AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ

ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ
ಕೆಂಪುಕೋಟೆ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 19, 2021 | 4:37 PM

Share

ದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿರುವ ಕೆಂಪುಕೋಟೆ (Red Fort)ಯಲ್ಲಿ ಸದ್ಯ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಜ.26ರವರೆಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.

ರೆಡ್​ ಫೋರ್ಟ್​ ಬಳಿ ಕೆಲವು ದಿನಗಳ ಹಿಂದೆ 15 ಕಾಗೆಗಳು ಸತ್ತುಬಿದ್ದಿದ್ದವು. ಅವುಗಳ ಸ್ಯಾಂಪಲ್​ ತಪಾಸಣೆ ಮಾಡಿದ್ದು, ಇದೀಗ ವರದಿ ಬಂದಿದೆ. ಹಕ್ಕಿಜ್ವರದಿಂದಲೇ ಮೃತಪಟ್ಟಿದ್ದು ವರದಿಯಲ್ಲಿ ಸ್ಪಷ್ಟವಾದ ಹಿನ್ನೆಲೆಯಲ್ಲಿ ಆತಂಕ ಶುರುವಾಗಿದೆ. ಇದೇ ಕಾರಣಕ್ಕೆ ಇಂದಿನಿಂದ ಜನವರಿ 26ವರೆಗೂ ಕೆಂಪುಕೋಟೆ ಗೇಟ್​ ಮುಚ್ಚಲಿದ್ದು, ಪ್ರವಾಸಿಗರ ಭೇಟಿಗೆ ಅವಕಾಶ ಇಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಜನವರಿ 26ರಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆಯುವ ಜತೆ, ಸಶಸ್ತ್ರ ಪಡೆಗಳ ಪರೇಡ್​ ಕೂಡ ಇರುತ್ತದೆ. ಹಾಗಾಗಿ ಮುಂಜಾಗೃತಾ ಕ್ರಮ ವಹಿಸುವ ನಿಟ್ಟಿನಲ್ಲಿ ಒಂದು ವಾರದ ಕಾಲ ಮುಚ್ಚಲಾಗುವುದು ಎಂದು ತಿಳಿಸಲಾಗಿದೆ.

ಇನ್ನು ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ. ಹಕ್ಕಿ ಜ್ವರ ಕಾರಣದಿಂದ ಸದ್ಯ ಘಾಜಿಪುರ ಮಾರ್ಕೆಟ್​ ಕೂಡ ಬಂದ್ ಆಗಿದೆ. ಇನ್ನು ಮಾರ್ಚ್​ 8ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.

91 ಸಾವಿರ ಜನರಿಗೆ ಉದ್ಯೋಗಾವಕಾಶ! ನಾಲ್ಕು ಐಟಿ ಕಂಪನಿಗಳಿಂದ ಕ್ಯಾಂಪಸ್ ಸೆಲೆಕ್ಷನ್​ಗೆ ಸಿದ್ಧತೆ..

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ