AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಚ್ಛತಾ ಕಾಮಗಾರಿ ಪರಿಶೀಲನೆಗೆ ಉಟ್ಟ ಸೀರೆಯಲ್ಲೇ ಮ್ಯಾನ್​ಹೋಲ್​ಗೆ ಇಳಿದ ಪಾಲಿಕೆ ಅಧಿಕಾರಿ: ವಿಡಿಯೋ ವೈರಲ್

ಮ್ಯಾನ್​ಹೋಲ್​ಗೆ ಮರದ ಏಣಿಯೊಂದನ್ನು ಇರಿಸಿ ಉಟ್ಟ ಸೀರೆಯಲ್ಲೇ ಕೆಳಕ್ಕಿಳಿದ ಸುವಿಧಾ, ಒಳಗೆ ಏನೇನು ಕೆಲಸ ನಡೆಯುತ್ತಿದೆ ಎಂದು ಫೋಟೋ ತೆಗೆದು, ಅಲ್ಲಿದ್ದ ಕಾರ್ಮಿಕರ ಬಳಿ ಮಾತನಾಡಿ ಬಳಿಕ ಹೊರಬಂದಿದ್ದಾರೆ.

ಸ್ವಚ್ಛತಾ ಕಾಮಗಾರಿ ಪರಿಶೀಲನೆಗೆ ಉಟ್ಟ ಸೀರೆಯಲ್ಲೇ ಮ್ಯಾನ್​ಹೋಲ್​ಗೆ ಇಳಿದ ಪಾಲಿಕೆ ಅಧಿಕಾರಿ: ವಿಡಿಯೋ ವೈರಲ್
ಮ್ಯಾನ್​ಹೋಲ್​ಗೆ ಇಳಿದ ಮಹಿಳಾ ಅಧಿಕಾರಿ
TV9 Web
| Edited By: |

Updated on:Jun 11, 2021 | 12:30 PM

Share

ಮುಂಬೈ: ಸ್ವಚ್ಛತಾ ಕಾಮಗಾರಿಯ ವೇಳೆ ಕಾರ್ಮಿಕರನ್ನು ಮ್ಯಾನ್​ಹೋಲ್​ಗೆ ದಬಾಯಿಸಿ ಇಳಿಸುವ ಅಧಿಕಾರಿಗಳನ್ನು, ಹಣದ ಆಮಿಷ ತೋರಿಸಿ ಇಳಿಸುವ ಅಧಿಕಾರಿಗಳನ್ನು ಸಾಧಾರಣವಾಗಿ ನೋಡಿರುತ್ತೀರಿ ಅಥವಾ ಕಡೇಪಕ್ಷ ಅಂತಹ ಘಟನೆಗಳ ಬಗ್ಗೆ ವರದಿಗಳನ್ನು ಓದಿರುತ್ತೀರಿ. ಆದರೆ, ಇಲ್ಲೊಬ್ಬರು ಅಧಿಕಾರಿ ಇದಕ್ಕೆ ಅಪವಾದವೆಂಬಂತೆ ನಡೆದುಕೊಂಡಿದ್ದು, ಅವರ ವಿಡಿಯೋ ವೈರಲ್ ಆಗುತ್ತಿದೆ. ಮ್ಯಾನ್​ಹೋಲ್​ನಲ್ಲಿ ಸ್ವಚ್ಛತಾ ಕೆಲಸ ನಡೆಯುತ್ತಿದ್ದ ವೇಳೆ ಅಲ್ಲಿಗೆ ಬಂದ ಮಹಿಳಾ ಅಧಿಕಾರಿ ಸ್ವತಃ ಮ್ಯಾನ್​ಹೋಲ್ ಒಳಕ್ಕೆ ಇಳಿದಿದ್ದಾರೆ. ಉಟ್ಟ ಸೀರೆಯಲ್ಲೇ ಕೆಳಕ್ಕಿಳಿದ ಅವರು ಕಾರ್ಮಿಕರೊಂದಿಗೆ ಕೆಲ ಹೊತ್ತು ಮಾತನಾಡಿ, ಸ್ವಚ್ಛತಾ ಕೆಲಸ ಪರಿಶೀಲನೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಈಗ ವೈರಲ್​ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಘಟನೆ ಮಹಾರಾಷ್ಟ್ರದ ಭಿವಾಂಡಿ, ನಿಜಾಮ್​ಪುರ್ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿದೆ. ಪಾಲಿಕೆ ವ್ಯಾಪ್ತಿಯ ಸ್ವಚ್ಛತಾ ಕಾರ್ಯಗಳನ್ನು ನೋಡಿಕೊಳ್ಳುವ ಅಧಿಕಾರಿ ಸುವಿಧಾ ಚವಣ್ ಮ್ಯಾನ್​ಹೋಲ್​ಗೆ ಇಳಿದು ಸುದ್ದಿಯಾಗಿದ್ದಾರೆ. ಮ್ಯಾನ್​ಹೋಲ್​ಗೆ ಮರದ ಏಣಿಯೊಂದನ್ನು ಇರಿಸಿ ಉಟ್ಟ ಸೀರೆಯಲ್ಲೇ ಕೆಳಕ್ಕಿಳಿದ ಸುವಿಧಾ, ಒಳಗೆ ಏನೇನು ಕೆಲಸ ನಡೆಯುತ್ತಿದೆ ಎಂದು ಫೋಟೋ ತೆಗೆದು, ಅಲ್ಲಿದ್ದ ಕಾರ್ಮಿಕರ ಬಳಿ ಮಾತನಾಡಿ ಬಳಿಕ ಹೊರಬಂದಿದ್ದಾರೆ.

ಈ ಮಹಿಳಾ ಅಧಿಕಾರಿಯು ಪಾಲಿಕೆ ವ್ಯಾಪ್ತಿಯ ವಿವಿಧೆಡೆ ಸ್ವಚ್ಛತಾ ಕಾರ್ಯಗಳ ಬಗ್ಗೆ ಹೀಗೆಯೇ ನಿಗಾ ವಹಿಸುತ್ತಿದ್ದು, ಮುಂಗಾರು ಪ್ರಾರಂಭವಾಗುತ್ತಿರುವುದರಿಂದ ಅವ್ಯವಸ್ಥೆ ಆಗದಂತೆ ನೋಡಿಕೊಳ್ಳುತ್ತಿದ್ದಾರೆ. ಇವರು ಇಷ್ಟೊಂದು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂತಹ ಅಧಿಕಾರಿಗಳು ಇರಬೇಕು ಎಂದು ಹೇಳುತ್ತಿದ್ದಾರೆ.

ಸುವಿಧಾ ಚವಣ್ ಅವರಿಗೆ ಮುಂಗಾರು ಪೂರ್ವ ಸ್ವಚ್ಛತಾ ಕಾರ್ಯದ ಉಸ್ತುವಾರಿ ವಹಿಸಲಾಗಿದ್ದು, ಮಳೆಗಾಲ ಶುರುವಾದ ನಂತರ ಚರಂಡಿ ಕಟ್ಟುವುದು, ಒಳಚರಂಡಿ ಮುಚ್ಚಿಕೊಳ್ಳುವುದು ಸೇರಿದಂತೆ ಯಾವ ಅವ್ಯವಸ್ಥೆಗಳೂ ಜರುಗಬಾರದೆಂದು ಮುಂಜಾಗ್ರತಾ ಕ್ರಮವಾಗಿ ತಾವೇ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

MUNCIPAL OFFICER ENTERS MANHOLE IN SAREE

ಮ್ಯಾನ್​ಹೋಲ್​ಗೆ ಇಳಿದು ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಅಧಿಕಾರಿ

ಅವರು ಸೀರೆಯುಟ್ಟು ಮ್ಯಾನ್​ಹೋಲ್​ಗೆ ಇಳಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದ್ದಂತೆಯೇ ಜನರು ಸುವಿಧಾ ಅವರ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದಾರೆ. ಜತೆಗೆ, ಇಂತಹ ಅಧಿಕಾರಿಗಳಿದ್ದರೆ ಕಾರ್ಮಿಕರ ಸಮಸ್ಯೆ ಹಾಗೂ ಜನರ ಸಮಸ್ಯೆ ಎರಡಕ್ಕೂ ಸುಲಭ ಪರಿಹಾರ ಒದಗಿಸುವುದು ಸಾಧ್ಯ. ಇವರನ್ನು ನೋಡಿ ಎಲ್ಲಾ ಅಧಿಕಾರಿಗಳು ಕಲಿಯಬೇಕಾಗಿದ್ದು ಬಹಳ ಇದೆ ಎಂದು ಹೊಗಳಿದ್ದಾರೆ.

ಇದನ್ನೂ ಓದಿ: ಮಂಡ್ಯ; ಮ್ಯಾನ್‌ಹೋಲ್‌ನಲ್ಲಿ ಸಿಲುಕಿ ಅಸ್ವಸ್ಥರಾಗಿದ್ದ ಮೂವರು ಕಾರ್ಮಿಕರ ಸಾವು 

ರಾಮನಗರದಲ್ಲಿ ಮ್ಯಾನ್‌ಹೋಲ್‌ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಅಶ್ವತ್ಥ್ ನಾರಾಯಣ

Published On - 12:08 pm, Fri, 11 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ