ಭಯೋತ್ಪಾದಕರ ಸಹಚರರನ್ನು ಸಹ ಬಂಧಿಸಲಾಗಿದೆ.

ಇದನ್ನೂ ಓದಿ: 60 ಪ್ರಕರಣಗಳ ಆರೋಪಿಯನ್ನು ಎನ್​ಕೌಂಟರ್​​ನಲ್ಲಿ ಕೊಂದ ತಮಿಳುನಾಡು ಪೊಲೀಸರು; ತನಿಖೆ ಪ್ರಾರಂಭ

ವಿಶೇಷ ಸ್ಥಾನಮಾನ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ ಮಾಡಿದವರು ಎಷ್ಟು ಮಂದಿ?-ಇಲ್ಲಿದೆ ನೋಡಿ ಕೇಂದ್ರ ನೀಡಿದ ಮಾಹಿತಿ

Published On - 1:58 pm, Wed, 30 March 22

ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು