AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಂವಿಧಾನ ಲೈಟ್​ ಹೌಸ್​ನಂತೆ ಕಾರ್ಯನಿರ್ವಹಿಸುತ್ತೆ: ಪ್ರಧಾನಿ ಮೋದಿ

ಸಂವಿಧಾನವು ಸರ್ಕಾರಗಳಿಗೆ ಮಾರ್ಗದರ್ಶನ ನೀಡುವ ಲೈಟ್​ಹೌಸ್​ನಂತೆ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯ ಭಾಷಣದಲ್ಲಿ ಮಾತನಾಡಿದರು.

ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಂವಿಧಾನ ಲೈಟ್​ ಹೌಸ್​ನಂತೆ ಕಾರ್ಯನಿರ್ವಹಿಸುತ್ತೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jul 03, 2024 | 3:24 PM

Share

ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಂವಿಧಾನವು ಲೈಟ್​ಹೌಸ್​ನಂತೆ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯ ಭಾಷಣದಲ್ಲಿ ಮಾತನಾಡಿದರು.

ಸಂವಿಧಾನದ ಕಾರಣದಿಂದ ನನಗೆ ಇಲ್ಲಿಗೆ ಬರಲು ಅವಕಾಶ ಸಿಕ್ಕಿತು, ಸಂವಿಧಾನದ ಆಶಯ ನಮಗೆ ಅಮೂಲ್ಯ. ಸಂವಿಧಾನವು ನಮಗೆ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತದೆ. ಸಂವಿಧಾನ ದೀಪಸ್ತಂಭದಂತೆ ಕೆಲಸ ಮಾಡುತ್ತದೆ. ನವೆಂಬರ್ 24 ರಂದು ನಾವು ಸಂವಿಧಾನ ದಿನವನ್ನು ಆಚರಿಸಲು ನಿರ್ಧರಿಸಿದಾಗ, ಇಲ್ಲಿ ಸಂವಿಧಾನವನ್ನು ಬೀಸುತ್ತಿರುವವರು ಅದನ್ನು ವಿರೋಧಿಸಿದರು ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ ಸಮರ್ಪಣಾ ಮನೋಭಾವ ಮತ್ತು ನಿರಂತರ ಸೇವೆಯೊಂದಿಗೆ ಮಾಡಿದ ಕೆಲಸವನ್ನು ಸಾರ್ವಜನಿಕರು ಪೂರ್ಣ ಹೃದಯದಿಂದ ಬೆಂಬಲಿಸಿದ್ದಾರೆ. ನಾಡಿನ ಜನತೆ ಆಶೀರ್ವಾದ ಮಾಡಿದ್ದಾರೆ. ದೇಶದ ಬುದ್ಧಿವಂತಿಕೆಯ ಬಗ್ಗೆ ಒಬ್ಬರು ಹೆಮ್ಮೆಪಡುತ್ತಾರೆ. ಏಕೆಂದರೆ ದೇಶದ ಜನತೆ ಅಪಪ್ರಚಾರವನ್ನು ಸೋಲಿಸಿದ್ದಾರೆ, ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ. ವಿಶ್ವಾಸ ರಾಜಕಾರಣಕ್ಕೆ ಗೆಲುವಿನ ಮುದ್ರೆ ಹಾಕಲಾಗಿದೆ ಎಂದರು.

ಮತ್ತಷ್ಟು ಓದಿ: ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ವಿಪಕ್ಷ ನಾಯಕರಿಗೆ ನೀರು ಕೊಟ್ಟ ಪ್ರಧಾನಿ ಮೋದಿ

ಬಡತನದ ವಿರುದ್ಧ ಹೋರಾಟ ಬಡತನದ ವಿರುದ್ಧದ ಹೋರಾಟದಲ್ಲಿ ಈ ದೇಶ ಗೆಲ್ಲುತ್ತದೆ. ದೇಶವು ಮೂರನೇ ಅತಿದೊಡ್ಡ ಆರ್ಥಿಕತೆಯಾದಾಗ, ಅದು ಜೀವನದ ಎಲ್ಲಾ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದೆ. ಅಭಿವೃದ್ಧಿಗೆ ಹಲವು ಅವಕಾಶಗಳು ಬರಲಿವೆ ಎಂದರು.

ನಮ್ಮ ದೇಶದ ಆರ್ಥಿಕತೆಯನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ಯಶಸ್ಸನ್ನು ಸಾಧಿಸಿದ್ದೇವೆ. ದೇಶದ ಆರ್ಥಿಕತೆಯನ್ನು ವಿಶ್ವದ ಅಗ್ರ ಮೂರು ಸ್ಥಾನಕ್ಕೆ ಕೊಂಡೊಯ್ಯುತ್ತೇವೆ.

ಪ್ರಧಾನಿ ಮೋದಿಯವರ ಭಾಷಣದ ಮಧ್ಯೆ ವಿರೋಧ ಪಕ್ಷದ ಸಂಸದರು ತಮ್ಮ ಸ್ಥಾನದಿಂದ ಎದ್ದುನಿಂತು ರಾಜ್ಯಸಭೆಯನ್ನು ಮುಂದೂಡುವಂತೆ ಆಗ್ರಹಿಸಿದವು. ದೇಶದ ಜನರು ವಿಕಸಿತ ಭಾರತ ಹಾಗೂ ಆತ್ಮನಿರ್ಭರ ಭಾರತವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮತ್ತೆ ನಮ್ಮನ್ನು ಆಯ್ಕೆ ಮಾಡಿದ್ದಾರೆ.

12 ಲಕ್ಷ ರಸಗೊಬ್ಬರದಲ್ಲಿ ಸಬ್ಸಿಡಿ ನೀಡಲಾಗಿದೆ. ಇದು ದೇಶದಲ್ಲೇ ಅತಿ ಹೆಚ್ಚು,ರೈತರಿಗೆ ರಸಗೊಬ್ಬರದ ಹೊರೆ ಬೀಳಲು ಬಿಡದೆ ಸರ್ಕಾರ ತನ್ನ ಹೆಗಲ ಮೇಲೆ ಹೊರೆ ಹಾಕಿಕೊಂಡಿದೆ. ಎಂಎಸ್‌ಪಿಯಲ್ಲಿ ದಾಖಲೆ ಖರೀದಿಯನ್ನೂ ಮಾಡಿದ್ದೇವೆ. ಮೊದಲು ಕೇವಲ ಘೋಷಣೆಗಳನ್ನು ಮಾಡಲಾಗುತ್ತಿತ್ತು, ಆದರೆ ಈಗ ಖರೀದಿಗಳನ್ನು ಮಾಡಲಾಗಿದೆ ಎಂದರು.

ನಾವು ಮಹಿಳೆಯರ ಹೆಸರಿನಲ್ಲಿ ಹೆಚ್ಚಿನ ಮನೆಗಳನ್ನು ನಿರ್ಮಿಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವುದರೊಂದಿಗೆ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಪಾತ್ರ ಹೆಚ್ಚಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿದೆ. ಯಾರಿಂದಲೂ ಕಡೆಗಣಿಸಲ್ಪಟ್ಟ ಮಹಿಳೆಯರಲ್ಲಿ ಈಗ ಒಂದು ಕೋಟಿ ಮಹಿಳೆಯರು ಲಖ್ಪತಿ ದೀದಿಯಾಗಿದ್ದಾರೆ. ಈಗ ಮೂರು ಕೋಟಿ ಲಕ್ಪತಿ ದೀದಿ ಮಾಡುವ ಗುರಿ ಇದೆ.

-ಮಣಿಪುರದಲ್ಲಿ ಶಾಂತಿ ನೆಲೆಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ, ಎಲ್ಲರೂ ಸಹಕರಿಸುವಂತೆ ಕೇಳಿಕೊಳ್ಳುತ್ತೇವೆ. -ಮಣಿಪುರ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ, ಮುಂದೊಂದು ದಿನ ಮಣಿಪುರ ನಿಮ್ಮನ್ನು ತಿರಸ್ಕರಿಸುತ್ತದೆ. -ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟ ಕೊನೆಯ ಹಂತದಲ್ಲಿದೆ; ಭಯೋತ್ಪಾದನೆ, ಪ್ರತ್ಯೇಕತಾವಾದ ಕ್ಷೀಣಿಸುತ್ತಿದೆ. -ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ತನಿಖಾ ಸಂಸ್ಥೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇನೆ; ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. -ಯುಪಿಎ ಅಧಿಕಾರದಲ್ಲಿದ್ದಾಗ ಸುಪ್ರೀಂ ಕೋರ್ಟ್ ಸಿಬಿಐ ಅನ್ನು ಪಂಜರದ ಗಿಳಿ ಎಂದು ಬಣ್ಣಿಸಿತ್ತು. ಕಾಂಗ್ರೆಸ್ ಸಂವಿಧಾನದ ದೊಡ್ಡ ವಿರೋಧಿ ಎಂದು ನಾನು ಗಂಭೀರವಾಗಿ ಹೇಳುತ್ತೇನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:35 pm, Wed, 3 July 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!