ಸ್ವಾತಂತ್ರ್ಯ ದಿನದಂದು ಕೆಂಪುಕೋಟೆ ಮೇಲೆ ಉಗ್ರ ದಾಳಿ ನಡೆಸಲು ಭಯೋತ್ಪಾದಕರ ಸಂಚು

ಎಲ್‌ಇಟಿ, ಜೆಇಎಂ ಮತ್ತು ಇತರ ಮೂಲಭೂತ ಗುಂಪುಗಳಿಂದ ಬೆದರಿಕೆ ಇದೆ ಎಂದು ಐಬಿಯ 10 ಪುಟಗಳ ವರದಿಯಲ್ಲಿ ಹೇಳಿದೆ. ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಕೆಂಪು ಕೋಟೆಯಲ್ಲಿ ಕಟ್ಟುನಿಟ್ಟಾದ ಪ್ರವೇಶ ನಿಯಮಗಳನ್ನು ಜಾರಿಗೆ ತರಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ಸ್ವಾತಂತ್ರ್ಯ ದಿನದಂದು ಕೆಂಪುಕೋಟೆ ಮೇಲೆ ಉಗ್ರ ದಾಳಿ ನಡೆಸಲು ಭಯೋತ್ಪಾದಕರ ಸಂಚು
Red Fort
Edited By:

Updated on: Aug 04, 2022 | 9:38 AM

ದೆಹಲಿ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಲಷ್ಕರ್-ಎ-ತೈಬಾ (ಎಲ್ಇಟಿ), ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಇತರ ಮೂಲಭೂತ ಗುಂಪುಗಳಿಂದ ಸಂಭವನೀಯ ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ಬ್ಯೂರೋ (ಐಬಿ) ಎಚ್ಚರಿಕೆ ನೀಡಿದೆ. ಎಲ್‌ಇಟಿ, ಜೆಇಎಂ ಮತ್ತು ಇತರ ಮೂಲಭೂತ ಗುಂಪುಗಳಿಂದ ಬೆದರಿಕೆ ಇದೆ ಎಂದು ಐಬಿಯ 10 ಪುಟಗಳ ವರದಿಯಲ್ಲಿ ಹೇಳಿದೆ. ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಕೆಂಪು ಕೋಟೆಯಲ್ಲಿ ಕಟ್ಟುನಿಟ್ಟಾದ ಪ್ರವೇಶ ನಿಯಮಗಳನ್ನು ಜಾರಿಗೆ ತರಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ವರದಿಯಲ್ಲಿ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ದಾಳಿ ಮತ್ತು ಉದಯಪುರ ಮತ್ತು ಅಮರಾವತಿಯಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಲಾಗಿದೆ. ಐಬಿ ದೆಹಲಿ ಪೊಲೀಸರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಆಗಸ್ಟ್ 15ರಂದು ಸ್ಥಳದಲ್ಲಿ ಕಟ್ಟುನಿಟ್ಟಾದ ಪ್ರವೇಶ ನಿಯಮಗಳನ್ನು ಜಾರಿಗೊಳಿಸಲು ದೆಹಲಿ ಪೊಲೀಸರಿಗೆ ಸೂಚಿಸಲಾಗಿದೆ.

ಉದಯಪುರ ಮತ್ತು ಅಮರಾವತಿಯಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿ, ಗುಪ್ತಚರ ಸಂಸ್ಥೆಗಳು ಜನನಿಬಿಡ ಸ್ಥಳಗಳಲ್ಲಿ ತೀವ್ರಗಾಮಿ ಗುಂಪುಗಳು ಮತ್ತು ಅವರ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚಿಸಿವೆ.

ಇದನ್ನೂ ಓದಿ
Mallikarjun Kharge: ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್; ಯಂಗ್ ಇಂಡಿಯನ್ ಕಚೇರಿ ಶೋಧದ ವೇಳೆ ಹಾಜರಿರಲು ಸೂಚನೆ
Accident: ಕಮರಿಗೆ ಉರುಳಿದ ವ್ಯಾನ್; ನಾಲ್ವರ ಸಾವು, 9 ಮಂದಿಗೆ ಗಾಯ
Monkeypox ದೆಹಲಿಯಲ್ಲಿ ಮಂಕಿಪಾಕ್ಸ್ 4ನೇ ಪ್ರಕರಣ ಪತ್ತೆ; ದೇಶದಲ್ಲಿ 9ಕ್ಕೆ ಏರಿದ ಸೋಂಕಿತರ ಸಂಖ್ಯೆ
ಸಂಸತ್​​ನಲ್ಲಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆಗೆ ಅಂಗೀಕಾರ

ವರದಿಯ ಪ್ರಕಾರ, ಪಾಕ್ ಐಎಸ್ಐ ಜೈಶ್ ಮತ್ತು ಲಷ್ಕರ್ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಬೆಂಬಲ ನೀಡುವ ಮೂಲಕ ಭಯೋತ್ಪಾದಕ ದಾಳಿಗಳನ್ನು ಪ್ರಚೋದಿಸುತ್ತಿದೆ. ದೊಡ್ಡ ನಾಯಕರು ಮತ್ತು ಪ್ರಮುಖ ಸ್ಥಳಗಳನ್ನು ಗುರಿಯಾಗಿಸಲು ಜೆಎಂ ಮತ್ತು ಎಲ್ಇಟಿ ಸಂಘಟನೆಗಳು ಸಂಚು ರೂಪಿಸಿದೆ ಎನ್ನಲಾಗಿದೆ.

Published On - 9:38 am, Thu, 4 August 22

Web contact

TV9 Kannada

Read More
Follow Us