AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರಿಂದ 1 ಕೋಟಿ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ ಮೊದಲ ಮಹಿಳಾ ಟಿಸಿ

ರೈಲು ಪ್ರಯಾಣಿಕರಿಂದ 1 ಕೋಟಿ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ ಮೊದಲ ಮಹಿಳಾ ಟಿಕೆಟ್‌ ತಪಾಸಣೆ ಸಿಬ್ಬಂದಿಯನ್ನು ರೈಲ್ವೆ ಸಚಿವಾಲಯ ಶ್ಲಾಘಿಸಿದೆ .

ರೈಲು ಪ್ರಯಾಣಿಕರಿಂದ 1 ಕೋಟಿ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ ಮೊದಲ ಮಹಿಳಾ ಟಿಸಿ
ರೋಸಲಿನ್ ಅರೋಕಿಯಾ ಮೇರಿ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 23, 2023 | 6:53 PM

ರೈಲು ಪ್ರಯಾಣಿಕರಿಂದ 1 ಕೋಟಿ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ ಮೊದಲ ಮಹಿಳಾ ಟಿಕೆಟ್‌ ತಪಾಸಣೆ ಸಿಬ್ಬಂದಿಯನ್ನು (Woman Ticket Checker) ರೈಲ್ವೆ ಸಚಿವಾಲಯ ಶ್ಲಾಘಿಸಿದೆ . ದಕ್ಷಿಣ ರೈಲ್ವೆಯ ಮುಖ್ಯ ಟಿಕೆಟ್ ಪರಿವೀಕ್ಷಕಿ ರೋಸಲಿನ್ ಅರೋಕಿಯಾ ಮೇರಿ ಅವರು ಟಿಕೆಟ್ ಪಡೆಯದ ಪ್ರಯಾಣಿಕರಿಂದ 1.03 ಕೋಟಿ ರೂ. ದಂಡವನ್ನು ಸಂಗ್ರಹಿಸಿದ್ದಾರೆ . ರೈಲ್ವೇ ಸಚಿವಾಲಯ ಟ್ವಿಟರ್‌ ಮೂಲಕ ಟಿಕೆಟ್ ಪರೀಕ್ಷಕನ ಸಿಬ್ಬಂದಿ ರೋಸಲಿನ್ ಅರೋಕಿಯಾ ಮೇರಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೇರಿ ಪ್ರಯಾಣಿಕರಿಂದ ದಂಡವನ್ನು ಸಂಗ್ರಹಿಸುತ್ತಿರುವುದನ್ನು ಮತ್ತು ಪ್ರಯಾಣಿಕರಿಂದ ಟಿಕೆಟ್‌ಗಳನ್ನು ಪರೀಕ್ಷಿಸುತ್ತಿರುವ ಫೋಟೋವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಈ ಹಂಚಿಕೊಂಡ ಪೋಸ್ಟ್‌ಗೆ ಶೀರ್ಷಿಕೆಯನ್ನು ಕೂಡ ನೀಡಲಾಗಿದೆ. ತನ್ನ ಕರ್ತವ್ಯದಲ್ಲಿ ದೃಢವಾದ ಬದ್ಧತೆಯನ್ನು ತೋರಿಸುತ್ತಾ, GMSRailway ನ CTI (ಚೀಫ್ ಟಿಕೆಟ್ ಇನ್ಸ್‌ಪೆಕ್ಟರ್) ಶ್ರೀಮತಿ ರೊಸಲಿನ್ ಅರೋಕಿಯಾ ಮೇರಿ, ಅವರು 1.03 ಕೋಟಿ ರೂ. ದಂಡ ಸಂಗ್ರಹಿಸುವ ಮೂಲಕ ಭಾರತೀಯ ರೈಲ್ವೆಯ ಟಿಕೆಟ್ ತಪಾಸಣೆ ಸಿಬ್ಬಂದಿಯಲ್ಲಿ ಮೊದಲ ಮಹಿಳೆಯಾಗಿದ್ದಾರೆ. ಅನಿಯಮಿತ/ಟಿಕೆಟ್ ಪಡೆಯದ ಪ್ರಯಾಣಿಕರಿಂದ 1.03 ಕೋಟಿ ರೂ. ದಂಡ ಸಂಗ್ರಹ ಮಾಡಿದ್ದಾರೆ.

ಈ ಫೋಟೋ ಈಗ ಎಲ್ಲ ಕಡೆಯಲ್ಲೂ ವೈರಲ್ ಆಗಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಬಳಕೆದಾರರೊಬ್ಬರು ನಮ್ಮ ಭಾರತವನ್ನು ಸೂಪರ್ ಪವರ್ ಮಾಡಲು ಇಂತಹ ಸವಾಲಿನ ಮತ್ತು ಸಮರ್ಪಿತ ಮಹಿಳೆಯರ ಅಗತ್ಯವಿದೆ. ಅಭಿನಂದನೆಗಳು ರೊಸಾಲಿನ್ ಇಂತಹ ಕಾರ್ಯವನ್ನು ಮುಂದುವರಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:Indian Railways: ರೈಲು ಸ್ವಲ್ಪವೂ ಕ್ಲೀನ್ ಇಲ್ಲ ಎಂದು ಇನ್ಮುಂದೆ ಹೇಳೋಹಾಗಿಲ್ಲ, ಏನೇನೆಲ್ಲಾ ಸೌಕರ್ಯಗಳನ್ನು ಕಲ್ಪಿಸಲಿದೆ ಗೊತ್ತೇ?

ಮತ್ತೊಬ್ಬ ಬಳಕೆದಾರ, ರೋಸಲಿನ್, ನಾನು ನಿಮ್ಮ ಸ್ನೇಹಿತೆಯಾಗಿರುವುದಕ್ಕೆ ಹೆಮ್ಮೆಪಡುತ್ತೇನೆ. ನಿನ್ನನ್ನು ತಿಳಿದುಕೊಂಡು ಕಾರಣ ನಿನ್ನ ಸಾಧನೆಯಲ್ಲಿ ನನಗೆ ಆಶ್ಚರ್ಯವಿಲ್ಲ. ನಿನ್ನ ಸಮರ್ಪಣೆ, ಬದ್ಧತೆ ಮತ್ತು ನಿಮ್ಮ ಕರ್ತವ್ಯಗಳಿಗೆ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ಮತ್ತೊಬ್ಬ ಬಳಕೆದಾರರು ಅಭಿನಂದನೆಗಳು, ಮೇಡಂ! ಕೆಲಸ ಚೆನ್ನಾಗಿದೆ ಎಂದು ಕಮೆಂಟ್ ಮಾಡಿದ್ದಾರೆ.

Published On - 6:52 pm, Thu, 23 March 23

ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ