AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ಹಳಿ ಬಳಿ ಶಿಶು ಪತ್ತೆ, ಮಗುವಿನ ತಾಯಿಯನ್ನು ಪತ್ತೆ ಮಾಡಿದ ಪೊಲೀಸರು

ಲುಧಿಯಾನದ ಧಂಡಾರಿ ಕಲಾನ್ ಮತ್ತು ಸಾಹ್ನೆವಾಲ್ ರೈಲು ನಿಲ್ದಾಣಗಳ ನಡುವಿನ ರೈಲು ಹಳಿಯ ಬಳಿ ಶಿಶುವೊಂದು ಪತ್ತೆಯಾಗಿದೆ. ಎರಡು ದಿನಗಳ ನಂತರ ಶನಿವಾರದಂದು ಮಗುವಿನ ತಾಯಿಯನ್ನು ಪತ್ತೆಹಚ್ಚಿದ್ದಾರೆ.

ರೈಲ್ವೇ ಹಳಿ ಬಳಿ ಶಿಶು ಪತ್ತೆ, ಮಗುವಿನ ತಾಯಿಯನ್ನು ಪತ್ತೆ ಮಾಡಿದ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 22, 2022 | 10:08 AM

Share

ಚಂಡೀಗಢ: ಲುಧಿಯಾನದ ಧಂಡಾರಿ ಕಲಾನ್ ಮತ್ತು ಸಾಹ್ನೆವಾಲ್ ರೈಲು ನಿಲ್ದಾಣಗಳ ನಡುವಿನ ರೈಲು ಹಳಿಯ ಬಳಿ ಶಿಶುವೊಂದು ಪತ್ತೆಯಾಗಿದೆ. ಎರಡು ದಿನಗಳ ನಂತರ ಶನಿವಾರದಂದು ಮಗುವಿನ ತಾಯಿಯನ್ನು ಪತ್ತೆಹಚ್ಚಿದ್ದಾರೆ. ಮೂಲಗಳ ಪ್ರಕಾರ, ಶಿಶುವಿನ ತಾಯಿ ವಿವಾಹೇತರವಾಗಿ ಜನಿಸಿದ ಕಾರಣ ಆಕೆಯನ್ನು ಅಲ್ಲಿ ಬಿಟ್ಟು ಹೋಗಿದ್ದಾರೆ. ಮಗುವಿನ ತಾಯಿ ಒರಿಸ್ಸಾ ಮೂಲದವರಾಗಿದ್ದು, ತನ್ನ ಪ್ರಿಯಕರನೊಂದಿಗೆ ಧಂಡಾರಿಯ ಈಶ್ವರ್ ಕಾಲೋನಿಯಲ್ಲಿ ಬಾಡಿಗೆಗೆ ವಾಸವಾಗಿದ್ದಾಳೆ. ಗರ್ಭಪಾತ ಮಾಡಲು ಸಾಧ್ಯವಾಗದ ಕಾರಣ, ಸ್ಥಳೀಯ ಸಿವಿಲ್ ಆಸ್ಪತ್ರೆಯಲ್ಲಿ ಜನಿಸಿದ ನಂತರ ಮಗುವನ್ನು ರೈಲು ಹಳಿಯ ಮೇಲೆ ಎಸೆದಿದ್ದಾರೆ ಎಂದು ತನಿಖೆ ನಡೆಸುತ್ತಿರುವ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವಜಾತ ಶಿಶುವನ್ನು ಏಕಾಂತ ಸ್ಥಳದಲ್ಲಿ ಎಸೆದಿದ್ದ ಮಗುವಿನ ತಾಯಿಯ ಚಿಕ್ಕಪ್ಪನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ನಾವು ಕುಟುಂಬವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದಾಗ, ಮಗುವಿನ ತಾಯಿಯ ಸಹೋದರನು ಆರಂಭದಲ್ಲಿ ಮಗುವನ್ನು ತಪ್ಪಾಗಿ ಆಟೋ ರಿಕ್ಷಾದಲ್ಲಿ ಬಿಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ತನಿಖೆ ಮಾಡಿದ ನಂತರ, ಮಗುವನ್ನು ಪತ್ತೆಯಾದ ಟ್ರ್ಯಾಕ್‌ಗಳ ಬಳಿಯ ಪೊದೆಗಳಲ್ಲಿ ಎಸೆದಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಎಂದು ಪೋಲೀಸರು ಹೇಳಿದ್ದಾರೆ.

ಸಿವಿಲ್ ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿತು, ಲುಧಿಯಾನದ ಮಕ್ಕಳ ಸಹಾಯವಾಣಿಗೆ ಅಂಬೆಗಾಲಿಡುತ್ತಿರುವ ಮಗುವನ್ನು ಹಸ್ತಾಂತರಿಸಿದ ನಂತರ, ರೈಲ್ವೆ ಪೊಲೀಸರು ವಿವಿಧ ಆಸ್ಪತ್ರೆಗಳ ಸಿಬ್ಬಂದಿಗಳೊಂದಿಗೆ ಮಾತನಾಡುವ ಮೂಲಕ ತಮ್ಮ ತನಿಖೆಯನ್ನು ಪ್ರಾರಂಭಿಸಿದರು.

ನಾವು ಸಿವಿಲ್ ಆಸ್ಪತ್ರೆಯ ಸಿಬ್ಬಂದಿಯೊಂದಿಗೆ ಮಾತನಾಡಿದಾಗ, ನಾವು ತಾಯಿ ಮತ್ತು ಮಗುವಿನ ತಂದೆ ಆಧಾರ್ ಕಾರ್ಡ್ ಮತ್ತು ಇತರ ಗುರುತಿನ ಪುರಾವೆಗಳು ಮತ್ತು ಅವರು ಪ್ರಸ್ತುತ ಧಂಡಾರಿಯಲ್ಲಿ ವಾಸಿಸುತ್ತಿರುವ ವಿಳಾಸವನ್ನು ಪಡೆದುಕೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಯಿ ಮತ್ತು ಆಕೆ ಪ್ರೀಯಕರ (ಮಗುವಿನ ತಂದೆ) ಧಂಡಾರಿಯ ಸ್ಥಳೀಯ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ಅವರನ್ನು ಅಲ್ಲಿಂದ ಅವರನ್ನು ತೆಗೆದು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿ, ಆಕೆಯ ಸ್ನೇಹಿತ ಮತ್ತು ಆಕೆಯ ಸಹೋದರನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು, ನಂತರ ಅವರನ್ನು ಬಂಧಿಸಲಾಗುವುದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?