AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿರುವ ಶ್ರೀಲಂಕಾದ ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡಲು ಸ್ಟಾಲಿನ್​ ನಿರ್ಧಾರ; ಶಿಬಿರದ ಹೆಸರೂ ಬದಲಾವಣೆ

ಶ್ರೀಲಂಕಾದ ತಮಿಳರು ಇರುವ ಶಿಬಿರಗಳಿಗೆ 30 ಕೋಟಿ ರೂ.ವೆಚ್ಚದಲ್ಲಿ ಕುಡಿವ ನೀರು, ವಿದ್ಯುತ್​, ಶೌಚಗೃಹದಂಥ ಮೂಲ ಸೌಕರ್ಯಗಳನ್ನು ನೀಡಲಾಗುತ್ತದೆ ಎಂದು ಎಂ.ಕೆ.ಸ್ಟಾಲಿನ್​ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿರುವ ಶ್ರೀಲಂಕಾದ ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡಲು ಸ್ಟಾಲಿನ್​ ನಿರ್ಧಾರ; ಶಿಬಿರದ ಹೆಸರೂ ಬದಲಾವಣೆ
ಎಂ.ಕೆ.ಸ್ಟಾಲಿನ್​
TV9 Web
| Edited By: |

Updated on: Aug 28, 2021 | 4:17 PM

Share

ಚೆನ್ನೈ: ‘ಶ್ರೀಲಂಕಾ​ ತಮಿಳು ನಿರಾಶ್ರಿತರ ಶಿಬಿರ’ದ ಹೆಸರನ್ನು ‘ಶ್ರೀಲಂಕಾ​ ತಮಿಳು ಪುನರ್ವಸತಿ ಶಿಬಿರ’ ಎಂದು ಬದಲಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (Tamil Nadu Chief Minister MK Stalin)​ ಇಂದು ಘೋಷಿಸಿದ್ದಾರೆ. ಇಲ್ಲಿರುವ ಶ್ರೀಲಂಕಾದ ತಮಿಳರನ್ನು ನಿರಾಶ್ರಿತರು ಎಂದು ಕರೆಯಲು ಅವರು ಅನಾಥರಲ್ಲ. ಅವರೊಂದಿಗೆ ನಾವು, ತಮಿಳುನಾಡಿನ ತಮಿಳರು ಇದ್ದೇವೆ ಎಂದು ಇಂದು ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.  

ತಮಿಳುನಾಡಿನ ಪುನರ್ವತಿ ಶಿಬಿರಗಳಲ್ಲಿ ಇರುವ ತಮಿಳಿಗರ ಕ್ಷೇಮಾಭಿವೃದ್ಧಿಗಾಗಿ ಆಗಸ್ಟ್​ 27ರಂದು ಎಂ.ಕೆ.ಸ್ಟಾಲಿನ್​ 317.4 ಕೋಟಿ ರೂಪಾಯಿ ಘೋಷಿಸಿದ್ದರು. ಹಾಗೇ, ಅವರಿಗಾಗಿ ಸರ್ಕಾರದಿಂದ, 231.54 ಕೋಟಿ ರೂ.ವೆಚ್ಚದಲ್ಲಿ 7469 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ವಿಧಾನಸಭೆಯಲ್ಲಿ ಇಂದು ಸ್ಟಾಲಿನ್​ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 108.81 ಕೋಟಿ ರೂಪಾಯಿ ವೆಚ್ಚದಲ್ಲಿ 3520 ಮನೆಗಳನ್ನು ಕಟ್ಟಿಸಲಾಗುತ್ತದೆ ಎಂದಿದ್ದಾರೆ.

ಶ್ರೀಲಂಕಾದ ತಮಿಳರು ಇರುವ ಶಿಬಿರಗಳಿಗೆ 30 ಕೋಟಿ ರೂ.ವೆಚ್ಚದಲ್ಲಿ ಕುಡಿವ ನೀರು, ವಿದ್ಯುತ್​, ಶೌಚಗೃಹದಂಥ ಮೂಲ ಸೌಕರ್ಯಗಳನ್ನು ನೀಡಲಾಗುತ್ತದೆ. ಹಾಗೇ ಅವರ ಜೀವನ ಮಟ್ಟ ಸುಧಾರಿಸಲು 5 ಕೋಟಿ ರೂಪಾಯಿ ವೆಚ್ಚದ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಸ್ಟಾಲಿನ್​ ತಿಳಿಸಿದ್ದಾರೆ.  ತಮಿಳುನಾಡಿನಲ್ಲಿ ಸುಮಾರು  3,04,269 ಜನ ಶ್ರೀಲಂಕಾದ ತಮಿಳಿಗರು, 1983ರಿಂದಲೂ ಇದ್ದಾರೆ. 29 ಜಿಲ್ಲೆಗಳಿಂದ  58,822 ನಿರಾಶ್ರಿತರ ಶಿಬಿರಗಳು ಇದ್ದವು. ಆ ಶಿಬಿರಗಳಿಗೆ ಇನ್ನು ಮುಂದೆ ಪುನರ್ವಸತಿ ಶಿಬಿರ ಎಂದು ಕರೆಯಾಲಗುತ್ತದೆ.

ಇದನ್ನೂ ಓದಿ: ಅಪಾಯದ ಅಂಚಿನಲ್ಲಿ ಪಾರಂಪರಿಕ ವಾಟರ್ ಕರೆಜ್; ಅರ್ಧಕ್ಕೆ ನಿಂತ ಭೂ ಕಾಲುವೆ ಕಾಮಗಾರಿ ಆರಂಭಿಸುವಂತೆ ಜನರ ಮನವಿ

ಹಾವೇರಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ತನಿಖೆಗೆ ಎಬಿವಿಪಿ ಒತ್ತಾಯ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ