AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕತ್ತು ಸೀಳಿ, 6ನೇ ಮಹಡಿಯ ಕಿಟಕಿಯಿಂದ ಕೆಳಗೆಸೆದ ಪಾಪಿ

ಬಾಲಕಿಗೆ ಆಟಿಕೆಗಳ ಆಮಿಷವೊಡ್ಡಿ ಅಪಾರ್ಟ್​ಮೆಂಟ್​ಗೆ ಕರೆದೊಯ್ದು ಅತ್ಯಾಚಾರವೆಸಗಿ, ಕೊಲೆ ಮಾಡಿ ಬಳಿಕ ಅಪಾರ್ಟ್​ಮೆಂಟ್​ನ ಶೌಚಾಲಯದಿಂದ ಕೆಳಗೆ ಎಸೆದಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದು ಬಯಲಾಗಿದೆ. ಗಂಟಲನ್ನು ಹರಿತವಾದ ಆಯುಧದಿಂದ ಸೀಳಲಾಗಿದೆ. ಮುಂಬ್ರಾದ ಹತ್ತಿರದ ಠಾಕೂರ್ಪಾಡ ಪ್ರದೇಶದ ನಿವಾಸಿಯು ಪಕ್ಕದ ಕಟ್ಟಡದಲ್ಲಿ ವಾಸಿಸುತ್ತಿದ್ದ ಬಾಲಕಿಗೆ ಆಟಿಕೆಗಳನ್ನು ನೀಡುವ ಭರವಸೆಯೊಡ್ಡಿ ಕರೆದೊಯ್ದು ಕೃತ್ಯವೆಸಗಿದ್ದಾನೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕತ್ತು ಸೀಳಿ, 6ನೇ ಮಹಡಿಯ ಕಿಟಕಿಯಿಂದ ಕೆಳಗೆಸೆದ ಪಾಪಿ
ಕ್ರೈಂ
ನಯನಾ ರಾಜೀವ್
|

Updated on: Apr 09, 2025 | 2:03 PM

Share

ಥಾಣೆ, ಏಪ್ರಿಲ್ 9: ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಿವೆ. 20 ವರ್ಷದ ಯುವಕನೊಬ್ಬ 10 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿ, ಕತ್ತು ಸೀಳಿ ಕೊಲೆ(Murder) ಮಾಡಿ 6ನೇ ಮಹಡಿಯ ಕಿಟಕಿಯಿಂದ ಕೆಳಗೆಸೆದಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಆಕೆಯ ಶವವನ್ನು ಅಪಾರ್ಟ್​ಮೆಂಟ್​ನ ಶೌಚಾಲಯದ ಕಿಟಕಿಯಿಂದ ಕೆಳಗೆ ಎಸೆದಿದ್ದಾನೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಜೊತೆಗೆ ಕೊಲೆ ಮತ್ತು ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದರು.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದು ಬಯಲಾಗಿದೆ. ಗಂಟಲನ್ನು ಹರಿತವಾದ ಆಯುಧದಿಂದ ಸೀಳಲಾಗಿದೆ. ಮುಂಬ್ರಾದ ಹತ್ತಿರದ ಠಾಕೂರ್ಪಾಡ ಪ್ರದೇಶದ ನಿವಾಸಿಯು ಪಕ್ಕದ ಕಟ್ಟಡದಲ್ಲಿ ವಾಸಿಸುತ್ತಿದ್ದ ಬಾಲಕಿಗೆ ಆಟಿಕೆಗಳನ್ನು ನೀಡುವ ಭರವಸೆಯೊಡ್ಡಿ ಕರೆದೊಯ್ದು ಕೃತ್ಯವೆಸಗಿದ್ದಾನೆ.

ಆಕೆಯನ್ನು ಅಪಾರ್ಟ್​ಮೆಂಟ್​ನ 6ನೇ ಫ್ಲೋರ್​ಗೆ ಕರೆದುಕೊಂಡು ಹೋಗಿ ಅಲ್ಲಿ ಬಲಾತ್ಕಾರ ನಡೆಸಿದ್ದಾನೆ, ಬಳಿಕ ಕತ್ತು ಸೀಳಿ, ಶೌಚಾಲಯದ ಕಿಟಕಿಯಿಂದ ಕೆಳಗೆ ದೇಹವನ್ನು ಎಸೆದಿದ್ದಾನೆ. ಪೊಲೀಸ್ ತನಿಖಾ ತಂಡವು ಕಟ್ಟಡದ ಪ್ರತಿಯೊಂದು ಫ್ಲಾಟ್ ಅನ್ನು ಪರಿಶೀಲಿಸಿದಾಗ ಆ ವ್ಯಕ್ತಿಯ ಮನೆಯಲ್ಲಿ ಸ್ನಾನಗೃಹದ ಕಿಟಕಿ ತೆರೆದಿರುವುದು ಕಂಡುಬಂದಿದೆ, ಅಲ್ಲಿಂದ ಅವನು ಹುಡುಗಿಯನ್ನು ತಳ್ಳಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ
Image
ಮೀರತ್​​ನಲ್ಲಿ ಗಂಡನನ್ನು ಕೊಂದು ಡ್ರಮ್​ನಲ್ಲಿ ತುಂಬಿಸಿದ್ದವಳು ಗರ್ಭಿಣಿ!
Image
ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತೆಗೆ ಚಾಕುವಿನಿಂದ ಇರಿದ ಯುವಕ
Image
ನಗ್ನ ವಿಡಿಯೋ ಕರೆ ಮಾಡುವಂತೆ ಒತ್ತಾಯ, ಅನ್ಯ ಕೋಮಿನ ಯುವಕನಿಗೆ ಬಿತ್ತು ಗೂಸಾ
Image
13 ವರ್ಷದ ಕ್ಯಾನ್ಸರ್​ ರೋಗಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ

ಮತ್ತಷ್ಟು ಓದಿ: Video: ಗರ್ಭಿಣಿ ಪತ್ನಿಗೆ ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಪತಿಯಿಂದ ಹಲ್ಲೆ

ಕಟ್ಟಡದ ನಿವಾಸಿಯಲ್ಲದಿದ್ದರೂ ಆಕೆ ಅಲ್ಲಿಗೆ ಹೇಗೆ ಬಂದಳು ಎಂಬುದರ ಕುರಿತು ಮೊದಲು ತನಿಖೆ ಆರಂಭಿಸಲಾಗಿತ್ತು. ಮೇಲಿಂದ ಕೆಳಗೆ ಏನೋ ಬಿದ್ದಿರುವ ಶಬ್ದವೂ ಕೂಡ ಅಕ್ಕಪಕ್ಕದಲ್ಲಿದ್ದವರಿಗೆ ಕೇಳಿಸಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಪಕ್ಕದ ಮನೆಯ ಕಾರಿನಲ್ಲಿ ಶವವಿಟ್ಟ ಸಂಬಂಧಿ ವ್ಯಕ್ತಿಯೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ(Murder) ಮಾಡಿ, ಪಕ್ಕದ ಮನೆಯ ಕಾರಿನಲ್ಲಿ ಶವವಿಟ್ಟಿರುವ ಘಟನೆ ಛತ್ತೀಸ್​ಗಢದ ದುರ್ಗ್​ನಲ್ಲಿ ನಡೆದಿದೆ. ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅತ್ಯಾಚಾರ ಮಾಡಿ ಕೊಲೆ ಮಾಡಿ, ಶವವನ್ನು ಕಾರಿನಲ್ಲಿ ಬಚ್ಚಿಟ್ಟು ಬೀಗ ಹಾಕಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ನವರಾತ್ರಿ ಹಬ್ಬದ ಭಾಗವಾಗಿ ಆಯೋಜಿಸಲಾಗಿದ್ದ ಆಚರಣೆಯ ನಂತರ ಏಪ್ರಿಲ್ 5 ರಂದು ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು. ಕನ್ಯಾ ಭೋಜನದಲ್ಲಿ ಭಾಗವಹಿಸಲು ಮಗು ತನ್ನ ಅಜ್ಜಿಯ ಮನೆಗೆ ಭೇಟಿ ನೀಡಿತ್ತು, ಆದರೆ ಮನೆಗೆ ಹಿಂತಿರುಗಲಿಲ್ಲ.

ಆಕೆಯ ಕುಟುಂಬವು ಪೊಲೀಸರಿಗೆ ನಾಪತ್ತೆ ದೂರು ನೀಡುವ ಮೊದಲು ತೀವ್ರ ಹುಡುಕಾಟವನ್ನು ಪ್ರಾರಂಭಿಸಿತ್ತು ಎಂದು ದುರ್ಗ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಖನಂದನ್ ರಾಥೋಡ್ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!