AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Panchayat Election Results 2021: ಉತ್ತರಪ್ರದೇಶ ಪಂಚಾಯತ್​ ಚುನಾವಣೆ ಮತ ಎಣಿಕೆ; ಪ್ರಿಯಾಂಕಾ ಗಾಂಧಿ ತೀವ್ರ ಅಸಮಾಧಾನ

ಕೊವಿಡ್​ 19 ಬಿಕ್ಕಟ್ಟಿನ ನಡುವೆ ಉತ್ತರ ಪ್ರದೇಶದ 7.32 ಲಕ್ಷಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ವಾರ್ಡ್​ಗಳು, 58,176 ಗ್ರಾಮ ಪಂಚಾಯಿತಿಗಳು, 75,852 ಕ್ಷೇತ್ರ ಪಂಚಾಯಿತಿಗಳು, 3050 ಜಿಲ್ಲಾ ಪಂಚಾಯಿತಿಗಳಿಗೆ ಒಟ್ಟು ನಾಲ್ಕು ಹಂತದಲ್ಲಿ ಮತದಾನ ನಡೆದಿತ್ತು.

UP Panchayat Election Results 2021: ಉತ್ತರಪ್ರದೇಶ ಪಂಚಾಯತ್​ ಚುನಾವಣೆ ಮತ ಎಣಿಕೆ; ಪ್ರಿಯಾಂಕಾ ಗಾಂಧಿ ತೀವ್ರ ಅಸಮಾಧಾನ
ಪ್ರಿಯಾಂಕಾ ಗಾಂಧಿ
Lakshmi Hegde
|

Updated on: May 02, 2021 | 10:53 AM

Share

ಲಖನೌ: ಚುನಾವಣಾ ಪ್ರಕ್ರಿಯೆಗಳಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ್ದರಿಂದ ಉತ್ತರ ಪ್ರದೇಶ ಪಂಚಾಯಿತಿ ಚುನಾವಣೆಯ ಮತ ಎಣಿಕೆಯೂ ಕೂಡ ಇಂದು ಬೆಳಗ್ಗೆಯಿಂದಲೇ ಪ್ರಾರಂಭವಾಗಿದೆ. ಈ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಮತ ಎಣಿಕೆ ನಡೆಸಲು ಅವಕಾಶ ನೀಡಬಾರದು ಎಂದು ಸಚಿನ್​ ಯಾದವ್​ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಲು ನಿರಾಕರಿಸಿತ್ತು. ಹಾಗೇ, ಕೊವಿಡ್​ 19 ನಿಯಂತ್ರಣಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಮತ ಎಣಿಕೆ ನಡೆಸಬಹುದು ಎಂದು ಹೇಳಿತ್ತು.

ಅದರಂತೆ ಇಂದು ಬೆಳಗ್ಗೆಯಿಂದ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ವಿಶೇಷವೆಂದರೆ ಈ ಚುನಾವಣೆ ಕಣದಲ್ಲಿ ಕೇವಲ ಕಾಂಗ್ರೆಸ್​, ಬಿಜೆಪಿ, ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಾರ್ಟಿ (ಬಿಎಸ್​ಪಿ) ಅಭ್ಯರ್ಥಿಗಳಷ್ಟೇ ಅಲ್ಲದೆ, ಅಸಾದುದ್ದೀನ್ ಒವೈಸಿ ಮತ್ತು ಕೇಜ್ರಿವಾಲ್ ನೇತೃತ್ವದ ಆಮ್​ ಆದ್ಮಿ ಪಕ್ಷ (ಆಪ್​)ಗಳೂ ಕೂಡ ಕಣದಲ್ಲಿವೆ. ಹಾಗಾಗಿ ಈ ಚುನಾವಣೆ ಫಲಿತಾಂಶ ಕೂಡ ಕುತೂಹಲಕ್ಕೆ ಕಾರಣವಾಗಿದೆ.

ಕೊವಿಡ್​ 19 ಬಿಕ್ಕಟ್ಟಿನ ನಡುವೆ ಉತ್ತರ ಪ್ರದೇಶದ 7.32 ಲಕ್ಷಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ವಾರ್ಡ್​ಗಳು, 58,176 ಗ್ರಾಮ ಪಂಚಾಯಿತಿಗಳು, 75,852 ಕ್ಷೇತ್ರ ಪಂಚಾಯಿತಿಗಳು, 3050 ಜಿಲ್ಲಾ ಪಂಚಾಯಿತಿಗಳಿಗೆ ಒಟ್ಟು ನಾಲ್ಕು ಹಂತದಲ್ಲಿ ಮತದಾನ ನಡೆದಿತ್ತು. ಎಲ್ಲ ಹಂತದಲ್ಲೂ ಶೇ.70ರಷ್ಟು ವೋಟಿಂಗ್​ ನಡೆದಿತ್ತು. ಇಂದು ಮತ ಎಣಿಕೆ ನಿಮಿತ್ತ ಎಲ್ಲ ಕೇಂದ್ರಗಳಲ್ಲೂ ಕೊವಿಡ್ 19 ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ವೈದ್ಯರು, ನರ್ಸ್​ಗಳು ಇದ್ದಾರೆ. ಜನರು ಗುಂಪುಗೂಡಲು ಅವಕಾಶ ನೀಡುತ್ತಿಲ್ಲ. ಸುಪ್ರೀಂಕೋರ್ಟ್​ ಸೂಚನೆಯಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಮತ ಎಣಿಕೆ ನಡೆಯುತ್ತಿದೆ.

ಪ್ರಿಯಾಂಕಾ ಗಾಂಧಿ ಅಸಮಾಧಾನ ಇನ್ನು ಪಂಚಾಯಿತಿ ಚುನಾವಣೆಗೆ ಹಾಜರಾಗಿದ್ದ 700ಕ್ಕೂ ಹೆಚ್ಚು ಶಿಕ್ಷಕರು ಕೊವಿಡ್ 19 ನಿಂದ ಮೃತಪಟ್ಟ ಬೆನ್ನಲ್ಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯ ಚುನಾವಣಾ ಆಯೋಗದ ವಿರುದ್ಧ ಕಿಡಿ ಕಾರಿದ್ದಾರೆ. ಒಬ್ಬ ಗರ್ಭಿಣಿ ಶಿಕ್ಷಕಿ ಸೇರಿ 700ಕ್ಕೂ ಹೆಚ್ಚು ಶಿಕ್ಷಕರ ಜೀವವೇ ಹೋದರೂ ತಲೆಕೆಡಿಸಿಕೊಂಡಿಲ್ಲ. ಕೊವಿಡ್​ 19 ಭೀಕರತೆ ಗೊತ್ತಿದ್ದರೂ ಚುನಾವಣೆಗಳನ್ನು ಆಯೋಜಿಸಲಾಗಿತ್ತು. ಇದು ಅಪರಾಧ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ ಹೊಸ ಮಾರ್ಗಸೂಚಿಗೆ ತರಕಾರಿ ಮಾರಾಟ ಮಹಿಳೆಯರ ಕಣ್ಣೀರು

ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಟ, ಹಾಸನದಲ್ಲಿ ಮನಕಲಕುವ ಘಟನೆ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!