AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಣೆ: ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥ

ಬಿಸಿಯೂಟ ಸೇವಿಸಿದ 109 ವಿದ್ಯರ್ಥಿಗಳು ಅಸ್ವಸ್ಥರಾಗಿರುವ ಘಟನೆ ಥಾಣೆಯಲ್ಲಿ ನಡೆದಿದೆ. 63 ಬಾಲಕಿಯರು ಸೇರಿದಂತೆ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಥಾಣೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಡೆದ ಸಂತ ಗಡ್ಗೆ ಮಹಾರಾಜ್ ಪ್ರಾಥಮಿಕ ಮತ್ತು ಮಾಧ್ಯಮಿಕ ಆಶ್ರಮ ಶಾಲೆ (ಬುಡಕಟ್ಟು ಮಕ್ಕಳ ವಸತಿ ಶಾಲೆಗಳು), ಮುಂಬೈನ ಹೊರವಲಯದಲ್ಲಿರುವ ಶಹಾಪುರ ತಾಲೂಕಿನ ಭಟ್ಸಾಯಿಯಲ್ಲಿದೆ. ಶಾಲೆಯಲ್ಲಿ 1 ರಿಂದ 10 ನೇ ತರಗತಿಯ 200 ವಿದ್ಯಾರ್ಥಿಗಳು ಇದ್ದಾರೆ.

ಥಾಣೆ: ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥ
ಆಹಾರImage Credit source: News 18
ನಯನಾ ರಾಜೀವ್
|

Updated on: Feb 01, 2024 | 7:45 AM

Share

ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಥಾಣೆಯಲ್ಲಿ ನಡೆದಿದೆ. 63 ಬಾಲಕಿಯರು ಸೇರಿದಂತೆ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಥಾಣೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಡೆದ ಸಂತ ಗಡ್ಗೆ ಮಹಾರಾಜ್ ಪ್ರಾಥಮಿಕ ಮತ್ತು ಮಾಧ್ಯಮಿಕ ಆಶ್ರಮ ಶಾಲೆ (ಬುಡಕಟ್ಟು ಮಕ್ಕಳ ವಸತಿ ಶಾಲೆಗಳು), ಮುಂಬೈನ ಹೊರವಲಯದಲ್ಲಿರುವ ಶಹಾಪುರ ತಾಲೂಕಿನ ಭಟ್ಸಾಯಿಯಲ್ಲಿದೆ. ಶಾಲೆಯಲ್ಲಿ 1 ರಿಂದ 10 ನೇ ತರಗತಿಯ 200 ವಿದ್ಯಾರ್ಥಿಗಳು ಇದ್ದಾರೆ.

ನಾಲ್ವರು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲರನ್ನೂ ಚಿಕಿತ್ಸೆ ನಂತರ ಶಹಾಪುರದ ಉಪವಿಭಾಗದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಶಹಾಪುರ ತಹಸೀಲ್ದಾರ್ ಕೋಮಲ್ ಠಾಕೂರ್ ಪಿಟಿಐಗೆ ತಿಳಿಸಿದ್ದಾರೆ.

ಮಧ್ಯಾಹ್ನದ ಊಟಕ್ಕಾಗಿ ವಿದ್ಯಾರ್ಥಿಗಳಿಗೆ ಆಹಾರ (ಪಲಾವ್) ಮತ್ತು ಸಿಹಿ ಖಾದ್ಯವನ್ನು (ಗುಲಾಬ್ ಜಾಮೂನ್) ನೀಡಲಾಗಿತ್ತು, 109 ಜನರಲ್ಲಿ  63 ಹುಡುಗಿಯರು ಮತ್ತು 46 ಹುಡುಗರು ವಾಂತಿ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ ಎಂಟು ಮಕ್ಕಳು ಅಸ್ವಸ್ಥ

ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸ್ಥಿತಿಗತಿ ವಿಚಾರಿಸಿದರು. ಪೀಡಿತ ವಿದ್ಯಾರ್ಥಿಗಳ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಸಹ ವೈದ್ಯಕೀಯ ಸೌಲಭ್ಯದ ಹೊರಗೆ ಜಮಾಯಿಸಿದರು, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರನ್ನು ನಿಯೋಜಿಸಲಾಗಿದೆ.

ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಠಾಕೂರ್ ಹೇಳಿದರು. ಪಲಾವ್ ಮತ್ತು ಗುಲಾಬ್ ಜಾಮೂನ್‌ ಎಲ್ಲಿಂದ ತಂದಿದ್ದಾರೆ ಎಂಬುದು ತಿಳಿದಿಲ್ಲ. ಘಟನೆಯ ಕುರಿತು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?