AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ರದ್ದತಿ ಮಸೂದೆಯನ್ನು ಚಳಿಗಾಲದ ಅಧಿವೇಶನದ ಕಾರ್ಯಸೂಚಿಯಲ್ಲಿ ಸೇರಿಸಿದ ಕೇಂದ್ರ ಸರ್ಕಾರ

ಕಳೆದ ವರ್ಷ ಸಂಸತ್ತಿನಲ್ಲಿ ಅನುಮೋದನೆಗೊಂಡು ಕಾಯ್ದೆಯಾಗಿ ಬದಲಾದ ಕೃಷಿ ಮಸೂದೆಗಳು ದೊಡ್ಡ ವಿವಾದ ಸೃಷ್ಟಿಸಿವೆ. ದೆಹಲಿಯ ಗಡಿಗಳಲ್ಲಿ ರೈತರು ಒಂದು ವರ್ಷಗಳ ಕಾಲ ಹೋರಾಟ ಮಾಡಿದರು.

ಕೃಷಿ ಕಾಯ್ದೆಗಳ ರದ್ದತಿ ಮಸೂದೆಯನ್ನು ಚಳಿಗಾಲದ ಅಧಿವೇಶನದ ಕಾರ್ಯಸೂಚಿಯಲ್ಲಿ ಸೇರಿಸಿದ ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 24, 2021 | 7:47 AM

Share

ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈಗಾಗಲೇ ವಾಪಸ್​ ಪಡೆದಿದ್ದಾರೆ. ಆದರೆ ಅದು ಸಂಸತ್ತಿನಲ್ಲಿ ರದ್ದಾಗುವವರೆಗೂ ನಾವು ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದು ಕುಳಿತಿದ್ದಾರೆ. ಈ ಮಧ್ಯೆ ನವೆಂಬರ್​ 29ರಿಂದ ಶುರುವಾಗುವ ಚಳಿಗಾಲದ ಅಧಿವೇಶನದ ಕಾರ್ಯಸೂಚಿಯಲ್ಲಿ ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021 (The Farm Laws Repeal Bill-2021)ನ್ನು ಕೂಡ ಕೇಂದ್ರ ಸರ್ಕಾರ ಪಟ್ಟಿ ಮಾಡಿದೆ.  ಹಾಗೇ, ಅಧಿವೇಶನದಲ್ಲಿ ಈ ಮೂರು ಕಾನೂನುಗಳ ಬಗ್ಗೆ ಚರ್ಚಿಸಲೆಂದೇ ನಿಖರವಾದ ದಿನವನ್ನು ನಿಗದಿಪಡಿಸಲು ಕೃಷಿ ಸಚಿವಾಲಯ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮಾಹಿತಿ ನೀಡಿದ್ದಾರೆ. 

ಕಳೆದ ವರ್ಷ ಸಂಸತ್ತಿನಲ್ಲಿ ಅನುಮೋದನೆಗೊಂಡು ಕಾಯ್ದೆಯಾಗಿ ಬದಲಾದ ಕೃಷಿ ಮಸೂದೆಗಳು ದೊಡ್ಡ ವಿವಾದ ಸೃಷ್ಟಿಸಿವೆ. ದೆಹಲಿಯ ಗಡಿಗಳಲ್ಲಿ ರೈತರು ಒಂದು ವರ್ಷಗಳ ಕಾಲ ಹೋರಾಟ ಮಾಡಿದರು. 700ಕ್ಕೂ ಹೆಚ್ಚು ಅನ್ನದಾತರು ಪ್ರಾಣ ಕಳೆದುಕೊಂಡರು. ಹಿಂಸಾಚಾರ ನಡೆದು ಅಪಾರ ನಷ್ಟವಾಯಿತು. ರೈತರ ಹೋರಾಟದ ಬಗ್ಗೆ ಸುಪ್ರೀಂಕೋರ್ಟ್​ ಕೂಡ ಕೇಂದ್ರ ಸರ್ಕಾರಕ್ಕೆ ಒತ್ತಡ ತರುತ್ತಲೇ ಇತ್ತು. ಅದೇನೇ ಇರಲಿ ಪ್ರಧಾನಿ ಮೋದಿ ಗುರುನಾನಕ ಜಯಂತಿಯಂದೇ ದೇಶವನ್ನು ಉದ್ದೇಶಿಸಿ ಮಾತನಾಡಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಭರವಸೆ ನೀಡಿದ್ದಾರೆ. ಹಾಗೇ ದೇಶದ ಜನರ ಕ್ಷಮೆ ಕೋರಿದ್ದಾರೆ. ಅಂದು ರೈತರಿಗಾಗಿ ಈ ಕಾಯ್ದೆ ತಂದೆವು, ಈಗ ದೇಶಕ್ಕಾಗಿ ವಾಪಸ್​ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ಸಂಸತ್ತಿನಲ್ಲಿ ಕೃಷಿ ಕಾಯ್ದೆಗಳನ್ನು ರದ್ದು ಮಾಡುವ ಸಂಬಂಧ ಇಂದು ಸಭೆ ನಡೆಯಲಿದೆ. ಇದರಲ್ಲಿ ಅಧಿಕೃತ ಅನುಮೋದನೆ ದೊರೆಯಲಿದೆ ಎಂದೂ ಮೂಲಗಳಿಂದ ಮಾಹಿತಿ ಸಿಕ್ಕಿದೆ. ನವೆಂಬರ್​ 29ರಿಂದ ಶುರುವಾಗಲಿರುವ ಅಧಿವೇಶನದಲ್ಲಿ ಒಟ್ಟು 26 ಹೊಸ ಮಸೂದೆಗಳ ಪರಿಚಯ ಮತ್ತು ಅಂಗೀಕಾರದ ಬಗ್ಗೆ ಕಾರ್ಯಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಈ ಕಾರ್ಯಸೂಚಿ, ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ, 2020, ರೈತರ (ಸಬಲೀಕರಣ ಮತ್ತು ರಕ್ಷಣೆ), ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020ನ್ನು ಹಿಂಪಡೆಯುವುದನ್ನೂ ಒಳಗೊಂಡಿದೆ.

ಇದನ್ನೂ ಓದಿ: Life Certificate: ಈ ತಿಂಗಳೊಳಗೆ ಜೀವಿತ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಮುಂದಿನ ತಿಂಗಳಿಂದ ಪಿಂಚಣಿ ಬರಲ್ಲ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ