AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಹರಿದ್ವಾರದಲ್ಲಿ ಬಿಪಿನ್​ ರಾವತ್​ ಚಿತಾಭಸ್ಮ ವಿಸರ್ಜನೆ; ಸಿಡಿಎಸ್​ ಸ್ಮರಣಾರ್ಥ ಉತ್ತರಾಖಂಡ್​​ನಲ್ಲಿ ಶಹೀದ್​ ಸೈನ್ಯ ಧಾಮ ನಿರ್ಮಾಣ

Bipin Rawat: ಬಿಪಿನ್​ ರಾವತ್​ ಮೂಲತಃ ಉತ್ತರಾಖಂಡ್​​ನವರೇ ಆಗಿದ್ದಾರೆ. ಅವರ ಅಂತ್ಯಕ್ರಿಯೆನ್ನು ದೆಹಲಿಯಲ್ಲಿಯೇ ಮಾಡಲಾಗಿದ್ದರೂ ಚಿತಾಭಸ್ಮ ವಿಸರ್ಜನೆ ಹರಿದ್ವಾರದಲ್ಲಿ ಆಗಲಿದೆ.

ಇಂದು ಹರಿದ್ವಾರದಲ್ಲಿ ಬಿಪಿನ್​ ರಾವತ್​ ಚಿತಾಭಸ್ಮ ವಿಸರ್ಜನೆ; ಸಿಡಿಎಸ್​ ಸ್ಮರಣಾರ್ಥ ಉತ್ತರಾಖಂಡ್​​ನಲ್ಲಿ ಶಹೀದ್​ ಸೈನ್ಯ ಧಾಮ ನಿರ್ಮಾಣ
ಬಿಪಿನ್​ ರಾವತ್​ ಅಂತ್ಯಕ್ರಿಯೆ
TV9 Web
| Edited By: |

Updated on:Dec 11, 2021 | 11:44 AM

Share

ತಮಿಳುನಾಡಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಮಡಿದ ಸಿಡಿಎಸ್​ ಬಿಪಿನ್​ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಚಿತಾ ಭಸ್ಮವನ್ನು ಇಂದು ಅವರ ಕುಟುಂಬದವರು ಹರಿದ್ವಾರಕ್ಕೆ ಕೊಂಡೊಯ್ದು ಅಲ್ಲಿ ವಿಸರ್ಜನೆ ಮಾಡಲಿದ್ದಾರೆ. ಡಿಸೆಂಬರ್​ 8ರಂದು ತಮಿಳುನಾಡಿನ ಕೂನೂರು ಬಳಿ ಸೇನಾ ಹೆಲಿಕಾಪ್ಟರ್​ ಪತನಗೊಂಡಿತ್ತು. ಅದರಲ್ಲಿ ಪ್ರಯಾಣ ಮಾಡುತ್ತಿದ್ದ ಸಿಡಿಎಸ್​ ರಾವತ್​ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಹಾಗೂ ಇತರ 11 ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ. ಅವರಲ್ಲಿ ಬಿಪಿನ್​ ರಾವತ್​ ಮತ್ತು ಅವರ ಪತ್ನಿಯ ಅಂತ್ಯಕ್ರಿಯೆಯನ್ನು ದೆಹಲಿಯ ಬ್ರಾರ್​ ಸ್ಕ್ವೇರ್​​ನಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಈಗ ಇಬ್ಬರ ಚಿತಾಭಸ್ಮವನ್ನೂ ಇಂದು ಬೆಳಗ್ಗೆ 10 ಗಂಟೆ ಹೊತ್ತಿಗೆ ವಿಐಪಿ ಘಾಟ್​​ನಲ್ಲಿ ವಿಸರ್ಜನೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಬಿಪಿನ್​ ರಾವತ್​ ಮೂಲತಃ ಉತ್ತರಾಖಂಡ್​​ನವರೇ ಆಗಿದ್ದಾರೆ. ಅವರ ಅಂತ್ಯಕ್ರಿಯೆನ್ನು ದೆಹಲಿಯಲ್ಲಿಯೇ ಮಾಡಲಾಗಿದ್ದರೂ ಚಿತಾಭಸ್ಮ ವಿಸರ್ಜನೆ ಹರಿದ್ವಾರದಲ್ಲಿ ಆಗಲಿದೆ. ಹಾಗೇ, ಹರಿದ್ವಾರದಲ್ಲಿ ಅಖಾಡ ಮತ್ತು ಸಂತ ಸಮಾಜ ಸೇರಿ, ಬಿಪಿನ್ ರಾವತ್ ಸ್ಮರಣಾರ್ಥ ಒಂದು ಬೃಹತ್​ ಶಹೀದ್​ ಸೈನ್ಯ​ ಧಾಮ (ಹುತಾತ್ಮರ ಧಾಮ) ನಿರ್ಮಾಣ ಮಾಡಲಿದೆ ಎಂದು ಅಖಿಲ ಭಾರತ ಅಖಾಡ ಪರಿಷತ್ ಅಧ್ಯಕ್ಷ  ಮತ್ತು ನಿರಂಜನಿ ಅಖಾಡ ಕಾರ್ಯದರ್ಶಿ ಮಹಂತ್ ರವೀಂದ್ರಪುರಿ ಮತ್ತು ಪ್ರಧಾನ ಕಾರ್ಯದರ್ಶಿ ಮಹಂತ್ ಹರಿಗಿರಿ ತಿಳಿಸಿದ್ದಾರೆ. ಹಾಗೇ ಇದು ಉತ್ತರಾಖಂಡ್​ನಲ್ಲಿ ಈಗಾಗಲೇ ಇರುವ ನಾಲ್ಕು ಧಾಮಗಳೊಟ್ಟಿಗೆ ಐದನೇ ಧಾಮವಾಗಲಿದೆ ಎಂದು ಹೇಳಲಾಗಿದೆ. ಇಲ್ಲಿನ ಎಲ್ಲ ಸಂತ ಸಮಾಜ ಮತ್ತು ಅಖಿಲ ಭಾರತೀಯ ಆಖಾಡ ಪರಿಷತ್​​ ಬಿಪಿನ್ ರಾವತ್​ ಕುಟುಂಬದೊಟ್ಟಿಗೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಇಂದು ಬಿಪಿನ್​ ರಾವತ್​ ಪುತ್ರಿಯರಾದ ಕೃತ್ತಿಕಾ ಮತ್ತು ತಾರಿಣಿ ಚಿತಾಭಸ್ಮವನ್ನು ಹರಿದ್ವಾರಕ್ಕೆ ತಂದು ವಿಸರ್ಜನೆ ಮಾಡಲಿದ್ದಾರೆ. ಈ ವೇಳೆ ಅಲ್ಲಿಗೆ ಉತ್ತರಾಖಂಡ್​ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಮತ್ತು ರಾಜ್ಯದ ರಕ್ಷಣಾ ಸಚಿವ ಅಜಯ್​ ಭಟ್​ ಕೂಡ ಉಪಸ್ಥಿತರಿರುವರು ಎಂದು ಹರಿದ್ವಾರದ ಜಿಲ್ಲಾಧಿಕಾರಿ ವಿನಯ್​ ಶಂಕರ್​ ಪಾಂಡೆ ತಿಳಿಸಿದ್ದಾರೆ. ದೆಹಲಿಯ ಚಿತಾಗಾರದಿಂದ ಡೆಹ್ರಾಡೂನ್​ನ ಜೊಲ್ಲೆ ಗ್ರ್ಯಾಂಟ್ ಏರ್​​ಪೋರ್ಟ್​ವರೆಗೆ ವಾಯುಮಾರ್ಗದ ಮೂಲಕ ಚಿತಾಭಸ್ಮವನ್ನು ತರಲಾಗುವುದು. ಅಲ್ಲಿಂದ ಆರು ಗಂಟೆಗೇ ವಿಮಾನ ಹೊರಟಿದೆ. ನಂತರ ಡೆಹ್ರಾಡೂನ್​ ಏರ್​​ಪೋರ್ಟ್​ನಿಂದ ಹರಿದ್ವಾರಕ್ಕೆ ರಸ್ತೆ ಮಾರ್ಗದ ಮೂಲಕ ಪ್ರಯಾಣ ಮಾಡಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ಚಳಿಗಾಲ ಶುರುವಾಗಿ ಡಿಸೈನರ್ ಮತ್ತು ಫ್ಯಾಶನೇಬಲ್ ಶಾಲುಗಳು ಮಾರ್ಕೆಟ್​ಗೆ ಬಂದಾಯ್ತು, ನೀವು ಖರೀದಿಸಿದಿರಾ?

Published On - 9:44 am, Sat, 11 December 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು