AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಶಬರಿಮಲೆ ದೇಗುಲಕ್ಕೆ ಭಕ್ತರಿಗೆ ಪ್ರವೇಶಾವಕಾಶ; ಆದರೂ ಇನ್ನೆರಡು ದಿನ ಯಾರೂ ಬರಬೇಡಿ ಎನ್ನುತ್ತಿರುವ ಟಿಡಿಬಿ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಂದು ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನದ ಬಾಗಿಲು ನಿನ್ನೆಯೇ ತುಲಾ ಮಾಸದ ಪೂಜೆ ನಿಮಿತ್ತ ತೆರೆಯಲಾಗಿದೆ. ಆದರೆ ನಿನ್ನೆ ಸಂಜೆ ಭಕ್ತರಿಗೆ ಪ್ರವೇಶ ಇರಲಿಲ್ಲ. ಇಂದು ಬೆಳಗ್ಗೆಯಿಂದ ಭಕ್ತರೂ ದೇಗುಲಕ್ಕೆ ಪ್ರವೇಶ ಮಾಡಬಹುದಾಗಿದೆ.  ಇಂದು ಮುಂಜಾನೆ 5 ಗಂಟೆಯಿಂದಲೇ ದೇಗುಲದ ಬಾಗಿಲು ತೆರೆದಿದ್ದು, ಅಕ್ಟೋಬರ್​ 21ರವರೆಗೂ ಭಕ್ತರಿಗೆ ಪ್ರವೇಶಾವಕಾಶ ಇದ್ದು, ಪೂಜೆ ಸಲ್ಲಿಸಬಹುದಾಗಿದೆ.   ಇಂದಿನಿಂದ ಬಾಗಿಲು ತೆರೆದಿದ್ದರೂ ಭಕ್ತರು ಆನ್​ಲೈನ್​ ಮೂಲಕ ಬುಕ್​ ಮಾಡಿಕೊಂಡೇ ಬರಬೇಕಾಗಿದೆ. https://www.onlinetdb.com/tdbweb/dist/ ಮೂಲಕ […]

ಇಂದಿನಿಂದ ಶಬರಿಮಲೆ ದೇಗುಲಕ್ಕೆ ಭಕ್ತರಿಗೆ ಪ್ರವೇಶಾವಕಾಶ; ಆದರೂ ಇನ್ನೆರಡು ದಿನ ಯಾರೂ ಬರಬೇಡಿ ಎನ್ನುತ್ತಿರುವ ಟಿಡಿಬಿ
ಶಬರಿಮಲೆ ದೇಗುಲ
TV9 Web
| Edited By: |

Updated on: Oct 17, 2021 | 2:49 PM

Share

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಂದು ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನದ ಬಾಗಿಲು ನಿನ್ನೆಯೇ ತುಲಾ ಮಾಸದ ಪೂಜೆ ನಿಮಿತ್ತ ತೆರೆಯಲಾಗಿದೆ. ಆದರೆ ನಿನ್ನೆ ಸಂಜೆ ಭಕ್ತರಿಗೆ ಪ್ರವೇಶ ಇರಲಿಲ್ಲ. ಇಂದು ಬೆಳಗ್ಗೆಯಿಂದ ಭಕ್ತರೂ ದೇಗುಲಕ್ಕೆ ಪ್ರವೇಶ ಮಾಡಬಹುದಾಗಿದೆ.  ಇಂದು ಮುಂಜಾನೆ 5 ಗಂಟೆಯಿಂದಲೇ ದೇಗುಲದ ಬಾಗಿಲು ತೆರೆದಿದ್ದು, ಅಕ್ಟೋಬರ್​ 21ರವರೆಗೂ ಭಕ್ತರಿಗೆ ಪ್ರವೇಶಾವಕಾಶ ಇದ್ದು, ಪೂಜೆ ಸಲ್ಲಿಸಬಹುದಾಗಿದೆ.  

ಇಂದಿನಿಂದ ಬಾಗಿಲು ತೆರೆದಿದ್ದರೂ ಭಕ್ತರು ಆನ್​ಲೈನ್​ ಮೂಲಕ ಬುಕ್​ ಮಾಡಿಕೊಂಡೇ ಬರಬೇಕಾಗಿದೆ. https://www.onlinetdb.com/tdbweb/dist/ ಮೂಲಕ ಲಾಗಿನ್​ ಆಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಹಾಗೇ ಬರುವವರು ಇತ್ತೀಚೆಗೆ ಆರ್​ಟಿ-ಪಿಸಿಆರ್​ ಟೆಸ್ಟ್​ ಮಾಡಿಸಿ ನೆಗೆಟಿವ್​ ಬಂದ ರಿಪೋರ್ಟ್ ಮತ್ತು ಕೊವಿಡ್​ 19 ಲಸಿಕೆ ಎರಡೂ ಡೋಸ್​ ಆಗಿರುವ ಸರ್ಟಿಫಿಕೇಟ್​​ ತರುವುದು ಕಡ್ಡಾಯ ದೇಗುಲ ಪ್ರವೇಶಕ್ಕೂ ಮೊದಲು ಇವೆರಡೂ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ.  ಹಾಗೇ, ಕೊವಿಡ್​ 19 ಕಾರಣದಿಂದ ದೇಗುಲದಲ್ಲಿ ಒಂದು ದಿನಕ್ಕೆ 15000 ಭಕ್ತರಿಗೆ ಮಾತ್ರ ಅವಕಾಶ ಇದೆ.  ಶಬರಿಮಲೆ ದೇಗುಲ ಅತ್ಯಂತ ಪ್ರಸಿದ್ಧ ಪಡೆದ ದೇವಾಲಯ. ಆದರೆ ಇದು ಉಳಿದ ದೇವಸ್ಥಾನಗಳಂತೆ ಪ್ರತಿದಿನ ಬಾಗಿಲು ತೆರೆಯುವುದಿಲ್ಲ. ತಿಂಗಳಲ್ಲಿ 5 ದಿನಗಳು ಮಾತ್ರ ಬಾಗಿಲು ತೆರೆಯಲಾಗುತ್ತದೆ.

ಎರಡು ದಿನ ದೇಗುಲಕ್ಕೆ ಬರಬೇಡಿ ಎನ್ನುತ್ತಿರುವ ಟಿಡಿಬಿ ಕೇರಳದಲ್ಲಿ ಸಿಕ್ಕಾಪಟೆ ಮಳೆಸುರಿಯುತ್ತಿದೆ. ಮಳೆಯಿಂದಾದ ಅವಘಡದಿಂದ ಈಗಾಗಲೇ 9ಕ್ಕೂ ಹೆಚ್ಚು ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಇನ್ನೂ ಎರಡು ದಿನ ವಿಪರೀತಿ ಮಳೆ ಸುರಿಯುವ ಕಾರಣ ಆದಷ್ಟು ಭಕ್ತರು ದೇವಾಲಯಕ್ಕೆ ಬಿಂದು ತೊಂದರೆ ಅನುಭವಿಸಬೇಡಿ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಹೇಳಿದೆ. ಅದರಲ್ಲೂ ಶಬರಿಮಲೆ ದೇವಾಲಯ ಇರುವ ಪಥನಂತಿಟ್ಟ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಪಂಬಾ ನದಿಯಲ್ಲಿ ನೀರಿನ ಮಟ್ಟ ಅಪಾಯದ ಹಂತ ತಲುಪಿದೆ.  ಈಗಾಗಲೇ ಕೊಟ್ಟಾಯಂ, ಪಥನಂತಿಟ್ಟ ಸೇರಿ ಹಲವು ಪ್ರದೇಶಗಳಲ್ಲಿ ಅವಘಡಗಳು ನಡೆಯುತ್ತಿರುವ ಕಾರಣ ಭಾರತೀಯ ಸೇನೆ, ಸ್ಥಳೀಯ ರಕ್ಷಣಾ ಪಡೆಗಳೆಲ್ಲ ಸೇರಿ ಜನರನ್ನು ಸ್ಥಳಾಂತರಗೊಳಿಸುವ ಕಾರ್ಯಾಚರಣೆ ಮಾಡುತ್ತಿವೆ.

ಇದನ್ನೂ ಓದಿ: ಬಿಜೆಪಿ ಅಥವಾ ಜೆಡಿಎಸ್​ನಿಂದ ಸುಪಾರಿ ಪಡೆದು ಸಲೀಂ ಹೇಳಿಕೆ ನೀಡಿರಬಹುದು: ಎಂ ಲಕ್ಷ್ಮಣ್ ಆರೋಪ

ಪತಿ ಚಿರುಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡು, ಆಡುವವರ ಬಾಯಿ ಮುಚ್ಚಿಸಿದ ಮೇಘನಾ ರಾಜ್

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್