AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಸುದ್ದಿಗಳನ್ನು ಕೇಂದ್ರ ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ: ಐಟಿ ನಿಯಮಗಳ ತಿದ್ದುಪಡಿ ಬಗ್ಗೆ ಎಡಿಟರ್ಸ್ ಗಿಲ್ಡ್

ಈ ಹೊಸ ತಿದ್ದುಪಡಿಯನ್ನು ತೆಗೆದುಹಾಕಲು ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ದುರ್ಬಲಗೊಳಿಸದಂತೆ ಡಿಜಿಟಲ್ ಮಾಧ್ಯಮದ ನಿಯಂತ್ರಕ ಚೌಕಟ್ಟಿನ ಕುರಿತು ಪತ್ರಿಕಾ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಅರ್ಥಪೂರ್ಣ ಸಮಾಲೋಚನೆಗಳನ್ನು ಪ್ರಾರಂಭಿಸಲು ಗಿಲ್ಡ್, ಸಚಿವಾಲಯವನ್ನು ಒತ್ತಾಯಿಸುತ್ತದೆ

ನಕಲಿ ಸುದ್ದಿಗಳನ್ನು ಕೇಂದ್ರ ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ: ಐಟಿ ನಿಯಮಗಳ ತಿದ್ದುಪಡಿ ಬಗ್ಗೆ ಎಡಿಟರ್ಸ್ ಗಿಲ್ಡ್
ಎಡಿಟರ್ಸ್ ಗಿಲ್ಡ್Image Credit source: www.exchange4media.com
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jan 19, 2023 | 1:58 PM

Share

ದೆಹಲಿ: ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ (PIB)ಯಿಂದ ಫೇಕ್ (Fake) ಎಂದು ಪರಿಗಣಿಸಲಾದ ಸುದ್ದಿ ಲೇಖನಗಳನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ಕಂಪನಿಗಳನ್ನು ಕೇಳುವ ಐಟಿ ನಿಯಮಗಳಿಗೆ ಕರಡು ತಿದ್ದುಪಡಿಯನ್ನು ತೆಗೆದುಹಾಕಲು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (Editors Guild of India) ಸರ್ಕಾರವನ್ನು ಒತ್ತಾಯಿಸಿದೆ. ಈ ಹೊಸ ತಿದ್ದುಪಡಿಯನ್ನು ತೆಗೆದುಹಾಕಲು ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ದುರ್ಬಲಗೊಳಿಸದಂತೆ ಡಿಜಿಟಲ್ ಮಾಧ್ಯಮದ ನಿಯಂತ್ರಕ ಚೌಕಟ್ಟಿನ ಕುರಿತು ಪತ್ರಿಕಾ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಅರ್ಥಪೂರ್ಣ ಸಮಾಲೋಚನೆಗಳನ್ನು ಪ್ರಾರಂಭಿಸಲು ಗಿಲ್ಡ್, ಸಚಿವಾಲಯವನ್ನು ಒತ್ತಾಯಿಸುತ್ತದೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಹೇಳಿದೆ. ನಕಲಿ ಸುದ್ದಿಗಳ ನಿರ್ಣಯವು ಸರ್ಕಾರದ ಕೈಯಲ್ಲಿ ಮಾತ್ರ ಇರಬಾರದು. ಇದು ಪತ್ರಿಕಾ ಸೆನ್ಸಾರ್​​ಶಿಪ್​ಗೆ ಕಾರಣವಾಗುತ್ತದೆ ಎಂದು ಮಾಹಿತಿ ತಂತ್ರಜ್ಞಾನ ನಿಯಮದ ಕರಡು ತಿದ್ದುಪಡಿಯ ಬಗ್ಗೆ ಗಿಲ್ಡ್  ಕಳವಳ ವ್ಯಕ್ತಪಡಿಸಿದೆ.

ವಾಸ್ತವಿಕವಾಗಿ ತಪ್ಪಾಗಿರುವ ವಿಷಯವನ್ನು ಎದುರಿಸಲು ಈಗಾಗಲೇ ಅನೇಕ ಕಾನೂನುಗಳು ಅಸ್ತಿತ್ವದಲ್ಲಿವೆ ಎಂದು ಅದು ಹೇಳಿದೆ. “ಈ ಹೊಸ ಕಾರ್ಯವಿಧಾನವು ಮೂಲಭೂತವಾಗಿ ಮುಕ್ತ ಮುದ್ರಣವನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. PIB ಗೆ ವ್ಯಾಪಕ ಅಧಿಕಾರವನ್ನು ನೀಡುತ್ತದೆ, ಅಥವಾ ಯಾವುದೇ ಫ್ಯಾಕ್ಟ್ ಚೆಕಿಂಗ್​​​ಗಾಗಿ ಕೇಂದ್ರ ಸರ್ಕಾರದಿಂದ ಅಧಿಕಾರ ಹೊಂದಿರುವ ಯಾವುದೇ ಸಂಸ್ಥೆ’ಯು ಸರ್ಕಾರಕ್ಕೆ ಸಮಸ್ಯಾತ್ಮಕ ಎಂದು ತೋರುವ ಸಂಗತಿ ಆನ್‌ಲೈನ್ ಮಾಧ್ಯಮದಲ್ಲಿ ಪ್ರಕಟವಾದರೆ ಅದನ್ನು ತೆಗೆದುಹಾಕಲು ಒತ್ತಾಯಿಸುತ್ತದೆ ಎಂದು ಗಿಲ್ಡ್ ಹೇಳಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮಂಗಳವಾರ ಕರಡು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ಗೆ ಮಾರ್ಪಾಡು ಮಾಡಿದ್ದು ಅದನ್ನು ಸಾರ್ವಜನಿಕ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ.

ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗಾಗಿ “ಡ್ಯೂ ಡಿಲಿಜೆನ್ಸ್ ವಿಭಾಗದಲ್ಲಿ” ಮಾಡಲಾದ ಸೇರ್ಪಡೆಯು, “ಸಂದೇಶದ ಮೂಲದ ಬಗ್ಗೆ ಬಳಕೆದಾರರನ್ನು ಮೋಸಗೊಳಿಸುವ ಅಥವಾ ತಪ್ಪುದಾರಿಗೆಳೆಯುವ ಅಥವಾ ಉದ್ದೇಶಪೂರ್ವಕವಾಗಿ ಯಾವುದೇ ತಪ್ಪು ಮಾಹಿತಿಯನ್ನು ತಿಳಿಸುವ” ಮಾಹಿತಿಯನ್ನು ಪ್ರಕಟಿಸಲು ಮಧ್ಯವರ್ತಿಯನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳುತ್ತದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ PIB ಫ್ಯಾಕ್ಟ್ ಚೆಕ್ ಘಟಕದಿಂದ ನಕಲಿ ಅಥವಾ ಸುಳ್ಳು ಎಂದು ಗುರುತಿಸಲಾದ ಅಥವಾ ಕೇಂದ್ರ ಸರ್ಕಾರದಿಂದ ಅಧಿಕಾರ ಪಡೆದ ಇತರ ಫ್ಯಾಕ್ಟ್ ಚೆಕಿಂಗ್ ಸಂಸ್ಥೆ, ಆನ್ ಲೈನ್ ಮಾಧ್ಯಮದಲ್ಲಿ ಪ್ರಕಟಿಸಿರುವ ಮಾಹಿತಿ ನಕಲಿ ಎಂದು ಹೇಳಿದರೆ ಆ ಮಾಹಿತಿಯನ್ನು ಪ್ರಸಾರ ಮಾಡಲು ಅನುಮತಿಸಲಾಗುವುದಿಲ್ಲ  ಎಂದು ಇದು ಹೇಳುತ್ತದೆ.

ಇದನ್ನೂ ಓದಿ: Raghuram Rajan on Rahul Gandhi: ರಾಹುಲ್ ಗಾಂಧಿ ಪಪ್ಪು ಅಲ್ಲ, ಬುದ್ಧಿವಂತ; ರಘುರಾಮ್ ರಾಜನ್ ಮೆಚ್ಚುಗೆ

ಇದಲ್ಲದೆ, ‘ಕೇಂದ್ರ ಸರ್ಕಾರದ ಯಾವುದೇ ವ್ಯವಹಾರಕ್ಕೆ ಸಂಬಂಧಿಸಿದಂತೆ’ ಎಂಬ ಪದಗಳು ಸರ್ಕಾರಕ್ಕೆ ತನ್ನ ಸ್ವಂತ ಕೆಲಸಕ್ಕೆ ಸಂಬಂಧಿಸಿದಂತೆ ಯಾವುದು ನಕಲಿ ಅಥವಾ ಅಲ್ಲ ಎಂಬುದನ್ನು ನಿರ್ಧರಿಸಲು ಪೂರ್ಣಾಧಿಕಾರವನ್ನು ನೀಡುತ್ತದೆ. ಇದು ಸರ್ಕಾರದ ನ್ಯಾಯಸಮ್ಮತ ಟೀಕೆಗಳನ್ನು ನಿಗ್ರಹಿಸುತ್ತದೆ. ಹೀಗಾದರೆ ಸರ್ಕಾರಗಳನ್ನು ಪ್ರಶ್ನಿಸುವ, ಪ್ರಜಾಪ್ರಭುತ್ವದಲ್ಲಿ ಪ್ರಮುಖ ಪಾತ್ರವಹಿಸುವ ಪತ್ರಿಕಾ ಸಾಮರ್ಥ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಗಿಲ್ಡ್ ಹೇಳಿದೆ.

ಮಾರ್ಚ್ 2021 ರಲ್ಲಿ ಮೊದಲ ಬಾರಿಗೆ ಪರಿಚಯಿಸಲಾದ ಐಟಿ ನಿಯಮಗಳ ಬಗ್ಗೆ ಗಿಲ್ಡ್ ತೀವ್ರವಾದ ಕಾಳಜಿಯನ್ನು ವ್ಯಕ್ತಪಡಿಸಿತ್ತು. ಇದು ಯಾವುದೇ ನ್ಯಾಯಾಂಗ ಮೇಲ್ವಿಚಾರಣೆಯಿಲ್ಲದೆ ದೇಶದಲ್ಲಿ ಎಲ್ಲಿಯಾದರೂ ಪ್ರಕಟಿತ ಸುದ್ದಿಗಳನ್ನು ನಿರ್ಬಂಧಿಸಲು, ಅಳಿಸಲು ಅಥವಾ ಮಾರ್ಪಡಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ ಎಂದು ಗಿಲ್ಡ್ ಹೇಳಿತ್ತು. ಈ ನಿಯಮಗಳಲ್ಲಿನ ವಿವಿಧ ನಿಬಂಧನೆಗಳು ಡಿಜಿಟಲ್ ಸುದ್ದಿ ಮಾಧ್ಯಮದ ಮೇಲೆ ಅಸಮಂಜಸವಾದ ನಿರ್ಬಂಧಗಳನ್ನು ಇರಿಸುವ ಸಾಮರ್ಥ್ಯವನ್ನು ಹೊಂದಿವೆ. ಇದು ಮಾಧ್ಯಮದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ಗಿಲ್ಡ್ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!