AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿವಿನಲ್ಲಿರುವ ಚಿತಾಲ್ ಜಿಂಕೆಗಳು ಚೀತಾಕ್ಕೆ ಆಹಾರ? ಬಿಷ್ಣೋಯ್ ಸಮುದಾಯದಿಂದ ಮೋದಿಗೆ ಪತ್ರ

ಹೊಸ ಚೀತಾಗಳಿಗೆ ಆಹಾರಕ್ಕಾಗಿ ರಾಜಸ್ಥಾನದಿಂದ ಜಿಂಕೆಗಳನ್ನು ರಾಜ್ಯದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾಗಿದೆ ಎಂಬ ವರದಿಗಳನ್ನು ಮಧ್ಯಪ್ರದೇಶ ಸರ್ಕಾರ ನಿರಾಕರಿಸಿದೆ.

ಅಳಿವಿನಲ್ಲಿರುವ ಚಿತಾಲ್ ಜಿಂಕೆಗಳು ಚೀತಾಕ್ಕೆ ಆಹಾರ?  ಬಿಷ್ಣೋಯ್ ಸಮುದಾಯದಿಂದ ಮೋದಿಗೆ ಪತ್ರ
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 21, 2022 | 7:09 PM

Share

ಮೋದಿ ಹುಟ್ಟುಹಬ್ಬದಂದು ಆಫ್ರಿಕಾದಿಂದ ​ಎಂಟು ಆಫ್ರಿಕನ್ ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾಗಿದೆ. ಇದೀಗ ಈ ಚೀತಾ ಆಹಾರಕ್ಕಾಗಿ ರಾಜಸ್ಥಾನದಿಂದ ಚಿತಾಲ್ (ಮಚ್ಚೆಯುಳ್ಳ ಜಿಂಕೆ) ನ್ನು ತರಲಾಗಿದೆ ಎಂಬ ವರದಿಗಳನ್ನು ಮಧ್ಯಪ್ರದೇಶ ಸರ್ಕಾರ ನಿರಾಕರಿಸಿದೆ. ಹೊಸದಾಗಿ ಆಫಿಕಾದಿಂದ ತಂದಿರುವ ಚೀತಾ ಬಗ್ಗೆ ಜನರಲ್ಲಿ ಕುತೂಹಲತೆಯನ್ನು ಸೃಷ್ಟಿ ಮಾಡಿದೆ. ಆದರೆ ರಾಜಸ್ಥಾನದಿಂದ ಚಿತಾಲ್ ಅನ್ನುವ ಜಿಂಕೆಗಳನ್ನು ಚೀತಾದ ಆಹಾರಕ್ಕಾಗಿ ಕುನೋಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ದೃಢೀಕರಿಸದ ವರದಿಗಳು ಹೊರಬಂದಿದೆ.

ಈ ಬಗ್ಗೆ ರಾಜಸ್ಥಾನದ ಬಿಷ್ಣೋಯಿ ಸಮುದಾಯವು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಮರುಭೂಮಿ ರಾಜ್ಯದಲ್ಲಿ ಚಿತಾಲ್ ಪ್ರಭೇದವು ಅಳಿವಿನ ಅಂಚಿನಲ್ಲಿದೆ ಎಂದು ಹೇಳಿದೆ ಮತ್ತು ಇಂತಹ ಪ್ರಜ್ಞಾಶೂನ್ಯ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದೆ. ಬಿಷ್ಣೋಯ್ ಸಮುದಾಯದ ಸದಸ್ಯರು ಹರಿಯಾಣದ ಫತೇಹಾಬಾದ್‌ನಲ್ಲಿರುವ ಮಿನಿ-ಸೆಕ್ರೆಟರಿಯೇಟ್‌ನ ಹೊರಗೆ ಧರಣಿ ಸತ್ಯಾಗ್ರಹ ನಡೆಸಿದರು ಮತ್ತು ನಿರ್ಧಾರವನ್ನು ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವರದಿಗಳನ್ನು ತಳ್ಳಿಹಾಕಿರುವ ಮಧ್ಯಪ್ರದೇಶ ಅರಣ್ಯ ಇಲಾಖೆ ಸ್ಪಷ್ಟನೆ ನೀಡಿದೆ. ರಾಜಸ್ಥಾನದಿಂದ ಮಧ್ಯಪ್ರದೇಶಕ್ಕೆ ಯಾವುದೇ ಚಿತಾಲ್ ಅನ್ನು ತರಲಾಗಿಲ್ಲ ಏಕೆಂದರೆ ಅದಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುಮತಿ ಅಗತ್ಯವಿದೆ ಎಂದು ಹೇಳಿದೆ. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ 20,000 ಕ್ಕೂ ಹೆಚ್ಚು ಚಿತಾಲ್‌ಗಳಿವೆ, ಆದ್ದರಿಂದ ಹೊರಗಿನಿಂದ ಚಿತಾಲ್ ಅನ್ನು ತರಲಾಗುತ್ತಿದೆ ಎಂಬ ಸುದ್ದಿ ಸುಳ್ಳು ಎಂದು ಅರಣ್ಯ ಇಲಾಖೆ ಹೇಳಿದೆ.

ಭಾರತದಲ್ಲಿ ಅಳಿವಿನಂಚಿನಲ್ಲಿರುವ ಏಳು ದಶಕಗಳ ನಂತರ, ಎಂಟು ಚೀತಾಗಳನ್ನು ನಮೀಬಿಯಾದಿಂದ ದೇಶಕ್ಕೆ ತರಲಾಗಿದೆ ಮತ್ತು ಸೆಪ್ಟೆಂಬರ್ 17 ರಂದು ಕುನೋ ರಾಷ್ಟ್ರೀಯ ಉದ್ಯಾನವನದ ಸಂರಕ್ಷಿತ ಆವರಣಕ್ಕೆ ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ.

Published On - 7:07 pm, Wed, 21 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್