AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಬದಲು ರೇಬಿಸ್ ಇಂಜೆಕ್ಷನ್ ನೀಡಿದ ಆಸ್ಪತ್ರೆ ಸಿಬ್ಬಂದಿ!; ವೈದ್ಯೆ ಅಮಾನತು

ಮಹಾರಾಷ್ಟ್ರದ ಥಾಣೆಯ ಜಿಲ್ಲೆಯ ಮೆಡಿಕಲ್ ಸೆಂಟರ್​ನಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಆ್ಯಂಟಿ ರೇಬಿಸ್ ಲಸಿಕೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ ನಿರ್ಲಕ್ಷ್ಯ ವಹಿಸಿದ ವೈದ್ಯ ಹಾಗೂ ನರ್ಸ್​ ಅನ್ನು ಅಮಾನತು ಮಾಡಲಾಗಿದೆ.

ಕೊರೊನಾ ಲಸಿಕೆ ಬದಲು ರೇಬಿಸ್ ಇಂಜೆಕ್ಷನ್ ನೀಡಿದ ಆಸ್ಪತ್ರೆ ಸಿಬ್ಬಂದಿ!; ವೈದ್ಯೆ ಅಮಾನತು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 29, 2021 | 2:45 PM

Share

ಥಾಣೆ: ಭಾರತದಲ್ಲಿ ಉಚಿತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ದೇಶದ ಬಹುತೇಕ ಜನರು ಈಗಾಗಲೇ ಲಸಿಕೆ ಪಡೆದಿದ್ದಾರೆ. ಆದರೆ, ಮಹಾರಾಷ್ಟ್ರದ ಥಾಣೆಯಲ್ಲಿ ವ್ಯಕ್ತಿಯೋರ್ವನಿಗೆ ಕೊವಿಡ್ ಲಸಿಕೆ ಬದಲು ಆ್ಯಂಟಿ ರೇಬಿಸ್ ಲಸಿಕೆ ನೀಡಲಾಗಿದೆ. ಇದರಿಂದ ಆ ಆಸ್ಪತ್ರೆಯ ವೈದ್ಯರು ಮತ್ತು ನರ್ಸ್​ಗಳನ್ನು ಅಮಾನತು ಮಾಡಲಾಗಿದೆ.

ಮಹಾರಾಷ್ಟ್ರದ ಥಾಣೆಯ ಜಿಲ್ಲೆಯ ಮೆಡಿಕಲ್ ಸೆಂಟರ್​ನಲ್ಲಿ ಈ ಎಡವಟ್ಟು ನಡೆದಿದೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಆ್ಯಂಟಿ ರೇಬಿಸ್ ಲಸಿಕೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ ನಿರ್ಲಕ್ಷ್ಯ ವಹಿಸಿದ ವೈದ್ಯ ಹಾಗೂ ನರ್ಸ್​ ಅನ್ನು ಅಮಾನತು ಮಾಡಲಾಗಿದೆ. ಇಲ್ಲಿನ ಸ್ಥಳೀಯರಾದ ರಾಜಕುಮಾರ್ ಯಾದವ್ ಕಲ್ವಾದಲ್ಲಿರುವ ಸರ್ಕಾರಿ ಮೆಡಿಕಲ್ ಸೆಂಟರ್​ನಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ತೆರಳಿದ್ದರು. ಆದರೆ, ಅಲ್ಲಿ ಆ್ಯಂಟಿ ರೇಬಿಸ್ ಲಸಿಕೆಯ ಕ್ಯೂನಲ್ಲಿ ನಿಂತ ಅವರಿಗೆ ವೈದ್ಯರು ಯಾವ ಪ್ರಶ್ನೆಯನ್ನೂ ಕೇಳದೆ ಆ್ಯಂಟಿ ರೇಬಿಸ್ ಲಸಿಕೆ ಹಾಕಿದ್ದಾರೆ.

ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡ ಬಳಿಕ ಎರಡನೇ ಲಸಿಕೆಗೆ ಯಾವಾಗ ಬರಬೇಕೆಂದು ಕೇಳಿದಾಗ ಅಲ್ಲಿನ ಸಿಬ್ಬಂದಿ ಆತನಿಗೆ ನೀಡಿದ್ದು ರೇಬಿಸ್ ಲಸಿಕೆ ಎಂದು ತಿಳಿಸಿದ್ದಾರೆ. ಇದರಿಂದ ಆಘಾತಗೊಂಡ ಆ ವ್ಯಕ್ತಿ ಬೇರೆ ವೈದ್ಯರ ಬಳಿ ಹೋಗಿ ವಿಷಯ ತಿಳಿಸಿದ್ದಾರೆ. ಆ ವ್ಯಕ್ತಿ ಆರೋಗ್ಯದಿಂದಿದ್ದು, ಯಾವುದೇ ಅಡ್ಡಪರಿಣಾಮಗಳು ಉಂಟಾಗಿಲ್ಲ. ಆದರೆ, ಯಾವ ಲಸಿಕೆ ಹಾಕಿಸಿಕೊಳ್ಳಲು ಬಂದಿದ್ದಾರೆ ಎಂಬುದನ್ನು ವಿಚಾರಿಸದೆ ನಿರ್ಲಕ್ಷ್ಯ ತೋರಿದ್ದಕ್ಕೆ ವೈದ್ಯರನ್ನು ಅಮಾನತು ಮಾಡಲಾಗಿದೆ.

ತನಗೆ ತಪ್ಪು ಲಸಿಕೆ ನೀಡಿದ ಬಗ್ಗೆ ರಾಜಕುಮಾರ್ ಯಾದವ್ ಆಸ್ಪತ್ರೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಜೆಕ್ಷನ್ ನೀಡಿದ ವೈದ್ಯೆ ಮತ್ತು ನರ್ಸ್​ ಅನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಮೈಲಿಗಲ್ಲು ಸಾಧನೆ ಸನಿಹದಲ್ಲಿ ಭಾರತ: ದೇಶದಲ್ಲಿ ಕೊವಿಡ್ ವಿರುದ್ಧ ಸಂಪೂರ್ಣ ಲಸಿಕೆ ಪಡೆದವರು ಸುಮಾರು ಶೇ 25

Covaxin Vaccine: ವಿಶ್ವ ಆರೋಗ್ಯ ಸಂಸ್ಥೆಯಿಂದ ಕೋವ್ಯಾಕ್ಸಿನ್ ಲಸಿಕೆ ಅನುಮತಿಗೆ ಪ್ರಯತ್ನಿಸುತ್ತಿದ್ದೇವೆ; ಭಾರತ್ ಬಯೋಟೆಕ್ ಸ್ಪಷ್ಟನೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?