AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರೂಪಿ ಹೆಣ್ಣುಮಕ್ಕಳಿಗೆ ಮದುವೆಯಾಗಲು ವರದಕ್ಷಿಣೆ ಸಹಕಾರಿ; ಸಮಾಜಶಾಸ್ತ್ರದ ಪಠ್ಯಪುಸ್ತಕದಲ್ಲಿ ‘ವರದಕ್ಷಿಣೆ ವ್ಯವಸ್ಥೆ’ ಬಗ್ಗೆ ಪಾಠ

ಪೋಷಕರ ಆಸ್ತಿಯಲ್ಲಿ ಪಾಲನ್ನು ಹುಡುಗಿಯರು  ವರದಕ್ಷಿಣೆ ಮೂಲಕ ಪಡೆಯುತ್ತಾರೆ.  ವರದಕ್ಷಿಣೆ ಎಂಬುದು ನಮ್ಮ ಸಾಮಾಜಿಕ  ಪಾರಂಪರಿಕ ಪದ್ದತಿಯಾಗಿದ್ದು ಒಮ್ಮೆಗೇ  ಪದ್ಧತಿಗಳನ್ನು ನಿರ್ಮೂಲನೆ ಮಾಡುವುದು ಅಸಾಧ್ಯ.

ಕುರೂಪಿ ಹೆಣ್ಣುಮಕ್ಕಳಿಗೆ ಮದುವೆಯಾಗಲು ವರದಕ್ಷಿಣೆ ಸಹಕಾರಿ; ಸಮಾಜಶಾಸ್ತ್ರದ ಪಠ್ಯಪುಸ್ತಕದಲ್ಲಿ 'ವರದಕ್ಷಿಣೆ ವ್ಯವಸ್ಥೆ' ಬಗ್ಗೆ ಪಾಠ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 04, 2022 | 7:08 PM

ದೆಹಲಿ: ವರದಕ್ಷಿಣೆ ವ್ಯವಸ್ಥೆಯ (dowry system) “ಉದ್ದೇಶ ಮತ್ತು ಅನುಕೂಲಗಳು” ಎಂದು ಹೇಳಿರುವ ಪುಸ್ತಕ ಪುಟದ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಲ್ಲಿ ಪಟ್ಟಿ ಮಾಡಿರುವ ಸಂಗತಿಗಳನ್ನು ನೋಡಿ ಜನರು ಯುವಕರಿಗೆ ಮತ್ತು ಸಮಾಜಕ್ಕೆ ಇದು ಯಾವ ರೀತಿಯ ಸಂದೇಶವನ್ನು ಕಳುಹಿಸುತ್ತಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ . ಟಿಕೆ ಇಂದ್ರಾಣಿ (T K Indrani) ಅವರ ದಾದಿಯರ ಸಮಾಜಶಾಸ್ತ್ರದ ಪಠ್ಯಪುಸ್ತಕದ (Textbook of Sociology for Nurses) ಪುಟ ಇದು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ. ಈ ಪುಟದಲ್ಲಿ “ವರದಕ್ಷಿಣೆಯ ಉದ್ದೇಶ” ಎಂಬ ಉಪಶೀರ್ಷಿಕೆಯ ಅಡಿಯಲ್ಲಿ ಈ ಸಂಗತಿಗಳನ್ನು ಪಟ್ಟಿ ಮಾಡಲಾಗಿದ. ಈ ಪುಸ್ತಕವು ನರ್ಸಿಂಗ್ ವಿದ್ಯಾರ್ಥಿಗಳಿರುವ ಪುಸ್ತಕವಾಗಿದ್ದು ಭಾರತೀಯ ನರ್ಸಿಂಗ್ ಕೌನ್ಸಿಲ್ ಪಠ್ಯಕ್ರಮದ ಪ್ರಕಾರ ಬರೆಯಲಾಗಿದೆ ಎಂದು ಪುಸ್ತಕದ ಕವರ್ ಮೇಲಿದೆ. ಪುಟದ ಚಿತ್ರವನ್ನು ಹಂಚಿಕೊಂಡ ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಶಿವಸೇನಾ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಲ್ಲಿ ಈ ಪಠ್ಯವನ್ನು ತೆಗೆದುಹಾಕುವಂತೆ ಕರೆ ನೀಡಿದರು. ನಮ್ಮ ಪಠ್ಯಕ್ರಮದಲ್ಲಿ ಇದು “ನಾಚಿಕೆಗೇಡಿನ ಸಂಗತಿ” ಎಂದು ಅವರು ಒತ್ತಿ ಹೇಳಿದರು. ಪುಸ್ತಕದಲ್ಲಿ ಪಟ್ಟಿ ಮಾಡಿದ ವರದಕ್ಷಿಣೆಯ  ಪ್ರಯೋಜನದ ಪಟ್ಟಿಯಲ್ಲಿ ಪೀಠೋಪಕರಣಗಳು, ರೆಫ್ರಿಜರೇಟರ್‌ಗಳು ಮತ್ತು ವಾಹನಗಳಂತಹ ಉಪಕರಣಗಳೊಂದಿಗೆ “ಹೊಸ ಮನೆಯನ್ನು ಸಜ್ಜುಗೊಳಿಸಲು ವರದಕ್ಷಿಣೆ ಸಹಾಯಕವಾಗಿದೆ” ಎಂದು ಹೇಳುತ್ತದೆ. ಪೋಷಕರ ಆಸ್ತಿಯಲ್ಲಿ ಪಾಲನ್ನು ಹುಡುಗಿಯರು  ವರದಕ್ಷಿಣೆ ಮೂಲಕ ಪಡೆಯುತ್ತಾರೆ.  ವರದಕ್ಷಿಣೆ ಎಂಬುದು ನಮ್ಮ ಸಾಮಾಜಿಕ  ಪಾರಂಪರಿಕ ಪದ್ದತಿಯಾಗಿದ್ದು ಒಮ್ಮೆಗೇ  ಪದ್ಧತಿಗಳನ್ನು ನಿರ್ಮೂಲನೆ ಮಾಡುವುದು ಅಸಾಧ್ಯ.

ವರದಕ್ಷಿಣೆ ವ್ಯವಸ್ಥೆಯ “ಪರೋಕ್ಷ ಪ್ರಯೋಜನ” ಎಂದರೆ ಪೋಷಕರು ಈಗ ತಮ್ಮ ಹೆಣ್ಣುಮಕ್ಕಳಿಗೆ ಕಡಿಮೆ ವರದಕ್ಷಿಣೆ ನೀಡುವ ಉದ್ದೇಶದಿಂದ ಶಿಕ್ಷಣವನ್ನು ನೀಡುತ್ತಿದ್ದಾರೆ. ಪುಟದ ಕೊನೆಯ ಅಂಶವು ವರದಕ್ಷಿಣೆ ವ್ಯವಸ್ಥೆಯು “ಕುರೂಪಿ ಹುಡುಗಿಯರಿಗೆ” ಮದುವೆಯಾಗಲು ಸಹಾಯ ಮಾಡುತ್ತದೆ ಎಂದು ಹೇಳುತ್ತದೆ.

ಇಂಥಾ ಪುಸ್ತಕಗಳು ಕಾಲೇಜು ಮಟ್ಟದ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಭಾಗವಾಗಿರುವುದು ಭಯಾನಕವಾಗಿದೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ 10 ರೂಪಾಯಿ ಚಿಲ್ಲರೆಗಾಗಿ 28 ವರ್ಷದ ಬಾರ್ ಕ್ಯಾಶಿಯರ್ ಕೊಲೆ; 6 ಆರೋಪಿಗಳು ಅರೆಸ್ಟ್

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ