AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿರುವ ಶ್ರೀಲಂಕಾದ ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡಲು ಸ್ಟಾಲಿನ್​ ನಿರ್ಧಾರ; ಶಿಬಿರದ ಹೆಸರೂ ಬದಲಾವಣೆ

ಶ್ರೀಲಂಕಾದ ತಮಿಳರು ಇರುವ ಶಿಬಿರಗಳಿಗೆ 30 ಕೋಟಿ ರೂ.ವೆಚ್ಚದಲ್ಲಿ ಕುಡಿವ ನೀರು, ವಿದ್ಯುತ್​, ಶೌಚಗೃಹದಂಥ ಮೂಲ ಸೌಕರ್ಯಗಳನ್ನು ನೀಡಲಾಗುತ್ತದೆ ಎಂದು ಎಂ.ಕೆ.ಸ್ಟಾಲಿನ್​ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿರುವ ಶ್ರೀಲಂಕಾದ ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡಲು ಸ್ಟಾಲಿನ್​ ನಿರ್ಧಾರ; ಶಿಬಿರದ ಹೆಸರೂ ಬದಲಾವಣೆ
ಎಂ.ಕೆ.ಸ್ಟಾಲಿನ್​
TV9 Web
| Edited By: |

Updated on: Aug 28, 2021 | 4:17 PM

Share

ಚೆನ್ನೈ: ‘ಶ್ರೀಲಂಕಾ​ ತಮಿಳು ನಿರಾಶ್ರಿತರ ಶಿಬಿರ’ದ ಹೆಸರನ್ನು ‘ಶ್ರೀಲಂಕಾ​ ತಮಿಳು ಪುನರ್ವಸತಿ ಶಿಬಿರ’ ಎಂದು ಬದಲಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (Tamil Nadu Chief Minister MK Stalin)​ ಇಂದು ಘೋಷಿಸಿದ್ದಾರೆ. ಇಲ್ಲಿರುವ ಶ್ರೀಲಂಕಾದ ತಮಿಳರನ್ನು ನಿರಾಶ್ರಿತರು ಎಂದು ಕರೆಯಲು ಅವರು ಅನಾಥರಲ್ಲ. ಅವರೊಂದಿಗೆ ನಾವು, ತಮಿಳುನಾಡಿನ ತಮಿಳರು ಇದ್ದೇವೆ ಎಂದು ಇಂದು ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.  

ತಮಿಳುನಾಡಿನ ಪುನರ್ವತಿ ಶಿಬಿರಗಳಲ್ಲಿ ಇರುವ ತಮಿಳಿಗರ ಕ್ಷೇಮಾಭಿವೃದ್ಧಿಗಾಗಿ ಆಗಸ್ಟ್​ 27ರಂದು ಎಂ.ಕೆ.ಸ್ಟಾಲಿನ್​ 317.4 ಕೋಟಿ ರೂಪಾಯಿ ಘೋಷಿಸಿದ್ದರು. ಹಾಗೇ, ಅವರಿಗಾಗಿ ಸರ್ಕಾರದಿಂದ, 231.54 ಕೋಟಿ ರೂ.ವೆಚ್ಚದಲ್ಲಿ 7469 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ವಿಧಾನಸಭೆಯಲ್ಲಿ ಇಂದು ಸ್ಟಾಲಿನ್​ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 108.81 ಕೋಟಿ ರೂಪಾಯಿ ವೆಚ್ಚದಲ್ಲಿ 3520 ಮನೆಗಳನ್ನು ಕಟ್ಟಿಸಲಾಗುತ್ತದೆ ಎಂದಿದ್ದಾರೆ.

ಶ್ರೀಲಂಕಾದ ತಮಿಳರು ಇರುವ ಶಿಬಿರಗಳಿಗೆ 30 ಕೋಟಿ ರೂ.ವೆಚ್ಚದಲ್ಲಿ ಕುಡಿವ ನೀರು, ವಿದ್ಯುತ್​, ಶೌಚಗೃಹದಂಥ ಮೂಲ ಸೌಕರ್ಯಗಳನ್ನು ನೀಡಲಾಗುತ್ತದೆ. ಹಾಗೇ ಅವರ ಜೀವನ ಮಟ್ಟ ಸುಧಾರಿಸಲು 5 ಕೋಟಿ ರೂಪಾಯಿ ವೆಚ್ಚದ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಸ್ಟಾಲಿನ್​ ತಿಳಿಸಿದ್ದಾರೆ.  ತಮಿಳುನಾಡಿನಲ್ಲಿ ಸುಮಾರು  3,04,269 ಜನ ಶ್ರೀಲಂಕಾದ ತಮಿಳಿಗರು, 1983ರಿಂದಲೂ ಇದ್ದಾರೆ. 29 ಜಿಲ್ಲೆಗಳಿಂದ  58,822 ನಿರಾಶ್ರಿತರ ಶಿಬಿರಗಳು ಇದ್ದವು. ಆ ಶಿಬಿರಗಳಿಗೆ ಇನ್ನು ಮುಂದೆ ಪುನರ್ವಸತಿ ಶಿಬಿರ ಎಂದು ಕರೆಯಾಲಗುತ್ತದೆ.

ಇದನ್ನೂ ಓದಿ: ಅಪಾಯದ ಅಂಚಿನಲ್ಲಿ ಪಾರಂಪರಿಕ ವಾಟರ್ ಕರೆಜ್; ಅರ್ಧಕ್ಕೆ ನಿಂತ ಭೂ ಕಾಲುವೆ ಕಾಮಗಾರಿ ಆರಂಭಿಸುವಂತೆ ಜನರ ಮನವಿ

ಹಾವೇರಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ತನಿಖೆಗೆ ಎಬಿವಿಪಿ ಒತ್ತಾಯ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​