Sign In

By signing in or creating an account, you agree with Associated Broadcasting Company's Terms & Conditions and Privacy Policy.

Gaganyaan: ಗಗನಯಾನ ಮಿಷನ್​ಗಾಗಿ ಇಸ್ರೋದಿಂದ ವಿಕಾಸ್ ಎಂಜಿನ್ 3ನೇ ಟೆಸ್ಟ್ ಯಶಸ್ವಿ​; ಎಲಾನ್ ಮಸ್ಕ್​ ಅಭಿನಂದನೆ

Elon Musk: 2018ರ ಆಗಸ್ಟ್​ 15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಮಾನವಸಹಿತ ಗಗನಯಾನದ ಘೋಷಣೆಯನ್ನು ಮಾಡಿದ್ದರು.

Gaganyaan: ಗಗನಯಾನ ಮಿಷನ್​ಗಾಗಿ ಇಸ್ರೋದಿಂದ ವಿಕಾಸ್ ಎಂಜಿನ್ 3ನೇ ಟೆಸ್ಟ್ ಯಶಸ್ವಿ​; ಎಲಾನ್ ಮಸ್ಕ್​ ಅಭಿನಂದನೆ
ಎಲಾನ್ ಮಸ್ಕ್ (ಸಂಗ್ರಹ ಚಿತ್ರ)
Follow us
TV9 Web
| Updated By: Digi Tech Desk

Updated on:Jul 15, 2021 | 1:16 PM

ಇಸ್ರೋದ ಬಹುನಿರೀಕ್ಷಿತ ಯೋಜನೆಯಾದ ಮಾನವಸಹಿತ ಗಗನಯಾನ ಮಿಷನ್​ನ ಭಾಗವಾಗಿ 3ನೇ ಬಾರಿಗೆ ವಿಕಾಸ್ ಎಂಜಿನ್ ಟೆಸ್ಟ್​ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಟೆಸ್ಲಾಂ ಕಂಪನಿಯ ಸಂಸ್ಥಾಪಕ ಎಲಾನ್ ಮಸ್ಕ್ ಇಸ್ರೋಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಜುಲೈ 14ರಂದು ಇಸ್ರೋ ವಿಕಾಸ್ ಎಂಜಿನ್ ಹಾಟ್ ಟೆಸ್ಟ್​ ಅನ್ನು ಯಶಸ್ವಿಯಾಗಿ ನಡೆಸಿದೆ. ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಗಗನಯಾನಕ್ಕೆ ಇದರಿಂದ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ ಎಂದು ಇಸ್ರೋ ಟ್ವೀಟ್ ಮಾಡಿತ್ತು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಎಲಾನ್ ಮಸ್ಕ್ ಅಭಿನಂದನೆಗಳನ್ನು ತಿಳಿಸಿದ್ದಾರೆ.

ನಿನ್ನೆ ತಮಿಳುನಾಡಿನಲ್ಲಿ ನಡೆದ ವಿಕಾಸ್ ಎಂಜಿನ್ ಪರೀಕ್ಷೆಯಲ್ಲಿ 240 ಸೆಕೆಂಡ್​ಗಳ ಕಾಲ ಎಂಜಿನ್​ನನ್ನು ಉಡಾವಣೆ ಮಾಡಲಾಯಿತು. ಈ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿರುವ ಇಸ್ರೋದಲ್ಲಿ ಭಾರತೀಯ ಗಗನಯಾತ್ರಿಗಳು ಕೂಡ ಇದ್ದಾರೆ. ಭಾರತದ ನಾಲ್ವರು ಗಗನಯಾತ್ರಿಗಳು ಈಗಾಗಲೇ ರಷ್ಯಾದಲ್ಲಿ ಗಗನಯಾನಕ್ಕೆ ಅಗತ್ಯವಿರುವ ತರಬೇತಿಯನ್ನು ಪಡೆಯುತ್ತಿದ್ದಾರೆ. ಇಸ್ರೋದ GSLV MK3 ಗಗನಯಾತ್ರಿಗಳನ್ನು ಹೊತ್ತೊಯ್ಯಲಿದೆ.

2018ರ ಆಗಸ್ಟ್​ 15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಮಾನವಸಹಿತ ಗಗನಯಾನದ ಘೋಷಣೆಯನ್ನು ಮಾಡಿದ್ದರು. 2022ರ ಆಗಸ್ಟ್​ 15ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬುವ ಹಿನ್ನೆಲೆಯಲ್ಲಿ ಆ ಸಂದರ್ಭದಲ್ಲಿ ಮಾನವಸಹಿತ ಗಗನಯಾನವನ್ನು ಕೈಗೊಳ್ಳುವುದಾಗಿ ಘೋಷಿಸಲಾಗಿತ್ತು.

ಇದನ್ನೂ ಓದಿ: ಇಸ್ರೋ ಬೇಹುಗಾರಿಕೆ ಪ್ರಕರಣ; ವಿಜ್ಞಾನಿ ನಂಬಿ ನಾರಾಯಣನ್​​ ಹಿನ್ನೆಲೆ, ಜೈಲುವಾಸ, ಸಿಬಿಐ ತನಿಖೆ

(Tesla CEO Elon Musk congratulates Isro for successfully conducting 3rd test on Vikas Engine for Gaganyaan Mission)

Published On - 12:42 pm, Thu, 15 July 21

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ