AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12ನೇ ತರಗತಿಯ ಪಠ್ಯ ಪುಸ್ತಕಗಳಿಂದ ಗಾಂಧಿ ಕುರಿತ ವಿಷಯ, ಆರ್‌ಎಸ್‌ಎಸ್ ಮೇಲಿನ ನಿಷೇಧ ವಿಚಾರ ಕೈಬಿಟ್ಟ ಎನ್‌ಸಿಇಆರ್‌ಟಿ

ಕಳೆದ ವರ್ಷ ತನ್ನ ಸಿಲಬಸ್ ಸುಧಾರಿಸುವ ಪ್ರಕ್ರಿಯೆ ಭಾಗವಾಗಿ, ಎನ್‌ಸಿಇಆರ್‌ಟಿ ಮತ್ತೆ ಮತ್ತೆ ಬರುವ ಮತ್ತು "ಅಪ್ರಸ್ತುತ" ಕಾರಣಗಳನ್ನು ಉಲ್ಲೇಖಿಸಿ, ಗುಜರಾತ್ ಗಲಭೆಗಳು, ಮೊಘಲ್ ನ್ಯಾಯಾಲಯಗಳು, ತುರ್ತು ಪರಿಸ್ಥಿತಿ, ಶೀತಲ ಸಮರ, ನಕ್ಸಲೀಯ ಚಳವಳಿಯ ಪಾಠಗಳನ್ನು ಒಳಗೊಂಡಂತೆ ಕೆಲವು ಪಠ್ಯ ಪುಸ್ತಕಗಳಿಂದ ಕೆಲವು ಭಾಗಗಳನ್ನು ಕೈ ಬಿಟ್ಟಿತ್ತು

12ನೇ ತರಗತಿಯ ಪಠ್ಯ ಪುಸ್ತಕಗಳಿಂದ ಗಾಂಧಿ ಕುರಿತ ವಿಷಯ, ಆರ್‌ಎಸ್‌ಎಸ್ ಮೇಲಿನ ನಿಷೇಧ ವಿಚಾರ ಕೈಬಿಟ್ಟ ಎನ್‌ಸಿಇಆರ್‌ಟಿ
ಎನ್‌ಸಿಇಆರ್‌ಟಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 05, 2023 | 6:34 PM

Share

ದೆಹಲಿ: ದೇಶದ ಕೋಮು ಪರಿಸ್ಥಿತಿಯ ಮೇಲೆ ಗಾಂಧೀಜಿ (Mahatma Gandhi) ಸಾವು ಪರಿಣಾಮ ಬೀರಿದೆ. ಗಾಂಧಿಯವರ ಹಿಂದೂ-ಮುಸ್ಲಿಂ ಐಕ್ಯತೆಯ ಅನ್ವೇಷಣೆಯು ಹಿಂದೂ ಉಗ್ರಗಾಮಿಗಳನ್ನು ಪ್ರಚೋದಿಸಿತು. ಆರ್‌ಎಸ್‌ಎಸ್‌ನಂತಹ  (RSS)ಸಂಘಟನೆಗಳನ್ನು ಸ್ವಲ್ಪ ಸಮಯದವರೆಗೆ ನಿಷೇಧಿಸಲಾಯಿತು ಎಂಬ ಪಠ್ಯಗಳು ಹೊಸ ಶೈಕ್ಷಣಿಕ ಅವಧಿಗೆ 12 ನೇ ತರಗತಿಯ ರಾಜಕೀಯ ವಿಜ್ಞಾನ (Political Science) ಪಠ್ಯಪುಸ್ತಕದಿಂದ ಕೈ ಬಿಡಲಾಗಿದೆ. ಆದಾಗ್ಯೂ, ಈ ವರ್ಷ ಯಾವುದೇ ಪಠ್ಯಕ್ರಮವನ್ನು ಕಡಿಮೆ ಮಾಡಲಾಗಿಲ್ಲ ಮತ್ತು ಕಳೆದ ವರ್ಷ ಜೂನ್‌ನಲ್ಲಿ ಪಠ್ಯಕ್ರಮವನ್ನು ಸುಧಾರಿಸಲಾಗಿದೆ ಎಂದು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (NCERT) ಹೇಳಿಕೊಂಡಿದೆ.

ಕಳೆದ ವರ್ಷ ತನ್ನ ಸಿಲಬಸ್ ಸುಧಾರಿಸುವ ಪ್ರಕ್ರಿಯೆ ಭಾಗವಾಗಿ, ಎನ್‌ಸಿಇಆರ್‌ಟಿ ಮತ್ತೆ ಮತ್ತೆ ಬರುವ ಮತ್ತು “ಅಪ್ರಸ್ತುತ” ಕಾರಣಗಳನ್ನು ಉಲ್ಲೇಖಿಸಿ, ಗುಜರಾತ್ ಗಲಭೆಗಳು, ಮೊಘಲ್ ನ್ಯಾಯಾಲಯಗಳು, ತುರ್ತು ಪರಿಸ್ಥಿತಿ, ಶೀತಲ ಸಮರ, ನಕ್ಸಲೀಯ ಚಳವಳಿಯ ಪಾಠಗಳನ್ನು ಒಳಗೊಂಡಂತೆ ಕೆಲವು ಪಠ್ಯ ಪುಸ್ತಕಗಳಿಂದ ಕೆಲವು ಭಾಗಗಳನ್ನು ಕೈ ಬಿಟ್ಟಿತ್ತು.  ಈ ಬಗ್ಗೆ ನೀಡಿದ ಟಿಪ್ಪಣಿಯಲ್ಲಿ ಮಹಾತ್ಮಾ ಗಾಂಧಿಯವರ ಬಗ್ಗೆ ಯಾವುದೇ ಉಲ್ಲೇಖಗಳಿಲ್ಲ.

ಕಳೆದ ವರ್ಷ ಸಂಪೂರ್ಣ ಸುಧಾರಿಸುವ ಪ್ರಕ್ರಿಯೆ ಮಾಡಲಾಗಿದೆ, ಈ ವರ್ಷ ಹೊಸದೇನೂ ಸಂಭವಿಸಿಲ್ಲ ಎಂದು ಎನ್‌ಸಿಇಆರ್‌ಟಿ ನಿರ್ದೇಶಕ ದಿನೇಶ್ ಸಕ್ಲಾನಿ ಹೇಳಿದ್ದಾರೆ. ಆದಾಗ್ಯೂ, ಪರಿಷ್ಕರಣೆ ಸಮಯದಲ್ಲಿ ಹೀಗೆ ಕಾಣೆಯಾದ ಆಯ್ದ ಭಾಗಗಳ ಬಗ್ಗೆ ಅವರು ಪ್ರತಿಕ್ರಿಯಿಸಲಿಲ್ಲ.

ಎನ್‌ಸಿಇಆರ್‌ಟಿ ತನ್ನ ವೆಬ್‌ಸೈಟ್‌ನಲ್ಲಿನ ಟಿಪ್ಪಣಿಯಲ್ಲಿ ಕೋವಿಡ್ ಸಾಂಕ್ರಾಮಿಕದ ದೃಷ್ಟಿಯಿಂದ, ವಿದ್ಯಾರ್ಥಿಗಳ ಮೇಲಿನ ವಿಷಯದ ಹೊರೆ ಕಡಿಮೆ ಮಾಡುವುದು ಕಡ್ಡಾಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಸಹ ವಿಷಯದ ಹೊರೆ ಕಡಿಮೆ ಮಾಡಲು ಮತ್ತು ಅನುಭವದ ಕಲಿಕೆಗೆ ಅವಕಾಶಗಳನ್ನು ಒದಗಿಸುತ್ತದೆ. ಈ ಹಿನ್ನೆಲೆಯಲ್ಲಿ, ಎನ್​​ಸಿಇಆರ್​​ಟಿ ಎಲ್ಲಾ ತರಗತಿಗಳು ಮತ್ತು ಎಲ್ಲಾ ವಿಷಯಗಳ ಪಠ್ಯಪುಸ್ತಕಗಳನ್ನು ಸುಧಾರಿಸುವ ಪ್ರಕ್ರಿಯೆ ಕೈಗೊಂಡಿದೆ ಎಂದು ಹೇಳಿದೆ.

ಇದನ್ನೂ ಓದಿ: Travel: ಅಯೋಧ್ಯೆ ರಾಮ ಮಂದಿರ, ಸರಯೂ ನದಿಯ ದರ್ಶನಕ್ಕೆ ಹೆಲಿಕಾಪ್ಟರ್ ಸೇವೆ

ಪ್ರಸ್ತುತ ಆವೃತ್ತಿಯು ಬದಲಾವಣೆಗಳನ್ನು ಮಾಡಿದ ನಂತರ ಮರು ಫಾರ್ಮ್ಯಾಟ್ ಮಾಡಲಾದ ಆವೃತ್ತಿಯಾಗಿದೆ. ಪ್ರಸ್ತುತ ಪಠ್ಯಪುಸ್ತಕಗಳು ಸುಧಾರಿಸಿದ ಪಠ್ಯಪುಸ್ತಕಗಳಾಗಿವೆ. ಇವುಗಳನ್ನು 2022-23 ಅವಧಿಗೆ ಸುಧಾರಿಸಲಾಗಿದ್ದು 2023-24 ರಲ್ಲಿಯೂ ಇದು ಮುಂದುವರಿಯುತ್ತದೆ ಎಂದು ಅದು ಹೇಳಿದೆ.

ಗಾಂಧಿ ವಿಷಯವನ್ನು ಪಠ್ಯಪುಸ್ತಕದಿಂದ ಕೈಬಿಡಬಾರದಿತ್ತು: ಸಕ್ಲಾನಿ

ಮಹಾತ್ಮಾ ಗಾಂಧಿಯವರ ಹತ್ಯೆಗೆ ಸಂಬಂಧಿಸಿದ ಕೆಲವು ವಿಷಯವನ್ನು ಯಾವುದೇ ಅಧಿಸೂಚನೆಯಿಲ್ಲದೆ ಪಠ್ಯಪುಸ್ತಕಗಳಿಂದ ಕೈಬಿಡಲಾಗಿದೆ ಎಂಬ ವಿವಾದ ಬಗ್ಗೆ ಎನ್‌ಸಿಇಆರ್‌ಟಿ ಮುಖ್ಯಸ್ಥ ದಿನೇಶ್ ಸಕ್ಲಾನಿ ಬುಧವಾರ ಪ್ರತಿಕ್ರಿಯಿಸಿದ್ದಾರೆ,. ಕಳೆದ ವರ್ಷ ಪಠ್ಯಕ್ರಮ ಸುಧಾರಿಸುವ ಪ್ರಕ್ರಿಯೆಯಲ್ಲಿ ಕೆಲವು ಭಾಗ ಕೈಬಿಡುವ ಬಗ್ಗೆ  ಘೋಷಿಸದಿರುವುದು ಅಜಾಗರೂಕತೆ ಎಂದಿದ್ದಾರೆ. ಸುಧಾರಣೆ ಸಮಯದಲ್ಲಿ ಕೆಲವೊಂದು ಪಠ್ಯಭಾಗಗಳಿಗೆ ಕೊಕ್ ನೀಡಿದ್ದರೂ ಎಲ್ಲಾ ಅಗತ್ಯ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ ಸಕ್ಲಾನಿ ಹೇಳಿದ್ದು. ಅದೇ ವೇಳೆ ಮಹಾತ್ಮಾ ಗಾಂಧಿಯವರ ಹತ್ಯೆ ವಿಚಾರವನ್ನು  ಪಠ್ಯಪುಸ್ತಕದಿಂದ ತೆಗೆದುಹಾಕಬಾರದಿತ್ತು ಎಂದಿದ್ದಾರೆ. ಹೊಸ ಪಠ್ಯಪುಸ್ತಕಗಳಲ್ಲಿ ಮಾಡಲಾದ ಎಲ್ಲಾ ಬದಲಾವಣೆಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Wed, 5 April 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ