AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ರದ್ದತಿ ಮಸೂದೆಯನ್ನು ಚಳಿಗಾಲದ ಅಧಿವೇಶನದ ಕಾರ್ಯಸೂಚಿಯಲ್ಲಿ ಸೇರಿಸಿದ ಕೇಂದ್ರ ಸರ್ಕಾರ

ಕಳೆದ ವರ್ಷ ಸಂಸತ್ತಿನಲ್ಲಿ ಅನುಮೋದನೆಗೊಂಡು ಕಾಯ್ದೆಯಾಗಿ ಬದಲಾದ ಕೃಷಿ ಮಸೂದೆಗಳು ದೊಡ್ಡ ವಿವಾದ ಸೃಷ್ಟಿಸಿವೆ. ದೆಹಲಿಯ ಗಡಿಗಳಲ್ಲಿ ರೈತರು ಒಂದು ವರ್ಷಗಳ ಕಾಲ ಹೋರಾಟ ಮಾಡಿದರು.

ಕೃಷಿ ಕಾಯ್ದೆಗಳ ರದ್ದತಿ ಮಸೂದೆಯನ್ನು ಚಳಿಗಾಲದ ಅಧಿವೇಶನದ ಕಾರ್ಯಸೂಚಿಯಲ್ಲಿ ಸೇರಿಸಿದ ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 24, 2021 | 7:47 AM

Share

ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈಗಾಗಲೇ ವಾಪಸ್​ ಪಡೆದಿದ್ದಾರೆ. ಆದರೆ ಅದು ಸಂಸತ್ತಿನಲ್ಲಿ ರದ್ದಾಗುವವರೆಗೂ ನಾವು ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದು ಕುಳಿತಿದ್ದಾರೆ. ಈ ಮಧ್ಯೆ ನವೆಂಬರ್​ 29ರಿಂದ ಶುರುವಾಗುವ ಚಳಿಗಾಲದ ಅಧಿವೇಶನದ ಕಾರ್ಯಸೂಚಿಯಲ್ಲಿ ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021 (The Farm Laws Repeal Bill-2021)ನ್ನು ಕೂಡ ಕೇಂದ್ರ ಸರ್ಕಾರ ಪಟ್ಟಿ ಮಾಡಿದೆ.  ಹಾಗೇ, ಅಧಿವೇಶನದಲ್ಲಿ ಈ ಮೂರು ಕಾನೂನುಗಳ ಬಗ್ಗೆ ಚರ್ಚಿಸಲೆಂದೇ ನಿಖರವಾದ ದಿನವನ್ನು ನಿಗದಿಪಡಿಸಲು ಕೃಷಿ ಸಚಿವಾಲಯ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮಾಹಿತಿ ನೀಡಿದ್ದಾರೆ. 

ಕಳೆದ ವರ್ಷ ಸಂಸತ್ತಿನಲ್ಲಿ ಅನುಮೋದನೆಗೊಂಡು ಕಾಯ್ದೆಯಾಗಿ ಬದಲಾದ ಕೃಷಿ ಮಸೂದೆಗಳು ದೊಡ್ಡ ವಿವಾದ ಸೃಷ್ಟಿಸಿವೆ. ದೆಹಲಿಯ ಗಡಿಗಳಲ್ಲಿ ರೈತರು ಒಂದು ವರ್ಷಗಳ ಕಾಲ ಹೋರಾಟ ಮಾಡಿದರು. 700ಕ್ಕೂ ಹೆಚ್ಚು ಅನ್ನದಾತರು ಪ್ರಾಣ ಕಳೆದುಕೊಂಡರು. ಹಿಂಸಾಚಾರ ನಡೆದು ಅಪಾರ ನಷ್ಟವಾಯಿತು. ರೈತರ ಹೋರಾಟದ ಬಗ್ಗೆ ಸುಪ್ರೀಂಕೋರ್ಟ್​ ಕೂಡ ಕೇಂದ್ರ ಸರ್ಕಾರಕ್ಕೆ ಒತ್ತಡ ತರುತ್ತಲೇ ಇತ್ತು. ಅದೇನೇ ಇರಲಿ ಪ್ರಧಾನಿ ಮೋದಿ ಗುರುನಾನಕ ಜಯಂತಿಯಂದೇ ದೇಶವನ್ನು ಉದ್ದೇಶಿಸಿ ಮಾತನಾಡಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಭರವಸೆ ನೀಡಿದ್ದಾರೆ. ಹಾಗೇ ದೇಶದ ಜನರ ಕ್ಷಮೆ ಕೋರಿದ್ದಾರೆ. ಅಂದು ರೈತರಿಗಾಗಿ ಈ ಕಾಯ್ದೆ ತಂದೆವು, ಈಗ ದೇಶಕ್ಕಾಗಿ ವಾಪಸ್​ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ಸಂಸತ್ತಿನಲ್ಲಿ ಕೃಷಿ ಕಾಯ್ದೆಗಳನ್ನು ರದ್ದು ಮಾಡುವ ಸಂಬಂಧ ಇಂದು ಸಭೆ ನಡೆಯಲಿದೆ. ಇದರಲ್ಲಿ ಅಧಿಕೃತ ಅನುಮೋದನೆ ದೊರೆಯಲಿದೆ ಎಂದೂ ಮೂಲಗಳಿಂದ ಮಾಹಿತಿ ಸಿಕ್ಕಿದೆ. ನವೆಂಬರ್​ 29ರಿಂದ ಶುರುವಾಗಲಿರುವ ಅಧಿವೇಶನದಲ್ಲಿ ಒಟ್ಟು 26 ಹೊಸ ಮಸೂದೆಗಳ ಪರಿಚಯ ಮತ್ತು ಅಂಗೀಕಾರದ ಬಗ್ಗೆ ಕಾರ್ಯಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಈ ಕಾರ್ಯಸೂಚಿ, ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ, 2020, ರೈತರ (ಸಬಲೀಕರಣ ಮತ್ತು ರಕ್ಷಣೆ), ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020ನ್ನು ಹಿಂಪಡೆಯುವುದನ್ನೂ ಒಳಗೊಂಡಿದೆ.

ಇದನ್ನೂ ಓದಿ: Life Certificate: ಈ ತಿಂಗಳೊಳಗೆ ಜೀವಿತ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಮುಂದಿನ ತಿಂಗಳಿಂದ ಪಿಂಚಣಿ ಬರಲ್ಲ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?