AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರಗಾಮಿಗಳ ಗುಂಡಿಗೆ ಶ್ರೀನಗರದ ಪೊಲೀಸ್ ಸಿಬ್ಬಂದಿ ಹುತಾತ್ಮ

ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್​ಸ್ಟೆಬಲ್ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ

ಉಗ್ರಗಾಮಿಗಳ ಗುಂಡಿಗೆ ಶ್ರೀನಗರದ ಪೊಲೀಸ್ ಸಿಬ್ಬಂದಿ ಹುತಾತ್ಮ
ಶ್ರೀನಗರದಲ್ಲಿ ಭದ್ರತಾ ಸಿಬ್ಬಂದಿ ಗಸ್ತು (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 07, 2021 | 10:21 PM

Share

ದೆಹಲಿ: ಉಗ್ರಗಾಮಿಗಳ ಗುಂಡಿಗೆ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಭಾನುವಾರ ಹುತಾತ್ಮರಾಗಿದ್ದಾರೆ. ಶ್ರೀನಗರದ ಬಾಟ್​ಮಲೂ ಪ್ರದೇಶದಲ್ಲಿ ಪೊಲೀಸ್​ ಸಿಬ್ಬಂದಿಯನ್ನು ಭಯೋತ್ಪಾದಕರು ಬೆನ್ನಟ್ಟಿ ಕೊಂದಿದ್ದಾರೆ. ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್​ಸ್ಟೆಬಲ್ ತೌಸೀಫ್ ಅಹಮದ್ ಅವರ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ ಎಂದು ಪಿಟಿಐ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ.

ತೀವ್ರವಾಗಿ ಗಾಯಗೊಂಡ ಕಾನ್​ಸ್ಟೆಬಲ್​ ತೌಸೀಫ್ ಅವರನ್ನು ತಕ್ಷಣವೇ ಎಸ್​ಎಂಎಚ್​ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಈ ಪ್ರದೇಶದಲ್ಲಿ ಸಂಪೂರ್ಣವಾಗಿ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಭಯೋತ್ಪಾದಕನ್ನು ಪತ್ತೆಹಚ್ಚಲು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಭದ್ರತಾ ಪಡೆ- ಉಗ್ರರ ನಡುವೆ ಗುಂಡಿನ ಚಕಮಕಿ ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ನಂತರ ಭದ್ರತಾ ಸಿಬ್ಬಂದಿ ಆಸ್ಪತ್ರೆಯನ್ನು ಸುತ್ತುವರೆದಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈ ಪ್ರದೇಶದಲ್ಲಿದ್ದ ನಾಗರಿಕರ ನಡುವೆ ನುಸುಳಿಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿರುವ ಆಸ್ಪತ್ರೆಯಲ್ಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ನಗರದ ಬೆಮಿನಾ ಪ್ರದೇಶದ ಎಸ್​ಕೆಐಎಂಎಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಮಿನಾದ SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಆ ಆಸ್ಪತ್ರೆಯ ಸುತ್ತ ಸೇರಿದ್ದ ಜನಸಂದಣಿಯ ಲಾಭವನ್ನು ಪಡೆದುಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕರಾವಳಿ, ಮಲೆನಾಡಿನಲ್ಲಿ ಮತ್ತೆ ರಿಂಗಣಿಸಿದ ಸ್ಯಾಟಲೈಟ್ ಫೋನ್, ಕರುನಾಡಿಗೆ ಎದುರಾಗಿದ್ಯಾ ಉಗ್ರಗಾಮಿಗಳ ಆತಂಕ? ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ: ವಿದೇಶಾಂಗ ವ್ಯವಹಾರಗಳ ಇಲಾಖೆ ಆತಂಕ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ