AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ಅರವಿಂದ್ ಕೇಜ್ರಿವಾಲ್ ಮತ್ತು ಅಮರೀಂದರ್ ಸಿಂಗ್ ನಡುವೆ ಕಚ್ಚಾಟ

ನೂತನ ಕೃಷಿ ಕಾಯ್ದೆಗಳ ಕುರಿತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ನಡುವೆ ಜಟಾಪಟಿ ಆರಂಭವಾಗಿದೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಟ್ವಿಟ್ಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ನಡೆಸಿದ್ದಾರೆ.

Delhi Chalo ಅರವಿಂದ್ ಕೇಜ್ರಿವಾಲ್ ಮತ್ತು ಅಮರೀಂದರ್ ಸಿಂಗ್ ನಡುವೆ ಕಚ್ಚಾಟ
ಅರವಿಂದ್ ಕೇಜ್ರಿವಾಲ್ (ಎಡ) ಅಮರೀಂದರ್ ಸಿಂಗ್ (ಬಲ)
guruganesh bhat
|

Updated on: Dec 15, 2020 | 12:30 PM

Share

ದೆಹಲಿ: ನೂತನ ಕೃಷಿ ಕಾಯ್ದೆಗಳ ಕುರಿತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ನಡುವೆ ಜಟಾಪಟಿ ಆರಂಭವಾಗಿದೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಟ್ವಿಟ್ಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ನಡೆಸಿದ್ದಾರೆ.

ಪಂಜಾಬ್ ರೈತರಿಗೆ ಬೆಂಬಲ ಸೂಚಿಸಿ ನಿನ್ನೆ ಅರವಿಂದ್ ಕೇಜ್ರಿವಾಲ್ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಅಲ್ಲದೇ ಆಮ್​ ಆದ್ಮಿ ಪಕ್ಷದ ಕಾರ್ಯಕರ್ತರಿಗೂ ಉಪವಾಸದ ಕರೆ ನೀಡಿದ್ದರು. ಇದನ್ನು ಮೂಲವಾಗಿಟ್ಟುಕೊಂಡ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್, ರಾಜಕೀಯ ಲಾಭಕ್ಕಾಗಿ ಕೇಜ್ರಿವಾಲ್ ತಮ್ಮ ಆತ್ಮವನ್ನೇ ಮಾರಲೂಬಹುದು. ಪಂಜಾಬಿನ ರೈತರನ್ನೂ ರಾಜಕೀಯ ನಾಟಕಕ್ಕೆ ಬಳಸಿಕೊಳ್ಳಬಹುದು ಎಂದು ಯೋಚಿಸಿದ್ದರೆ ನಿಮ್ಮ ಆಸೆ ತ್ಯಜಿಸುವುದೊಳಿತು..’ ಎಂದು ಟೀಕಿಸಿದ್ದರು.

ಇದಕ್ಕೆ ನಾಟಕೀಯವಾಗಿ ಪ್ರತಿಕ್ರಿಯೆ ನೀಡಿರುವ ಅರವಿಂದ್ ಕೇಜ್ರಿವಾಲ್, ‘ ಮಾನ್ಯ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರೇ, ನೀವೂ ಸಹ ನೂತನ ಕೃಷಿ ಮಸೂದೆಗಳನ್ನು ರೂಪಿಸಿದ ಸಮೀತಿಯ ಭಾಗವಾಗಿದ್ದಿರಲ್ಲವೇ? ಕೃಷಿ ಕಾಯ್ದೆಗಳನ್ನು ರೂಪಿಸಿ ದೇಶಕ್ಕೆ ಅತ್ಯಂತ ಒಳ್ಳೆಯ ಕೊಡುಗೆಯನ್ನೇ ನೀಡಿದ್ದೀರಿ..ಇದಕ್ಕಿಂತ ಒಳ್ಳೆಯ ಕೊಡುಗೆ ನೀಡಲು ಯಾರಿಂದಲೂ ಸಾಧ್ಯವಿಲ್ಲ. ಕೃಷಿ ಕಾಯ್ದೆಗಳ ವಿಚಾರದಲ್ಲಿ ಬಿಜೆಪಿ ನಿಮ್ಮನ್ನು ಟೀಕಿಸುವುದಿಲ್ಲವೇಕೆ? ’ಎಂದು ಛೇಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ , ‘ನಾನು ಕೃಷಿ ಕಾಯ್ದೆಗಳ ಸಮೀತಿಯ ಭಾಗವಾಗಿರಲೇ ಇಲ್ಲ. ನನ್ನ ಬಳಿ ಕೃಷಿ ಕಾಯ್ದೆಗಳನ್ನು ರೂಪಿಸುವಾಗ ಬಿಜೆಪಿ ಅಥವಾ ಕೇಂದ್ರ ಸರ್ಕಾರ ಚರ್ಚಿಸಲೂ ಇಲ್ಲ. ಹೀಗಾಗಿ, ಬಿಜೆಪಿ ಬಳಿ ನನ್ನನ್ನು ದೂಷಿಸಲು ಯಾವ ಅಸ್ತ್ರವೂ ಇಲ್ಲ. ನಿಮ್ಮಂತೆ ನಾನು ಕೃಷಿ ಕಾಯ್ದೆಗಳ ಕುರಿತು ದ್ವಂದ್ವ ನೀತಿ ಹೊಂದಿಲ್ಲ’ ಎಂದಿದ್ದಾರೆ.  ಈ ಮೂಲಕ ದೆಹಲಿ ಚಲೋ ಈ ಎರಡೂ ಮುಖ್ಯಮಂತ್ರಿಗಳ ನಡುವೆ ಗಲಾಟೆ ಹುಟ್ಟುಹಾಕಿರುವುದಂತೂ ಸತ್ಯ.

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?