AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ಹಳಿ ಬಳಿ ಶಿಶು ಪತ್ತೆ, ಮಗುವಿನ ತಾಯಿಯನ್ನು ಪತ್ತೆ ಮಾಡಿದ ಪೊಲೀಸರು

ಲುಧಿಯಾನದ ಧಂಡಾರಿ ಕಲಾನ್ ಮತ್ತು ಸಾಹ್ನೆವಾಲ್ ರೈಲು ನಿಲ್ದಾಣಗಳ ನಡುವಿನ ರೈಲು ಹಳಿಯ ಬಳಿ ಶಿಶುವೊಂದು ಪತ್ತೆಯಾಗಿದೆ. ಎರಡು ದಿನಗಳ ನಂತರ ಶನಿವಾರದಂದು ಮಗುವಿನ ತಾಯಿಯನ್ನು ಪತ್ತೆಹಚ್ಚಿದ್ದಾರೆ.

ರೈಲ್ವೇ ಹಳಿ ಬಳಿ ಶಿಶು ಪತ್ತೆ, ಮಗುವಿನ ತಾಯಿಯನ್ನು ಪತ್ತೆ ಮಾಡಿದ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 22, 2022 | 10:08 AM

Share

ಚಂಡೀಗಢ: ಲುಧಿಯಾನದ ಧಂಡಾರಿ ಕಲಾನ್ ಮತ್ತು ಸಾಹ್ನೆವಾಲ್ ರೈಲು ನಿಲ್ದಾಣಗಳ ನಡುವಿನ ರೈಲು ಹಳಿಯ ಬಳಿ ಶಿಶುವೊಂದು ಪತ್ತೆಯಾಗಿದೆ. ಎರಡು ದಿನಗಳ ನಂತರ ಶನಿವಾರದಂದು ಮಗುವಿನ ತಾಯಿಯನ್ನು ಪತ್ತೆಹಚ್ಚಿದ್ದಾರೆ. ಮೂಲಗಳ ಪ್ರಕಾರ, ಶಿಶುವಿನ ತಾಯಿ ವಿವಾಹೇತರವಾಗಿ ಜನಿಸಿದ ಕಾರಣ ಆಕೆಯನ್ನು ಅಲ್ಲಿ ಬಿಟ್ಟು ಹೋಗಿದ್ದಾರೆ. ಮಗುವಿನ ತಾಯಿ ಒರಿಸ್ಸಾ ಮೂಲದವರಾಗಿದ್ದು, ತನ್ನ ಪ್ರಿಯಕರನೊಂದಿಗೆ ಧಂಡಾರಿಯ ಈಶ್ವರ್ ಕಾಲೋನಿಯಲ್ಲಿ ಬಾಡಿಗೆಗೆ ವಾಸವಾಗಿದ್ದಾಳೆ. ಗರ್ಭಪಾತ ಮಾಡಲು ಸಾಧ್ಯವಾಗದ ಕಾರಣ, ಸ್ಥಳೀಯ ಸಿವಿಲ್ ಆಸ್ಪತ್ರೆಯಲ್ಲಿ ಜನಿಸಿದ ನಂತರ ಮಗುವನ್ನು ರೈಲು ಹಳಿಯ ಮೇಲೆ ಎಸೆದಿದ್ದಾರೆ ಎಂದು ತನಿಖೆ ನಡೆಸುತ್ತಿರುವ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವಜಾತ ಶಿಶುವನ್ನು ಏಕಾಂತ ಸ್ಥಳದಲ್ಲಿ ಎಸೆದಿದ್ದ ಮಗುವಿನ ತಾಯಿಯ ಚಿಕ್ಕಪ್ಪನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ನಾವು ಕುಟುಂಬವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದಾಗ, ಮಗುವಿನ ತಾಯಿಯ ಸಹೋದರನು ಆರಂಭದಲ್ಲಿ ಮಗುವನ್ನು ತಪ್ಪಾಗಿ ಆಟೋ ರಿಕ್ಷಾದಲ್ಲಿ ಬಿಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ತನಿಖೆ ಮಾಡಿದ ನಂತರ, ಮಗುವನ್ನು ಪತ್ತೆಯಾದ ಟ್ರ್ಯಾಕ್‌ಗಳ ಬಳಿಯ ಪೊದೆಗಳಲ್ಲಿ ಎಸೆದಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಎಂದು ಪೋಲೀಸರು ಹೇಳಿದ್ದಾರೆ.

ಸಿವಿಲ್ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿತು, ಲುಧಿಯಾನದ ಮಕ್ಕಳ ಸಹಾಯವಾಣಿಗೆ ಅಂಬೆಗಾಲಿಡುತ್ತಿರುವ ಮಗುವನ್ನು ಹಸ್ತಾಂತರಿಸಿದ ನಂತರ, ರೈಲ್ವೆ ಪೊಲೀಸರು ವಿವಿಧ ಆಸ್ಪತ್ರೆಗಳ ಸಿಬ್ಬಂದಿಗಳೊಂದಿಗೆ ಮಾತನಾಡುವ ಮೂಲಕ ತಮ್ಮ ತನಿಖೆಯನ್ನು ಪ್ರಾರಂಭಿಸಿದರು.

ನಾವು ಸಿವಿಲ್ ಆಸ್ಪತ್ರೆಯ ಸಿಬ್ಬಂದಿಯೊಂದಿಗೆ ಮಾತನಾಡಿದಾಗ, ನಾವು ತಾಯಿ ಮತ್ತು ಮಗುವಿನ ತಂದೆ ಆಧಾರ್ ಕಾರ್ಡ್ ಮತ್ತು ಇತರ ಗುರುತಿನ ಪುರಾವೆಗಳು ಮತ್ತು ಅವರು ಪ್ರಸ್ತುತ ಧಂಡಾರಿಯಲ್ಲಿ ವಾಸಿಸುತ್ತಿರುವ ವಿಳಾಸವನ್ನು ಪಡೆದುಕೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಯಿ ಮತ್ತು ಆಕೆ ಪ್ರೀಯಕರ (ಮಗುವಿನ ತಂದೆ) ಧಂಡಾರಿಯ ಸ್ಥಳೀಯ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ಅವರನ್ನು ಅಲ್ಲಿಂದ ಅವರನ್ನು ತೆಗೆದು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿ, ಆಕೆಯ ಸ್ನೇಹಿತ ಮತ್ತು ಆಕೆಯ ಸಹೋದರನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು, ನಂತರ ಅವರನ್ನು ಬಂಧಿಸಲಾಗುವುದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ