AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ

ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ
ಕೆಂಪುಕೋಟೆ
Lakshmi Hegde
| Edited By: |

Updated on: Jan 19, 2021 | 4:37 PM

Share

ದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿರುವ ಕೆಂಪುಕೋಟೆ (Red Fort)ಯಲ್ಲಿ ಸದ್ಯ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಜ.26ರವರೆಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.

ರೆಡ್​ ಫೋರ್ಟ್​ ಬಳಿ ಕೆಲವು ದಿನಗಳ ಹಿಂದೆ 15 ಕಾಗೆಗಳು ಸತ್ತುಬಿದ್ದಿದ್ದವು. ಅವುಗಳ ಸ್ಯಾಂಪಲ್​ ತಪಾಸಣೆ ಮಾಡಿದ್ದು, ಇದೀಗ ವರದಿ ಬಂದಿದೆ. ಹಕ್ಕಿಜ್ವರದಿಂದಲೇ ಮೃತಪಟ್ಟಿದ್ದು ವರದಿಯಲ್ಲಿ ಸ್ಪಷ್ಟವಾದ ಹಿನ್ನೆಲೆಯಲ್ಲಿ ಆತಂಕ ಶುರುವಾಗಿದೆ. ಇದೇ ಕಾರಣಕ್ಕೆ ಇಂದಿನಿಂದ ಜನವರಿ 26ವರೆಗೂ ಕೆಂಪುಕೋಟೆ ಗೇಟ್​ ಮುಚ್ಚಲಿದ್ದು, ಪ್ರವಾಸಿಗರ ಭೇಟಿಗೆ ಅವಕಾಶ ಇಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಜನವರಿ 26ರಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆಯುವ ಜತೆ, ಸಶಸ್ತ್ರ ಪಡೆಗಳ ಪರೇಡ್​ ಕೂಡ ಇರುತ್ತದೆ. ಹಾಗಾಗಿ ಮುಂಜಾಗೃತಾ ಕ್ರಮ ವಹಿಸುವ ನಿಟ್ಟಿನಲ್ಲಿ ಒಂದು ವಾರದ ಕಾಲ ಮುಚ್ಚಲಾಗುವುದು ಎಂದು ತಿಳಿಸಲಾಗಿದೆ.

ಇನ್ನು ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ. ಹಕ್ಕಿ ಜ್ವರ ಕಾರಣದಿಂದ ಸದ್ಯ ಘಾಜಿಪುರ ಮಾರ್ಕೆಟ್​ ಕೂಡ ಬಂದ್ ಆಗಿದೆ. ಇನ್ನು ಮಾರ್ಚ್​ 8ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.

91 ಸಾವಿರ ಜನರಿಗೆ ಉದ್ಯೋಗಾವಕಾಶ! ನಾಲ್ಕು ಐಟಿ ಕಂಪನಿಗಳಿಂದ ಕ್ಯಾಂಪಸ್ ಸೆಲೆಕ್ಷನ್​ಗೆ ಸಿದ್ಧತೆ..

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?