AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರಗಾಮಿಗಳ ಗುಂಡಿಗೆ ಶ್ರೀನಗರದ ಪೊಲೀಸ್ ಸಿಬ್ಬಂದಿ ಹುತಾತ್ಮ

ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್​ಸ್ಟೆಬಲ್ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ

ಉಗ್ರಗಾಮಿಗಳ ಗುಂಡಿಗೆ ಶ್ರೀನಗರದ ಪೊಲೀಸ್ ಸಿಬ್ಬಂದಿ ಹುತಾತ್ಮ
ಶ್ರೀನಗರದಲ್ಲಿ ಭದ್ರತಾ ಸಿಬ್ಬಂದಿ ಗಸ್ತು (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 07, 2021 | 10:21 PM

Share

ದೆಹಲಿ: ಉಗ್ರಗಾಮಿಗಳ ಗುಂಡಿಗೆ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಭಾನುವಾರ ಹುತಾತ್ಮರಾಗಿದ್ದಾರೆ. ಶ್ರೀನಗರದ ಬಾಟ್​ಮಲೂ ಪ್ರದೇಶದಲ್ಲಿ ಪೊಲೀಸ್​ ಸಿಬ್ಬಂದಿಯನ್ನು ಭಯೋತ್ಪಾದಕರು ಬೆನ್ನಟ್ಟಿ ಕೊಂದಿದ್ದಾರೆ. ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್​ಸ್ಟೆಬಲ್ ತೌಸೀಫ್ ಅಹಮದ್ ಅವರ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ ಎಂದು ಪಿಟಿಐ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ.

ತೀವ್ರವಾಗಿ ಗಾಯಗೊಂಡ ಕಾನ್​ಸ್ಟೆಬಲ್​ ತೌಸೀಫ್ ಅವರನ್ನು ತಕ್ಷಣವೇ ಎಸ್​ಎಂಎಚ್​ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಈ ಪ್ರದೇಶದಲ್ಲಿ ಸಂಪೂರ್ಣವಾಗಿ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಭಯೋತ್ಪಾದಕನ್ನು ಪತ್ತೆಹಚ್ಚಲು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಭದ್ರತಾ ಪಡೆ- ಉಗ್ರರ ನಡುವೆ ಗುಂಡಿನ ಚಕಮಕಿ ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ನಂತರ ಭದ್ರತಾ ಸಿಬ್ಬಂದಿ ಆಸ್ಪತ್ರೆಯನ್ನು ಸುತ್ತುವರೆದಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈ ಪ್ರದೇಶದಲ್ಲಿದ್ದ ನಾಗರಿಕರ ನಡುವೆ ನುಸುಳಿಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿರುವ ಆಸ್ಪತ್ರೆಯಲ್ಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ನಗರದ ಬೆಮಿನಾ ಪ್ರದೇಶದ ಎಸ್​ಕೆಐಎಂಎಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಮಿನಾದ SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಆ ಆಸ್ಪತ್ರೆಯ ಸುತ್ತ ಸೇರಿದ್ದ ಜನಸಂದಣಿಯ ಲಾಭವನ್ನು ಪಡೆದುಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕರಾವಳಿ, ಮಲೆನಾಡಿನಲ್ಲಿ ಮತ್ತೆ ರಿಂಗಣಿಸಿದ ಸ್ಯಾಟಲೈಟ್ ಫೋನ್, ಕರುನಾಡಿಗೆ ಎದುರಾಗಿದ್ಯಾ ಉಗ್ರಗಾಮಿಗಳ ಆತಂಕ? ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ: ವಿದೇಶಾಂಗ ವ್ಯವಹಾರಗಳ ಇಲಾಖೆ ಆತಂಕ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್