AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡೈರಿಗೆ ಹಾಲು ನೀಡುತ್ತೀರಿ ಅಂದ್ರೆ, ಡೈರಿಯವರು ನಿಮ್ಮ ಆಕಳನ್ನು ವಶಪಡಿಸಿಕೊಳ್ತಾರಾ?’ ಪರೋಕ್ಷವಾಗಿ ವಿಪಕ್ಷಗಳಿಗೆ ಟಾಂಗ್ ಕೊಟ್ಟ ಪ್ರಧಾನಿ ಮೋದಿ

ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಗಮನಾರ್ಹ ಬದಲಾವಣೆಗಳನ್ನು ಬಳಸಿಕೊಂಡು ವಿಪಕ್ಷಗಳು ರೈತರನ್ನು ಅಡ್ಡದಾರಿಗೆ ಎಳೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಮೇಲೆ ಆಕ್ಷೇಪ ವ್ಯಕ್ತಪಡಿಸಿದರು.

‘ಡೈರಿಗೆ ಹಾಲು ನೀಡುತ್ತೀರಿ ಅಂದ್ರೆ, ಡೈರಿಯವರು ನಿಮ್ಮ ಆಕಳನ್ನು ವಶಪಡಿಸಿಕೊಳ್ತಾರಾ?’  ಪರೋಕ್ಷವಾಗಿ ವಿಪಕ್ಷಗಳಿಗೆ ಟಾಂಗ್ ಕೊಟ್ಟ ಪ್ರಧಾನಿ ಮೋದಿ
ಕಚ್ ಪ್ರದೇಶದ ರೈತರ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಿದರು.
guruganesh bhat
| Updated By: ಸಾಧು ಶ್ರೀನಾಥ್​|

Updated on: Dec 15, 2020 | 4:36 PM

Share

ಅಹಮದಾಬಾದ್: ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಗಮನಾರ್ಹ ಬದಲಾವಣೆಗಳನ್ನು ಬಳಸಿಕೊಂಡು ವಿಪಕ್ಷಗಳು ರೈತರನ್ನು ಅಡ್ಡದಾರಿಗೆ ಎಳೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಮೇಲೆ ಆಕ್ಷೇಪ ವ್ಯಕ್ತಪಡಿಸಿದರು. ‘ನೀವು ಡೈರಿಯೊಂದಕ್ಕೆ ಹಾಲು ನೀಡುತ್ತೀರಿ ಎಂದರೆ, ಡೈರಿಯವರು ನಿಮ್ಮ ಆಕಳನ್ನು ವಶಪಡಿಸಿಕೊಳ್ಳುತ್ತಾರಾ?’ ಎಂದು ಪ್ರಶ್ನಿಸಿದ ಅವರು, ಪರೋಕ್ಷವಾಗಿ ನೂತನ ಕೃಷಿ ಕಾಯ್ದೆಗಳ ಕುರಿತು ಪಂಜಾಬ್ ರೈತರ ಆಕ್ಷೇಪವನ್ನು ನಿರಾಕರಿಸಿದರು. ಕಂಪನಿಗಳು ಕೃಷಿ ಉತ್ಪನ್ನ ಖರೀದಿಸುತ್ತಾರೆಂದರೆ ಕೃಷಿ ಭೂಮಿಯನ್ನೂ ವಶಪಡಿಸಿಕೊಂಡಂತಲ್ಲ ಎಂದು ಸಮರ್ಥಿಸಿಕೊಂಡರು.

ಅವರು ಗುಜರಾತ್​ನ ಕಚ್​ನ ವಿಘಾಕೋಟ್ ಗ್ರಾಮದ ಬಳಿ 30 ಗಿಗಾವ್ಯಾಟ್ಸ್ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದನಾ ಘಟಕ, ಹಾಲು ಸಂಸ್ಕರಣೆ ಮತ್ತು ಪ್ಯಾಕಿಂಗ್, ಡಿಸಾಲಿನೇಶನ್ ಘಟಕಗಳಿಗೆ ಶಂಕು ಸ್ಥಾಪನೆ ಮಾಡಿ ಮಾತನಾಡಿದರು.

ಕೇಂದ್ರ ಸರ್ಕಾರ ದೇಶದ ರೈತರ ಹಿತ ಕಾಯಲು ಬದ್ಧವಾಗಿದೆ. ಹಲವು ವರ್ಷಗಳಿಂದ ರೈತ ಒಕ್ಕೂಟಗಳ ಬೇಡಿಕೆಯಂತೆಯೇ ನೂತನ ಕೃಷಿ ಕಾಯ್ದೆಗಳನ್ನು ರೂಪಿಸಲಾಗಿದೆ.  ಕೃಷಿ ಕ್ಷೇತ್ರದಲ್ಲಿ ಕೈಗೊಂಡ ಗಮನಾರ್ಹ ಬದಲಾವಣೆಗಳು ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿವೆ. ದೇಶದ ರೈತ ಒಕ್ಕೂಟಗಳು ಮತ್ತು ವಿರೋಧ ಪಕ್ಷಗಳು ವರ್ಷಗಳಿಂದ ಇಟ್ಟ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆ ಎಂದು ಅವರು ನೂತನ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡರು.

ಕಚ್ ಪ್ರದೇಶದ ಮಹಿಳೆಯರ ಜೊತೆ ಸಂವಾದ ನಡೆಸಿದ ಪ್ರಧಾನಿ

ಸೌರಶಕ್ತಿ, ಜಲಶಕ್ತಿಯ ಬಳಕೆಯಿಂದ ಸರ್ವತೋಮುಖ ಅಭಿವೃದ್ಧಿ ಒಂದು ಕಾಲದಲ್ಲಿ ಕಚ್ ತೀರಾ ಹಿಂದುಳಿದ ಪ್ರದೇಶವಾಗಿತ್ತು. ಆದರೆ ಇಂದು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ವಿಫುಲವಾಗಿ ದೊರಕುವ ಸೌರಶಕ್ತಿಯ ಬಳಕೆಯಿಂದ ಇದು ಸಾಧ್ಯವಾಗಿದೆ.  ನರ್ಮದಾ ನದಿ ನೀರು ಬಳಸಿ ಮರುಭೂಮಿಯಂತಿದ್ದ ಕಚ್​ನಲ್ಲಿ ಹಸಿರು ಚಿಗುರಲಿದೆ. ಸೌರಶಕ್ತಿ, ಜಲಶಕ್ತಿಗಳ ಸಮರ್ಥ ಬಳಕೆಯಿಂದ ಸರ್ವತೋಮುಖ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು.

ಕಚ್​ನ ವಿಘಾಕೋಟ್ ಗ್ರಾಮದ ಬಳಿ 30 ಗಿಗಾವ್ಯಾಟ್ಸ್ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದನಾ ಘಟಕ ದೇಶದ ಅತಿ ದೊಡ್ಡ ಸೌರ ವಿದ್ಯುತ್ ಉತ್ಪಾದನಾ ಘಟಕವಾಗಲಿದೆ. ಹಾಲು ಸಂಸ್ಕರಣೆ ಮತ್ತು ಪ್ಯಾಕಿಂಗ್ ಘಟಕಕ್ಕೂ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದರು. ಕಚ್ ಭಾಗದಲ್ಲಿನ ನೀರಿನ ಬವಣೆಯನ್ನು ದೂರ ಮಾಡುವ ಉದ್ದೇಶ ಹೊಂದಿದ ಡಿಸಾಲೇಶನ್ ಘಟಕಕ್ಕೂ ಶಿಲಾನ್ಯಾಸ ನೆರವೇರಿಸಿದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ