AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರಿಂದ 1 ಕೋಟಿ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ ಮೊದಲ ಮಹಿಳಾ ಟಿಸಿ

ರೈಲು ಪ್ರಯಾಣಿಕರಿಂದ 1 ಕೋಟಿ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ ಮೊದಲ ಮಹಿಳಾ ಟಿಕೆಟ್‌ ತಪಾಸಣೆ ಸಿಬ್ಬಂದಿಯನ್ನು ರೈಲ್ವೆ ಸಚಿವಾಲಯ ಶ್ಲಾಘಿಸಿದೆ .

ರೈಲು ಪ್ರಯಾಣಿಕರಿಂದ 1 ಕೋಟಿ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ ಮೊದಲ ಮಹಿಳಾ ಟಿಸಿ
ರೋಸಲಿನ್ ಅರೋಕಿಯಾ ಮೇರಿ
TV9 Web
| Edited By: |

Updated on:Mar 23, 2023 | 6:53 PM

Share

ರೈಲು ಪ್ರಯಾಣಿಕರಿಂದ 1 ಕೋಟಿ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ ಮೊದಲ ಮಹಿಳಾ ಟಿಕೆಟ್‌ ತಪಾಸಣೆ ಸಿಬ್ಬಂದಿಯನ್ನು (Woman Ticket Checker) ರೈಲ್ವೆ ಸಚಿವಾಲಯ ಶ್ಲಾಘಿಸಿದೆ . ದಕ್ಷಿಣ ರೈಲ್ವೆಯ ಮುಖ್ಯ ಟಿಕೆಟ್ ಪರಿವೀಕ್ಷಕಿ ರೋಸಲಿನ್ ಅರೋಕಿಯಾ ಮೇರಿ ಅವರು ಟಿಕೆಟ್ ಪಡೆಯದ ಪ್ರಯಾಣಿಕರಿಂದ 1.03 ಕೋಟಿ ರೂ. ದಂಡವನ್ನು ಸಂಗ್ರಹಿಸಿದ್ದಾರೆ . ರೈಲ್ವೇ ಸಚಿವಾಲಯ ಟ್ವಿಟರ್‌ ಮೂಲಕ ಟಿಕೆಟ್ ಪರೀಕ್ಷಕನ ಸಿಬ್ಬಂದಿ ರೋಸಲಿನ್ ಅರೋಕಿಯಾ ಮೇರಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೇರಿ ಪ್ರಯಾಣಿಕರಿಂದ ದಂಡವನ್ನು ಸಂಗ್ರಹಿಸುತ್ತಿರುವುದನ್ನು ಮತ್ತು ಪ್ರಯಾಣಿಕರಿಂದ ಟಿಕೆಟ್‌ಗಳನ್ನು ಪರೀಕ್ಷಿಸುತ್ತಿರುವ ಫೋಟೋವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಈ ಹಂಚಿಕೊಂಡ ಪೋಸ್ಟ್‌ಗೆ ಶೀರ್ಷಿಕೆಯನ್ನು ಕೂಡ ನೀಡಲಾಗಿದೆ. ತನ್ನ ಕರ್ತವ್ಯದಲ್ಲಿ ದೃಢವಾದ ಬದ್ಧತೆಯನ್ನು ತೋರಿಸುತ್ತಾ, GMSRailway ನ CTI (ಚೀಫ್ ಟಿಕೆಟ್ ಇನ್ಸ್‌ಪೆಕ್ಟರ್) ಶ್ರೀಮತಿ ರೊಸಲಿನ್ ಅರೋಕಿಯಾ ಮೇರಿ, ಅವರು 1.03 ಕೋಟಿ ರೂ. ದಂಡ ಸಂಗ್ರಹಿಸುವ ಮೂಲಕ ಭಾರತೀಯ ರೈಲ್ವೆಯ ಟಿಕೆಟ್ ತಪಾಸಣೆ ಸಿಬ್ಬಂದಿಯಲ್ಲಿ ಮೊದಲ ಮಹಿಳೆಯಾಗಿದ್ದಾರೆ. ಅನಿಯಮಿತ/ಟಿಕೆಟ್ ಪಡೆಯದ ಪ್ರಯಾಣಿಕರಿಂದ 1.03 ಕೋಟಿ ರೂ. ದಂಡ ಸಂಗ್ರಹ ಮಾಡಿದ್ದಾರೆ.

ಈ ಫೋಟೋ ಈಗ ಎಲ್ಲ ಕಡೆಯಲ್ಲೂ ವೈರಲ್ ಆಗಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಬಳಕೆದಾರರೊಬ್ಬರು ನಮ್ಮ ಭಾರತವನ್ನು ಸೂಪರ್ ಪವರ್ ಮಾಡಲು ಇಂತಹ ಸವಾಲಿನ ಮತ್ತು ಸಮರ್ಪಿತ ಮಹಿಳೆಯರ ಅಗತ್ಯವಿದೆ. ಅಭಿನಂದನೆಗಳು ರೊಸಾಲಿನ್ ಇಂತಹ ಕಾರ್ಯವನ್ನು ಮುಂದುವರಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:Indian Railways: ರೈಲು ಸ್ವಲ್ಪವೂ ಕ್ಲೀನ್ ಇಲ್ಲ ಎಂದು ಇನ್ಮುಂದೆ ಹೇಳೋಹಾಗಿಲ್ಲ, ಏನೇನೆಲ್ಲಾ ಸೌಕರ್ಯಗಳನ್ನು ಕಲ್ಪಿಸಲಿದೆ ಗೊತ್ತೇ?

ಮತ್ತೊಬ್ಬ ಬಳಕೆದಾರ, ರೋಸಲಿನ್, ನಾನು ನಿಮ್ಮ ಸ್ನೇಹಿತೆಯಾಗಿರುವುದಕ್ಕೆ ಹೆಮ್ಮೆಪಡುತ್ತೇನೆ. ನಿನ್ನನ್ನು ತಿಳಿದುಕೊಂಡು ಕಾರಣ ನಿನ್ನ ಸಾಧನೆಯಲ್ಲಿ ನನಗೆ ಆಶ್ಚರ್ಯವಿಲ್ಲ. ನಿನ್ನ ಸಮರ್ಪಣೆ, ಬದ್ಧತೆ ಮತ್ತು ನಿಮ್ಮ ಕರ್ತವ್ಯಗಳಿಗೆ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ಮತ್ತೊಬ್ಬ ಬಳಕೆದಾರರು ಅಭಿನಂದನೆಗಳು, ಮೇಡಂ! ಕೆಲಸ ಚೆನ್ನಾಗಿದೆ ಎಂದು ಕಮೆಂಟ್ ಮಾಡಿದ್ದಾರೆ.

Published On - 6:52 pm, Thu, 23 March 23

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ