AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ಅರವಿಂದ್ ಕೇಜ್ರಿವಾಲ್ ಮತ್ತು ಅಮರೀಂದರ್ ಸಿಂಗ್ ನಡುವೆ ಕಚ್ಚಾಟ

ನೂತನ ಕೃಷಿ ಕಾಯ್ದೆಗಳ ಕುರಿತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ನಡುವೆ ಜಟಾಪಟಿ ಆರಂಭವಾಗಿದೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಟ್ವಿಟ್ಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ನಡೆಸಿದ್ದಾರೆ.

Delhi Chalo ಅರವಿಂದ್ ಕೇಜ್ರಿವಾಲ್ ಮತ್ತು ಅಮರೀಂದರ್ ಸಿಂಗ್ ನಡುವೆ ಕಚ್ಚಾಟ
ಅರವಿಂದ್ ಕೇಜ್ರಿವಾಲ್ (ಎಡ) ಅಮರೀಂದರ್ ಸಿಂಗ್ (ಬಲ)
guruganesh bhat
|

Updated on: Dec 15, 2020 | 12:30 PM

Share

ದೆಹಲಿ: ನೂತನ ಕೃಷಿ ಕಾಯ್ದೆಗಳ ಕುರಿತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ನಡುವೆ ಜಟಾಪಟಿ ಆರಂಭವಾಗಿದೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಟ್ವಿಟ್ಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ನಡೆಸಿದ್ದಾರೆ.

ಪಂಜಾಬ್ ರೈತರಿಗೆ ಬೆಂಬಲ ಸೂಚಿಸಿ ನಿನ್ನೆ ಅರವಿಂದ್ ಕೇಜ್ರಿವಾಲ್ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಅಲ್ಲದೇ ಆಮ್​ ಆದ್ಮಿ ಪಕ್ಷದ ಕಾರ್ಯಕರ್ತರಿಗೂ ಉಪವಾಸದ ಕರೆ ನೀಡಿದ್ದರು. ಇದನ್ನು ಮೂಲವಾಗಿಟ್ಟುಕೊಂಡ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್, ರಾಜಕೀಯ ಲಾಭಕ್ಕಾಗಿ ಕೇಜ್ರಿವಾಲ್ ತಮ್ಮ ಆತ್ಮವನ್ನೇ ಮಾರಲೂಬಹುದು. ಪಂಜಾಬಿನ ರೈತರನ್ನೂ ರಾಜಕೀಯ ನಾಟಕಕ್ಕೆ ಬಳಸಿಕೊಳ್ಳಬಹುದು ಎಂದು ಯೋಚಿಸಿದ್ದರೆ ನಿಮ್ಮ ಆಸೆ ತ್ಯಜಿಸುವುದೊಳಿತು..’ ಎಂದು ಟೀಕಿಸಿದ್ದರು.

ಇದಕ್ಕೆ ನಾಟಕೀಯವಾಗಿ ಪ್ರತಿಕ್ರಿಯೆ ನೀಡಿರುವ ಅರವಿಂದ್ ಕೇಜ್ರಿವಾಲ್, ‘ ಮಾನ್ಯ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರೇ, ನೀವೂ ಸಹ ನೂತನ ಕೃಷಿ ಮಸೂದೆಗಳನ್ನು ರೂಪಿಸಿದ ಸಮೀತಿಯ ಭಾಗವಾಗಿದ್ದಿರಲ್ಲವೇ? ಕೃಷಿ ಕಾಯ್ದೆಗಳನ್ನು ರೂಪಿಸಿ ದೇಶಕ್ಕೆ ಅತ್ಯಂತ ಒಳ್ಳೆಯ ಕೊಡುಗೆಯನ್ನೇ ನೀಡಿದ್ದೀರಿ..ಇದಕ್ಕಿಂತ ಒಳ್ಳೆಯ ಕೊಡುಗೆ ನೀಡಲು ಯಾರಿಂದಲೂ ಸಾಧ್ಯವಿಲ್ಲ. ಕೃಷಿ ಕಾಯ್ದೆಗಳ ವಿಚಾರದಲ್ಲಿ ಬಿಜೆಪಿ ನಿಮ್ಮನ್ನು ಟೀಕಿಸುವುದಿಲ್ಲವೇಕೆ? ’ಎಂದು ಛೇಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ , ‘ನಾನು ಕೃಷಿ ಕಾಯ್ದೆಗಳ ಸಮೀತಿಯ ಭಾಗವಾಗಿರಲೇ ಇಲ್ಲ. ನನ್ನ ಬಳಿ ಕೃಷಿ ಕಾಯ್ದೆಗಳನ್ನು ರೂಪಿಸುವಾಗ ಬಿಜೆಪಿ ಅಥವಾ ಕೇಂದ್ರ ಸರ್ಕಾರ ಚರ್ಚಿಸಲೂ ಇಲ್ಲ. ಹೀಗಾಗಿ, ಬಿಜೆಪಿ ಬಳಿ ನನ್ನನ್ನು ದೂಷಿಸಲು ಯಾವ ಅಸ್ತ್ರವೂ ಇಲ್ಲ. ನಿಮ್ಮಂತೆ ನಾನು ಕೃಷಿ ಕಾಯ್ದೆಗಳ ಕುರಿತು ದ್ವಂದ್ವ ನೀತಿ ಹೊಂದಿಲ್ಲ’ ಎಂದಿದ್ದಾರೆ.  ಈ ಮೂಲಕ ದೆಹಲಿ ಚಲೋ ಈ ಎರಡೂ ಮುಖ್ಯಮಂತ್ರಿಗಳ ನಡುವೆ ಗಲಾಟೆ ಹುಟ್ಟುಹಾಕಿರುವುದಂತೂ ಸತ್ಯ.

Follow Us
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು