AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ

ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.

ಕೆಂಪುಕೋಟೆ ಬಳಿ ಸತ್ತ ಕಾಗೆಗಳಲ್ಲಿ ಹಕ್ಕಿ ಜ್ವರ; ಜ. 26 ರವರೆಗೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅನುಮತಿ
ಕೆಂಪುಕೋಟೆ
Lakshmi Hegde
| Edited By: |

Updated on: Jan 19, 2021 | 4:37 PM

Share

ದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿರುವ ಕೆಂಪುಕೋಟೆ (Red Fort)ಯಲ್ಲಿ ಸದ್ಯ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಜ.26ರವರೆಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.

ರೆಡ್​ ಫೋರ್ಟ್​ ಬಳಿ ಕೆಲವು ದಿನಗಳ ಹಿಂದೆ 15 ಕಾಗೆಗಳು ಸತ್ತುಬಿದ್ದಿದ್ದವು. ಅವುಗಳ ಸ್ಯಾಂಪಲ್​ ತಪಾಸಣೆ ಮಾಡಿದ್ದು, ಇದೀಗ ವರದಿ ಬಂದಿದೆ. ಹಕ್ಕಿಜ್ವರದಿಂದಲೇ ಮೃತಪಟ್ಟಿದ್ದು ವರದಿಯಲ್ಲಿ ಸ್ಪಷ್ಟವಾದ ಹಿನ್ನೆಲೆಯಲ್ಲಿ ಆತಂಕ ಶುರುವಾಗಿದೆ. ಇದೇ ಕಾರಣಕ್ಕೆ ಇಂದಿನಿಂದ ಜನವರಿ 26ವರೆಗೂ ಕೆಂಪುಕೋಟೆ ಗೇಟ್​ ಮುಚ್ಚಲಿದ್ದು, ಪ್ರವಾಸಿಗರ ಭೇಟಿಗೆ ಅವಕಾಶ ಇಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಜನವರಿ 26ರಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆಯುವ ಜತೆ, ಸಶಸ್ತ್ರ ಪಡೆಗಳ ಪರೇಡ್​ ಕೂಡ ಇರುತ್ತದೆ. ಹಾಗಾಗಿ ಮುಂಜಾಗೃತಾ ಕ್ರಮ ವಹಿಸುವ ನಿಟ್ಟಿನಲ್ಲಿ ಒಂದು ವಾರದ ಕಾಲ ಮುಚ್ಚಲಾಗುವುದು ಎಂದು ತಿಳಿಸಲಾಗಿದೆ.

ಇನ್ನು ಮೃತ ಕಾಗೆಗಳ ಸ್ಯಾಂಪಲ್​ಗಳನ್ನು ಜಲಂಧರ್​ ಮತ್ತು ಭೋಪಾಲ್​ಗೆ ಟೆಸ್ಟ್​ಗೆ ಕಳಿಸಲಾಗಿತ್ತು. ದೆಹಲಿಯಲ್ಲಿ ಹಕ್ಕಿಜ್ವರ ಭೀತಿ ಹೆಚ್ಚುತ್ತಿರುವ ಬೆನ್ನಲ್ಲೇ, ಘಾಜಿಪುರ ಪಶುಮಾರುಕಟ್ಟೆಯಲ್ಲಿ ಪ್ರಾಣಿವಧೆ ನಿಷೇಧ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ. ಹಕ್ಕಿ ಜ್ವರ ಕಾರಣದಿಂದ ಸದ್ಯ ಘಾಜಿಪುರ ಮಾರ್ಕೆಟ್​ ಕೂಡ ಬಂದ್ ಆಗಿದೆ. ಇನ್ನು ಮಾರ್ಚ್​ 8ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.

91 ಸಾವಿರ ಜನರಿಗೆ ಉದ್ಯೋಗಾವಕಾಶ! ನಾಲ್ಕು ಐಟಿ ಕಂಪನಿಗಳಿಂದ ಕ್ಯಾಂಪಸ್ ಸೆಲೆಕ್ಷನ್​ಗೆ ಸಿದ್ಧತೆ..

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!