AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gaganyaan: ಗಗನಯಾನ ಮಿಷನ್​ಗಾಗಿ ಇಸ್ರೋದಿಂದ ವಿಕಾಸ್ ಎಂಜಿನ್ 3ನೇ ಟೆಸ್ಟ್ ಯಶಸ್ವಿ​; ಎಲಾನ್ ಮಸ್ಕ್​ ಅಭಿನಂದನೆ

Elon Musk: 2018ರ ಆಗಸ್ಟ್​ 15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಮಾನವಸಹಿತ ಗಗನಯಾನದ ಘೋಷಣೆಯನ್ನು ಮಾಡಿದ್ದರು.

Gaganyaan: ಗಗನಯಾನ ಮಿಷನ್​ಗಾಗಿ ಇಸ್ರೋದಿಂದ ವಿಕಾಸ್ ಎಂಜಿನ್ 3ನೇ ಟೆಸ್ಟ್ ಯಶಸ್ವಿ​; ಎಲಾನ್ ಮಸ್ಕ್​ ಅಭಿನಂದನೆ
ಎಲಾನ್ ಮಸ್ಕ್ (ಸಂಗ್ರಹ ಚಿತ್ರ)
TV9 Web
| Updated By: Digi Tech Desk|

Updated on:Jul 15, 2021 | 1:16 PM

Share

ಇಸ್ರೋದ ಬಹುನಿರೀಕ್ಷಿತ ಯೋಜನೆಯಾದ ಮಾನವಸಹಿತ ಗಗನಯಾನ ಮಿಷನ್​ನ ಭಾಗವಾಗಿ 3ನೇ ಬಾರಿಗೆ ವಿಕಾಸ್ ಎಂಜಿನ್ ಟೆಸ್ಟ್​ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಟೆಸ್ಲಾಂ ಕಂಪನಿಯ ಸಂಸ್ಥಾಪಕ ಎಲಾನ್ ಮಸ್ಕ್ ಇಸ್ರೋಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಜುಲೈ 14ರಂದು ಇಸ್ರೋ ವಿಕಾಸ್ ಎಂಜಿನ್ ಹಾಟ್ ಟೆಸ್ಟ್​ ಅನ್ನು ಯಶಸ್ವಿಯಾಗಿ ನಡೆಸಿದೆ. ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಗಗನಯಾನಕ್ಕೆ ಇದರಿಂದ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ ಎಂದು ಇಸ್ರೋ ಟ್ವೀಟ್ ಮಾಡಿತ್ತು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಎಲಾನ್ ಮಸ್ಕ್ ಅಭಿನಂದನೆಗಳನ್ನು ತಿಳಿಸಿದ್ದಾರೆ.

ನಿನ್ನೆ ತಮಿಳುನಾಡಿನಲ್ಲಿ ನಡೆದ ವಿಕಾಸ್ ಎಂಜಿನ್ ಪರೀಕ್ಷೆಯಲ್ಲಿ 240 ಸೆಕೆಂಡ್​ಗಳ ಕಾಲ ಎಂಜಿನ್​ನನ್ನು ಉಡಾವಣೆ ಮಾಡಲಾಯಿತು. ಈ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿರುವ ಇಸ್ರೋದಲ್ಲಿ ಭಾರತೀಯ ಗಗನಯಾತ್ರಿಗಳು ಕೂಡ ಇದ್ದಾರೆ. ಭಾರತದ ನಾಲ್ವರು ಗಗನಯಾತ್ರಿಗಳು ಈಗಾಗಲೇ ರಷ್ಯಾದಲ್ಲಿ ಗಗನಯಾನಕ್ಕೆ ಅಗತ್ಯವಿರುವ ತರಬೇತಿಯನ್ನು ಪಡೆಯುತ್ತಿದ್ದಾರೆ. ಇಸ್ರೋದ GSLV MK3 ಗಗನಯಾತ್ರಿಗಳನ್ನು ಹೊತ್ತೊಯ್ಯಲಿದೆ.

2018ರ ಆಗಸ್ಟ್​ 15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಮಾನವಸಹಿತ ಗಗನಯಾನದ ಘೋಷಣೆಯನ್ನು ಮಾಡಿದ್ದರು. 2022ರ ಆಗಸ್ಟ್​ 15ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬುವ ಹಿನ್ನೆಲೆಯಲ್ಲಿ ಆ ಸಂದರ್ಭದಲ್ಲಿ ಮಾನವಸಹಿತ ಗಗನಯಾನವನ್ನು ಕೈಗೊಳ್ಳುವುದಾಗಿ ಘೋಷಿಸಲಾಗಿತ್ತು.

ಇದನ್ನೂ ಓದಿ: ಇಸ್ರೋ ಬೇಹುಗಾರಿಕೆ ಪ್ರಕರಣ; ವಿಜ್ಞಾನಿ ನಂಬಿ ನಾರಾಯಣನ್​​ ಹಿನ್ನೆಲೆ, ಜೈಲುವಾಸ, ಸಿಬಿಐ ತನಿಖೆ

(Tesla CEO Elon Musk congratulates Isro for successfully conducting 3rd test on Vikas Engine for Gaganyaan Mission)

Published On - 12:42 pm, Thu, 15 July 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!