AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಸಾಲುಸಾಲು ವೈರಸ್​ಗಳು; ಮೊದಲ ಝಿಕಾ ಪ್ರಕರಣ ಪತ್ತೆ, 25 ಮಂದಿಯಲ್ಲಿ ಚಿಕೂನ್​ಗುನ್ಯಾ, ಡೆಂಘೆ ಆತಂಕ

Zika Virus: ಹೀಗೆ ಡೆಂಘೆ, ಝಿಕಾ, ಚಿಕೂನ್​ಗುನ್ಯಾ ಕಾಯಿಲೆಗಳು ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದ ಕ್ಷಿಪ್ರ ಪ್ರತಿಕ್ರಿಯಾ ತಂಡ ಹಳ್ಳಿಗಳಿಗೆ ತೆರಳಿ, ಸ್ಥಳೀಯರ ಬಳಿ ಮಾತುಕತೆ ನಡೆಸಿದೆ. ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದೆ.

ಮಹಾರಾಷ್ಟ್ರದಲ್ಲಿ ಸಾಲುಸಾಲು ವೈರಸ್​ಗಳು; ಮೊದಲ ಝಿಕಾ ಪ್ರಕರಣ ಪತ್ತೆ, 25 ಮಂದಿಯಲ್ಲಿ ಚಿಕೂನ್​ಗುನ್ಯಾ, ಡೆಂಘೆ ಆತಂಕ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Aug 01, 2021 | 12:59 PM

ಪುಣೆ: ಮಹಾರಾಷ್ಟ್ರ (Maharashtra)ದಲ್ಲಿ ಮೊದಲ ಝಿಕಾ ವೈರಸ್ (Zika Virus)​ ಪ್ರಕರಣ ಪತ್ತೆಯಾಗಿದೆ. ಪುಣೆಯ ಪುರಂದರ ಏರಿಯಾದ 50 ವರ್ಷದ ಮಹಿಳೆಯೊಬ್ಬರಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಅಷ್ಟೇ ಅಲ್ಲ, ಇವರಿಗೆ ಚಿಕೂನ್​ಗುನ್ಯಾ(Chikungunya) ಕೂಡ ಕಾಣಿಸಿಕೊಂಡಿದೆ. ಸದ್ಯ ಮಹಿಳೆ ಬಹುತೇಕ ಚೇತರಿಕೆ ಕಂಡಿದ್ದು, ಆಕೆಯ ಮನೆಯಲ್ಲಿ ಮತ್ಯಾರಿಗೂ ಝಿಕಾ ಲಕ್ಷಣಗಳಿಲ್ಲ ಎಂದು ಆರೋಗ್ಯ ಇಲಾಖೆ (Health Department) ತಿಳಿಸಿದೆ. ಪುರಂದರ ತೆಹ್ಸಿಲ್​​ನ ಬೆಲ್ಸಾರ್ ಗ್ರಾಮದಲ್ಲಿ ಜುಲೈ ಮೊದಲ ವಾರದಿಂದಲೂ ಹಲವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಅದರಲ್ಲಿ ಅನುಮಾನ ಹುಟ್ಟಿಸಿದ್ದ ಐವರ ಮಾದರಿಗಳನ್ನು ತಪಾಸಣೆಗಾಗಿ ಪುಣೆಯ ವೈರಾಲಜಿಯ ನ್ಯಾಶನಲ್​ ಇನ್​ಸ್ಟಿಟ್ಯೂಟ್​ಗೆ (NIV) ಕಳಿಸಲಾಗಿತ್ತು. ಮೂವರಿಗೆ ಚಿಕೂನ್​ಗುನ್ಯಾ ಪಾಸಿಟಿವ್​ ಬಂದಿತ್ತು.

ಚಿಕೂನ್​ಗುನ್ಯಾ ಪ್ರಕರಣ ಹೆಚ್ಚುತ್ತಿರುವುದು ಕಂಡುಬಂದ ಬೆನ್ನಲ್ಲೇ ಎನ್​ಐವಿಯ ತಜ್ಞರ ತಂಡ ಬೆಲ್ಸಾರ್​ ಮತ್ತು ಪರಿಂಚೆ ಗ್ರಾಮಗಳಿಗೆ ಭೇಟಿ ನೀಡಿ, 41 ಮಂದಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ, ತೆಗೆದುಕೊಂಡು ಹೋಗಿ ತಪಾಸಣೆ ಮಾಡಿತ್ತು. ಅದರಲ್ಲೀಗ 25 ಜನರಲ್ಲಿ ಚಿಕೂನ್​ಗುನ್ಯಾ ಪಾಸಿಟಿವ್ ಬಂದಿದೆ. ಮೂವರಲ್ಲಿ ಡೆಂಘೆ ಜ್ವರ ಕಾಣಿಸಿಕೊಂಡಿದೆ ಹಾಗೂ 50ವರ್ಷದ ಈ ಮಹಿಳೆಯಲ್ಲಿ ಝಿಕಾ ವೈರಸ್​ ಪತ್ತೆಯಾಗಿದೆ.

ಹೀಗೆ ಡೆಂಘೆ, ಝಿಕಾ, ಚಿಕೂನ್​ಗುನ್ಯಾ ಕಾಯಿಲೆಗಳು ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದ ಕ್ಷಿಪ್ರ ಪ್ರತಿಕ್ರಿಯಾ ತಂಡ ಹಳ್ಳಿಗಳಿಗೆ ತೆರಳಿ, ಸ್ಥಳೀಯರ ಬಳಿ ಮಾತುಕತೆ ನಡೆಸಿದೆ. ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದೆ. ಪ್ರತಿ ಮನೆಗೂ ಹೋಗಿ ಸರ್ವೇ ನಡೆಸುತ್ತಿದೆ. ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನೂ ತೆಗೆದುಕೊಂಡು, ಸೊಳ್ಳೆ ನಿರ್ಮೂಲನೆ ಮಾಡಲಾಗುವುದು ಜನರು ಯಾವ ಕಾರಣಕ್ಕೂ ಗಾಬರಿಗೊಳ್ಳಬಾರದು ಎಂದು ಪುಣೆ ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ: ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು: ಮಾಲೀಕನನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

The first Zika virus Case detect In Maharashtra

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ