AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರೊಂದಿಗಿನ ಎನ್​ಡಿಎ ಬಾಂಧವ್ಯವನ್ನು ಸೂಚಿಸುತ್ತದೆ; ಬಿಎಂಸಿ ಚುನಾವಣೆಯ ಗೆಲುವಿಗೆ ಪ್ರಧಾನಿ ಮೋದಿ ಧನ್ಯವಾದ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ಸಾಧಿಸಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಮಹಾರಾಷ್ಟ್ರದ 29 ಪುರಸಭೆಗಳ ಚುನಾವಣೆಯಲ್ಲಿ ಮಹಾಯುತಿಯ ವಿಜಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಇದು NDA ಜೊತೆಗಿನ ಮಹಾರಾಷ್ಟ್ರದ ಜನರ ಬಾಂಧವ್ಯವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಜನರೊಂದಿಗಿನ ಎನ್​ಡಿಎ ಬಾಂಧವ್ಯವನ್ನು ಸೂಚಿಸುತ್ತದೆ; ಬಿಎಂಸಿ ಚುನಾವಣೆಯ ಗೆಲುವಿಗೆ ಪ್ರಧಾನಿ ಮೋದಿ ಧನ್ಯವಾದ
Pm Modi With Mahayuti Leaders
ಸುಷ್ಮಾ ಚಕ್ರೆ
|

Updated on: Jan 16, 2026 | 8:40 PM

Share

ನವದೆಹಲಿ, ಜನವರಿ 16: ಮಹಾರಾಷ್ಟ್ರದ (Maharashtra) ಪುರಸಭೆ ಚುನಾವಣೆಯಲ್ಲಿ ಎನ್‌ಡಿಎ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಶ್ಲಾಘಿಸಿದ್ದಾರೆ. ಈ ಫಲಿತಾಂಶಗಳು ಎನ್​ಡಿಎ ಮೈತ್ರಿಕೂಟದ ಜನಪರ ಉತ್ತಮ ಆಡಳಿತಕ್ಕೆ ಹೆಚ್ಚುತ್ತಿರುವ ಸಾರ್ವಜನಿಕ ಬೆಂಬಲವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಧನ್ಯವಾದಗಳು ಮಹಾರಾಷ್ಟ್ರ! ರಾಜ್ಯದ ಕ್ರಿಯಾಶೀಲ ಜನರು ಎನ್‌ಡಿಎಯ ಜನಪರ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ಆಶೀರ್ವದಿಸಿದ್ದಾರೆ” ಎಂದು ಹೇಳಿದ್ದಾರೆ.

ಇನ್ನೊಂದು ಎಕ್ಸ್ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಜನರ ನಡುವೆ ದಣಿವರಿಯಿಲ್ಲದೆ ಕೆಲಸ ಮಾಡಿದ್ದಕ್ಕಾಗಿ ಎನ್‌ಡಿಎಯ ಕಾರ್ಯಕರ್ತರನ್ನು ಶ್ಲಾಘಿಸಿದ್ದಾರೆ. “ಕಾರ್ಯಕರ್ತರು ಎನ್‌ಡಿಎಯ ದೃಷ್ಟಿಕೋನವನ್ನು ಜನರಿಗೆ ಎತ್ತಿ ತೋರಿಸಿದರು ಮತ್ತು ವಿರೋಧ ಪಕ್ಷದ ಸುಳ್ಳುಗಳನ್ನು ಬಹಿರಂಗಪಡಿಸಿದರು. ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು ಮತ್ತು ಶುಭಾಶಯಗಳು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಎಂಸಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ; ಭರ್ಜರಿ ಗೆಲುವಿನತ್ತ ಬಿಜೆಪಿ ಮೈತ್ರಿಕೂಟ; ಠಾಕ್ರೆ ಸಹೋದರರಿಗೆ ಹಿನ್ನಡೆ

ಮಹಾಯುತಿ ಮೈತ್ರಿ ಮಹಾರಾಷ್ಟ್ರದ ಪುರಸಭೆ ಚುನಾವಣೆಯಲ್ಲಿ ಭಾರೀ ಜಯ ಸಾಧಿಸಿದೆ. ಬಿಜೆಪಿ 2,869 ವಾರ್ಡ್‌ಗಳಲ್ಲಿ 1,300ಕ್ಕೂ ಹೆಚ್ಚು ವಾರ್ಡ್‌ಗಳನ್ನು ಗೆದ್ದು ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಂತರ ಏಕನಾಥ್ ಶಿಂಧೆ ಅವರ ಶಿವಸೇನೆ 360ಕ್ಕೂ ಹೆಚ್ಚು ವಾರ್ಡ್‌ಗಳನ್ನು ಗೆದ್ದಿತು. ಕಾಂಗ್ರೆಸ್ ಕೂಡ ಅಚ್ಚರಿ ಮೂಡಿಸಿ 300ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಶಿವಸೇನೆ (ಯುಬಿಟಿ) ಸುಮಾರು 160 ವಾರ್ಡ್‌ಗಳನ್ನು ಗೆದ್ದಿತು ಮತ್ತು ಪ್ರತ್ಯೇಕವಾಗಿ ಸ್ಪರ್ಧಿಸಿದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) 150ಕ್ಕೂ ಹೆಚ್ಚು ವಾರ್ಡ್‌ಗಳನ್ನು ಗೆದ್ದಿತು. ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಹ 90ಕ್ಕೂ ಹೆಚ್ಚು ವಾರ್ಡ್‌ಗಳನ್ನು ಗೆದ್ದಿತು. ಶರದ್ ಪವಾರ್ ಅವರ ಎನ್‌ಸಿಪಿ (ಎಸ್‌ಪಿ) 28 ವಾರ್ಡ್‌ಗಳನ್ನು ಗೆದ್ದಿತು. ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಸಹ ಸುಮಾರು 18 ವಾರ್ಡ್‌ಗಳನ್ನು ಗೆದ್ದಿತು. ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ್ ಆಘಾಡಿ (ವಿಬಿಎ) 14 ವಾರ್ಡ್‌ಗಳನ್ನು ಗೆದ್ದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!