AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿ ತಿರಸ್ಕೃತ,14 ದಿನಗಳ ನ್ಯಾಯಾಂಗ ಬಂಧನ ಆದೇಶಿಸಿದ ಕೋರ್ಟ್

ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ, 14 ದಿನಗಳ ನ್ಯಾಯಾಂಗ ಬಂಧನವನ್ನು ನೀಡಿದೆ. 

ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿ ತಿರಸ್ಕೃತ,14 ದಿನಗಳ ನ್ಯಾಯಾಂಗ ಬಂಧನ ಆದೇಶಿಸಿದ ಕೋರ್ಟ್
ಮೊಹಮ್ಮದ್ ಜುಬೇರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 02, 2022 | 3:45 PM

Share

ಆಲ್ಟ್ ನ್ಯೂಸ್ (Alt News) ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ (Mohammed Zubair) ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು (Delhi court) ಶನಿವಾರ ತಿರಸ್ಕರಿಸಿದೆ.  ಹಿಂದೂ ದೇವತೆಯ ವಿರುದ್ಧ ಅವರು 2018 ರಲ್ಲಿ ಪೋಸ್ಟ್ ಮಾಡಿದ “ಆಕ್ಷೇಪಾರ್ಹ ಟ್ವೀಟ್” ಗೆ ಸಂಬಂಧಿಸಿದ ಪ್ರಕರಣದಲ್ಲಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.  ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಪೊಲೀಸ್ ಮನವಿಯನ್ನು ಸ್ವೀಕರಿಸಿ ಈ ಆದೇಶ ನೀಡಿದ್ದಾರೆ. ಜುಬೇರ್ ಅವರ ಐದು ದಿನಗಳ ಕಸ್ಟಡಿಯಲ್ ವಿಚಾರಣೆಯ ಅವಧಿ ಮುಗಿದ ನಂತರ ಪೊಲೀಸರು ಅವರನ್ನು ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಜುಬೇರ್ ಅವರ ಕಸ್ಟಡಿಯಲ್ ವಿಚಾರಣೆಗಾಗಿ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಪೊಲೀಸರು ಒತ್ತಾಯಿಸಿದ್ದಾರೆ. ಪೊಲೀಸ್ ಅರ್ಜಿಯ ನಂತರ, ಜುಬೇರ್ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಪತ್ರಕರ್ತ ಮೊಹಮ್ಮದ್ ಜುಬೇರ್ ಅವರು ಪಾಕಿಸ್ತಾನ ಮತ್ತು ಇತರ ದೇಶಗಳಿಂದ ಪೇಮೆಂಟ್ ಗೇಟ್‌ವೇ ರೇಜರ್‌ಪೇ ಮೂಲಕ ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯದಲ್ಲಿ ಶನಿವಾರ ವಿಚಾರಣೆ ನಡೆಸಲಾಯಿತು. ದೆಹಲಿ ಪೊಲೀಸರು 33ರ ಹರೆಯದ ಜುಬೇರ್ ವಿರುದ್ಧ ಹೊಸ ಆರೋಪಗಳನ್ನು ಸೇರಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಅಪರಾಧದ ಪಿತೂರಿ) ಮತ್ತು 201 (ಸಾಕ್ಷ್ಯದ ನಾಶ), ಎಫ್‌ಸಿಆರ್‌ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ಉಲ್ಲಂಘಿಸಿ ಜುಬೇರ್ ವಿದೇಶಿ ಹಣವನ್ನು ಸ್ವೀಕರಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ 2018ರ ಟ್ವೀಟ್​​ಗೆ ಸಂಬಂಧಿಸಿದಂತೆ  ಜುಬೇರ್ ಅವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದರು.

Published On - 2:58 pm, Sat, 2 July 22

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!