AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರವೆಸಗಿ ಬಲವಂತದಿಂದ ಮದುವೆಯಾಗಿ ಬಾಣಲೆ, ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಗಂಡ

ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಬಲವಂತವಾಗಿ ಮದುವೆಯಾದ ನಂತರ ಗಂಡ ಆಕೆಯನ್ನು ಬಿಸಿ ಬಾಣಲೆ, ಸಿಗರೇಟ್ ತುಂಡುಗಳಿಂದ ಸುಟ್ಟ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. 27 ವರ್ಷದ ಮಹಿಳೆಯನ್ನು 2021ರಲ್ಲಿ ಫೇಸ್‌ಬುಕ್‌ನಲ್ಲಿ ಮೊದಲು ಭೇಟಿಯಾದ ವ್ಯಕ್ತಿ ನಂತರ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ. ಬಳಿಕ ಆಕೆಯನ್ನು ಬಲವಂತವಾಗಿ ಮದುವೆಯನ್ನೂ ಆಗಿದ್ದ.

ಅತ್ಯಾಚಾರವೆಸಗಿ ಬಲವಂತದಿಂದ ಮದುವೆಯಾಗಿ ಬಾಣಲೆ, ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಗಂಡ
Woman Harassment
ಸುಷ್ಮಾ ಚಕ್ರೆ
|

Updated on: Jan 14, 2025 | 6:46 PM

Share

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಬ್ಲ್ಯಾಕ್‌ಮೇಲ್ ಮಾಡಿ, ಮದುವೆಯನ್ನೂ ಮಾಡಿಕೊಂಡು ಚಿತ್ರಹಿಂಸೆ ನೀಡಿದ್ದಾನೆ. ಆರೋಪಿಯು ಸಾಮಾಜಿಕ ಮಾಧ್ಯಮದಲ್ಲಿ ಮೊದಲು ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ಬಲವಂತದಿಂದ ಮದುವೆಯಾಗಿ ಆಕೆಯ ದೇಹವನ್ನು ಬಿಸಿ ಬಾಣಲೆ ಮತ್ತು ಸಿಗರೇಟ್ ತುಂಡುಗಳನ್ನು ಸುಟ್ಟುಹಾಕಿದ್ದಾನೆ.

ಆರೋಪಿಯ ತಾಯಿ ಸೇರಿದಂತೆ ಇತರ ಐವರು ಕುಟುಂಬಸ್ಥರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಆತನ ವಿರುದ್ಧ ದೂರು ದಾಖಲಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಉಲ್ಹಾಸ್‌ನಗರದಲ್ಲಿ ವಾಸಿಸುತ್ತಿದ್ದ ಆರೋಪಿ 2021ರಲ್ಲಿ ಫೇಸ್‌ಬುಕ್‌ನಲ್ಲಿ ಆ ಮಹಿಳೆ ಸ್ನೇಹ ಬೆಳೆಸಿದ್ದ. ನಂತರ ಆ ವ್ಯಕ್ತಿ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ

ತನ್ನ ದುರಂತ ಅನುಭವವನ್ನು ಆ ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ. ತನ್ನ ಗಂಡ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಷ್ಟೇ ಅಲ್ಲದೆ ಅದನ್ನು ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು 27 ವರ್ಷದ ಮಹಿಳೆ ಆರೋಪಿಸಿದ್ದಾರೆ. ನಂತರ ಆ ವ್ಯಕ್ತಿ ಆ ವಿಡಿಯೋ ತೋರಿಸಿ ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ.

ನಂತರ ಆ ವ್ಯಕ್ತಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿ, ಬಲವಂತದಿಂದ ಮಧ್ಯಪ್ರದೇಶದ ಗ್ವಾಲಿಯರ್‌ಗೆ ಕರೆದೊಯ್ದಿದ್ದಾನೆ. ಅಲ್ಲಿಯೂ ದೌರ್ಜನ್ಯ ನಿಲ್ಲಲಿಲ್ಲ. ಆರೋಪಿ ತನ್ನ ತಾಯಿಯೊಂದಿಗೆ ಸೇರಿ ಸಂತ್ರಸ್ತೆಯ ಕೂದಲು ಮತ್ತು ಹುಬ್ಬುಗಳನ್ನು ಕತ್ತರಿಸಿ, ಯಾವಾಗಲೂ ಮನೆಯೊಳಗೆ ಬಂಧಿಸಿಟ್ಟಿದ್ದಾನೆ. ಬಳಿಕ ಆತ ಆಕೆಯನ್ನು ಸಿಗರೇಟ್ ತುಂಡುಗಳಿಂದ ಸುಟ್ಟುಹಾಕಿದ್ದಾನೆ ಮತ್ತು ಬಿಸಿ ಬಾಣಲೆಯಿಂದ ಸುಟ್ಟಿದ್ದಾನೆ. ಇದರಿಂದಾಗಿ ಆಕೆಯ ದೇಹದ ಮೇಲೆ ವಿವಿಧ ಗಾಯಗಳಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!