AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ

ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ
ಕೆಂಪುಕೋಟೆ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 19, 2021 | 4:37 PM

Share

ದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿರುವ ಕೆಂಪುಕೋಟೆ (Red Fort)ಯಲ್ಲಿ ಸದ್ಯ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಜ.26ರವರೆಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.

ರೆಡ್​ ಫೋರ್ಟ್​ ಬಳಿ ಕೆಲವು ದಿನಗಳ ಹಿಂದೆ 15 ಕಾಗೆಗಳು ಸತ್ತುಬಿದ್ದಿದ್ದವು. ಅವುಗಳ ಸ್ಯಾಂಪಲ್​ ತಪಾಸಣೆ ಮಾಡಿದ್ದು, ಇದೀಗ ವರದಿ ಬಂದಿದೆ. ಹಕ್ಕಿಜ್ವರದಿಂದಲೇ ಮೃತಪಟ್ಟಿದ್ದು ವರದಿಯಲ್ಲಿ ಸ್ಪಷ್ಟವಾದ ಹಿನ್ನೆಲೆಯಲ್ಲಿ ಆತಂಕ ಶುರುವಾಗಿದೆ. ಇದೇ ಕಾರಣಕ್ಕೆ ಇಂದಿನಿಂದ ಜನವರಿ 26ವರೆಗೂ ಕೆಂಪುಕೋಟೆ ಗೇಟ್​ ಮುಚ್ಚಲಿದ್ದು, ಪ್ರವಾಸಿಗರ ಭೇಟಿಗೆ ಅವಕಾಶ ಇಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಜನವರಿ 26ರಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆಯುವ ಜತೆ, ಸಶಸ್ತ್ರ ಪಡೆಗಳ ಪರೇಡ್​ ಕೂಡ ಇರುತ್ತದೆ. ಹಾಗಾಗಿ ಮುಂಜಾಗೃತಾ ಕ್ರಮ ವಹಿಸುವ ನಿಟ್ಟಿನಲ್ಲಿ ಒಂದು ವಾರದ ಕಾಲ ಮುಚ್ಚಲಾಗುವುದು ಎಂದು ತಿಳಿಸಲಾಗಿದೆ.

ಇನ್ನು ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ. ಹಕ್ಕಿ ಜ್ವರ ಕಾರಣದಿಂದ ಸದ್ಯ ಘಾಜಿಪುರ ಮಾರ್ಕೆಟ್​ ಕೂಡ ಬಂದ್ ಆಗಿದೆ. ಇನ್ನು ಮಾರ್ಚ್​ 8ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.

91 ಸಾವಿರ ಜನರಿಗೆ ಉದ್ಯೋಗಾವಕಾಶ! ನಾಲ್ಕು ಐಟಿ ಕಂಪನಿಗಳಿಂದ ಕ್ಯಾಂಪಸ್ ಸೆಲೆಕ್ಷನ್​ಗೆ ಸಿದ್ಧತೆ..

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!