AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್ ಯುದ್ಧದ ಶಾಂತಿಯುತ ಪರಿಹಾರಕ್ಕೆ ಕೊಡುಗೆ ನೀಡಲು ಭಾರತ ಸಿದ್ಧ; ಪುಟಿನ್​ಗೆ ಪ್ರಧಾನಿ ಮೋದಿ ಸಂದೇಶ

ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬಕ್ಕೆ ಪುಟಿನ್, ಟ್ರಂಪ್, ಮೆಲೊನಿ, ನೆತನ್ಯಾಹು ಸೇರಿದಂತೆ ಹಲವು ದೇಶಗಳ ನಾಯಕರು ಶುಭಾಶಯ ಕೋರಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ಫೋನ್ ಮಾಡಿ ಶುಭಾಶಯ ಕೋರಿದ್ದಾರೆ. ಈ ವೇಳೆ ಅವರು ರಷ್ಯಾ-ಉಕ್ರೇನ್ ಯುದ್ಧದ ಶಾಂತಿಯುತ ಪರಿಹಾರದ ಬಗ್ಗೆ ಮಾತನಾಡಿದ್ದಾರೆ.

ಉಕ್ರೇನ್ ಯುದ್ಧದ ಶಾಂತಿಯುತ ಪರಿಹಾರಕ್ಕೆ ಕೊಡುಗೆ ನೀಡಲು ಭಾರತ ಸಿದ್ಧ; ಪುಟಿನ್​ಗೆ ಪ್ರಧಾನಿ ಮೋದಿ ಸಂದೇಶ
Narendra Modi with putin
ಸುಷ್ಮಾ ಚಕ್ರೆ
|

Updated on: Sep 17, 2025 | 7:32 PM

Share

ನವದೆಹಲಿ, ಸೆಪ್ಟೆಂಬರ್ 17: ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತ ಸಾಧ್ಯವಿರುವ ಎಲ್ಲಾ ಕೊಡುಗೆಗಳನ್ನು ನೀಡಲು ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ (PM Modi) ಹೇಳಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಕ್ಕಾಗಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ (Putin) ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಎರಡೂ ದೇಶಗಳ ಸಂಬಂಧಗಳನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಅವರು ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.

ಇಂದು (ಬುಧವಾರ) ತಮ್ಮ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ದೂರವಾಣಿ ಕರೆ ಮತ್ತು ಶುಭಾಶಯಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. “ನನ್ನ ಸ್ನೇಹಿತರಾದ ರಷ್ಯಾ ಅಧ್ಯಕ್ಷ ಪುಟಿನ್, ನನ್ನ 75ನೇ ಹುಟ್ಟುಹಬ್ಬದಂದು ನಿಮ್ಮ ಫೋನ್ ಕರೆ ಮತ್ತು ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು. ನಮ್ಮ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತ ಸಾಧ್ಯವಿರುವ ಎಲ್ಲಾ ಕೊಡುಗೆಗಳನ್ನು ನೀಡಲು ಸಿದ್ಧವಾಗಿದೆ” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನಿಂದ ಅಮೆರಿಕದವರೆಗೆ; ಸ್ನೇಹಿತ ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಲಕ್ಸನ್, ಮೆಲೋನಿ, ನೆತನ್ಯಾಹು ಮುಂತಾದ ಜಾಗತಿಕ ನಾಯಕರು

ಇಂದು (ಸೆಪ್ಟೆಂಬರ್ 17) ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬಿತು. ಈ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಟಲಿಯ ಪ್ರಧಾನಿ ಮೆಲೋನಿ ಸೇರಿದಂತೆ ಇತರ ಜಾಗತಿಕ ನಾಯಕರು ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ
ಬೆಥೆಲ್ ಸ್ಪಿನ್​ಗೆ 'ತಿರುಗಿ' ಬಿದ್ದ ಶ್ರೀಲಂಕಾ
‘ಕೆಜಿಎಫ್ 3 ಟೀಸರ್ ರಿಲೀಸ್’; ಹೀಗೂ ಟ್ರೋಲ್ ಮಾಡಬಹುದು
‘ಕೆಜಿಎಫ್ 3 ಟೀಸರ್ ರಿಲೀಸ್’; ಹೀಗೂ ಟ್ರೋಲ್ ಮಾಡಬಹುದು
ವಿಧಾನಸೌಧ ಮುಖ್ಯ ರಸ್ತೆಯಲ್ಲಿಯೇ ಬೈಕ್​​ ವ್ಹೀಲಿಂಗ್​​ ನಡೆಸಿ ಪುಂಡಾಟ
ವಿಧಾನಸೌಧ ಮುಖ್ಯ ರಸ್ತೆಯಲ್ಲಿಯೇ ಬೈಕ್​​ ವ್ಹೀಲಿಂಗ್​​ ನಡೆಸಿ ಪುಂಡಾಟ