AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಹರಿದ್ವಾರದಲ್ಲಿ ಬಿಪಿನ್​ ರಾವತ್​ ಚಿತಾಭಸ್ಮ ವಿಸರ್ಜನೆ; ಸಿಡಿಎಸ್​ ಸ್ಮರಣಾರ್ಥ ಉತ್ತರಾಖಂಡ್​​ನಲ್ಲಿ ಶಹೀದ್​ ಸೈನ್ಯ ಧಾಮ ನಿರ್ಮಾಣ

Bipin Rawat: ಬಿಪಿನ್​ ರಾವತ್​ ಮೂಲತಃ ಉತ್ತರಾಖಂಡ್​​ನವರೇ ಆಗಿದ್ದಾರೆ. ಅವರ ಅಂತ್ಯಕ್ರಿಯೆನ್ನು ದೆಹಲಿಯಲ್ಲಿಯೇ ಮಾಡಲಾಗಿದ್ದರೂ ಚಿತಾಭಸ್ಮ ವಿಸರ್ಜನೆ ಹರಿದ್ವಾರದಲ್ಲಿ ಆಗಲಿದೆ.

ಇಂದು ಹರಿದ್ವಾರದಲ್ಲಿ ಬಿಪಿನ್​ ರಾವತ್​ ಚಿತಾಭಸ್ಮ ವಿಸರ್ಜನೆ; ಸಿಡಿಎಸ್​ ಸ್ಮರಣಾರ್ಥ ಉತ್ತರಾಖಂಡ್​​ನಲ್ಲಿ ಶಹೀದ್​ ಸೈನ್ಯ ಧಾಮ ನಿರ್ಮಾಣ
ಬಿಪಿನ್​ ರಾವತ್​ ಅಂತ್ಯಕ್ರಿಯೆ
TV9 Web
| Updated By: Lakshmi Hegde|

Updated on:Dec 11, 2021 | 11:44 AM

Share

ತಮಿಳುನಾಡಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಮಡಿದ ಸಿಡಿಎಸ್​ ಬಿಪಿನ್​ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಚಿತಾ ಭಸ್ಮವನ್ನು ಇಂದು ಅವರ ಕುಟುಂಬದವರು ಹರಿದ್ವಾರಕ್ಕೆ ಕೊಂಡೊಯ್ದು ಅಲ್ಲಿ ವಿಸರ್ಜನೆ ಮಾಡಲಿದ್ದಾರೆ. ಡಿಸೆಂಬರ್​ 8ರಂದು ತಮಿಳುನಾಡಿನ ಕೂನೂರು ಬಳಿ ಸೇನಾ ಹೆಲಿಕಾಪ್ಟರ್​ ಪತನಗೊಂಡಿತ್ತು. ಅದರಲ್ಲಿ ಪ್ರಯಾಣ ಮಾಡುತ್ತಿದ್ದ ಸಿಡಿಎಸ್​ ರಾವತ್​ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಹಾಗೂ ಇತರ 11 ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ. ಅವರಲ್ಲಿ ಬಿಪಿನ್​ ರಾವತ್​ ಮತ್ತು ಅವರ ಪತ್ನಿಯ ಅಂತ್ಯಕ್ರಿಯೆಯನ್ನು ದೆಹಲಿಯ ಬ್ರಾರ್​ ಸ್ಕ್ವೇರ್​​ನಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಈಗ ಇಬ್ಬರ ಚಿತಾಭಸ್ಮವನ್ನೂ ಇಂದು ಬೆಳಗ್ಗೆ 10 ಗಂಟೆ ಹೊತ್ತಿಗೆ ವಿಐಪಿ ಘಾಟ್​​ನಲ್ಲಿ ವಿಸರ್ಜನೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಬಿಪಿನ್​ ರಾವತ್​ ಮೂಲತಃ ಉತ್ತರಾಖಂಡ್​​ನವರೇ ಆಗಿದ್ದಾರೆ. ಅವರ ಅಂತ್ಯಕ್ರಿಯೆನ್ನು ದೆಹಲಿಯಲ್ಲಿಯೇ ಮಾಡಲಾಗಿದ್ದರೂ ಚಿತಾಭಸ್ಮ ವಿಸರ್ಜನೆ ಹರಿದ್ವಾರದಲ್ಲಿ ಆಗಲಿದೆ. ಹಾಗೇ, ಹರಿದ್ವಾರದಲ್ಲಿ ಅಖಾಡ ಮತ್ತು ಸಂತ ಸಮಾಜ ಸೇರಿ, ಬಿಪಿನ್ ರಾವತ್ ಸ್ಮರಣಾರ್ಥ ಒಂದು ಬೃಹತ್​ ಶಹೀದ್​ ಸೈನ್ಯ​ ಧಾಮ (ಹುತಾತ್ಮರ ಧಾಮ) ನಿರ್ಮಾಣ ಮಾಡಲಿದೆ ಎಂದು ಅಖಿಲ ಭಾರತ ಅಖಾಡ ಪರಿಷತ್ ಅಧ್ಯಕ್ಷ  ಮತ್ತು ನಿರಂಜನಿ ಅಖಾಡ ಕಾರ್ಯದರ್ಶಿ ಮಹಂತ್ ರವೀಂದ್ರಪುರಿ ಮತ್ತು ಪ್ರಧಾನ ಕಾರ್ಯದರ್ಶಿ ಮಹಂತ್ ಹರಿಗಿರಿ ತಿಳಿಸಿದ್ದಾರೆ. ಹಾಗೇ ಇದು ಉತ್ತರಾಖಂಡ್​ನಲ್ಲಿ ಈಗಾಗಲೇ ಇರುವ ನಾಲ್ಕು ಧಾಮಗಳೊಟ್ಟಿಗೆ ಐದನೇ ಧಾಮವಾಗಲಿದೆ ಎಂದು ಹೇಳಲಾಗಿದೆ. ಇಲ್ಲಿನ ಎಲ್ಲ ಸಂತ ಸಮಾಜ ಮತ್ತು ಅಖಿಲ ಭಾರತೀಯ ಆಖಾಡ ಪರಿಷತ್​​ ಬಿಪಿನ್ ರಾವತ್​ ಕುಟುಂಬದೊಟ್ಟಿಗೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಇಂದು ಬಿಪಿನ್​ ರಾವತ್​ ಪುತ್ರಿಯರಾದ ಕೃತ್ತಿಕಾ ಮತ್ತು ತಾರಿಣಿ ಚಿತಾಭಸ್ಮವನ್ನು ಹರಿದ್ವಾರಕ್ಕೆ ತಂದು ವಿಸರ್ಜನೆ ಮಾಡಲಿದ್ದಾರೆ. ಈ ವೇಳೆ ಅಲ್ಲಿಗೆ ಉತ್ತರಾಖಂಡ್​ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಮತ್ತು ರಾಜ್ಯದ ರಕ್ಷಣಾ ಸಚಿವ ಅಜಯ್​ ಭಟ್​ ಕೂಡ ಉಪಸ್ಥಿತರಿರುವರು ಎಂದು ಹರಿದ್ವಾರದ ಜಿಲ್ಲಾಧಿಕಾರಿ ವಿನಯ್​ ಶಂಕರ್​ ಪಾಂಡೆ ತಿಳಿಸಿದ್ದಾರೆ. ದೆಹಲಿಯ ಚಿತಾಗಾರದಿಂದ ಡೆಹ್ರಾಡೂನ್​ನ ಜೊಲ್ಲೆ ಗ್ರ್ಯಾಂಟ್ ಏರ್​​ಪೋರ್ಟ್​ವರೆಗೆ ವಾಯುಮಾರ್ಗದ ಮೂಲಕ ಚಿತಾಭಸ್ಮವನ್ನು ತರಲಾಗುವುದು. ಅಲ್ಲಿಂದ ಆರು ಗಂಟೆಗೇ ವಿಮಾನ ಹೊರಟಿದೆ. ನಂತರ ಡೆಹ್ರಾಡೂನ್​ ಏರ್​​ಪೋರ್ಟ್​ನಿಂದ ಹರಿದ್ವಾರಕ್ಕೆ ರಸ್ತೆ ಮಾರ್ಗದ ಮೂಲಕ ಪ್ರಯಾಣ ಮಾಡಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ಚಳಿಗಾಲ ಶುರುವಾಗಿ ಡಿಸೈನರ್ ಮತ್ತು ಫ್ಯಾಶನೇಬಲ್ ಶಾಲುಗಳು ಮಾರ್ಕೆಟ್​ಗೆ ಬಂದಾಯ್ತು, ನೀವು ಖರೀದಿಸಿದಿರಾ?

Published On - 9:44 am, Sat, 11 December 21

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?