AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಸಾಲುಸಾಲು ವೈರಸ್​ಗಳು; ಮೊದಲ ಝಿಕಾ ಪ್ರಕರಣ ಪತ್ತೆ, 25 ಮಂದಿಯಲ್ಲಿ ಚಿಕೂನ್​ಗುನ್ಯಾ, ಡೆಂಘೆ ಆತಂಕ

Zika Virus: ಹೀಗೆ ಡೆಂಘೆ, ಝಿಕಾ, ಚಿಕೂನ್​ಗುನ್ಯಾ ಕಾಯಿಲೆಗಳು ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದ ಕ್ಷಿಪ್ರ ಪ್ರತಿಕ್ರಿಯಾ ತಂಡ ಹಳ್ಳಿಗಳಿಗೆ ತೆರಳಿ, ಸ್ಥಳೀಯರ ಬಳಿ ಮಾತುಕತೆ ನಡೆಸಿದೆ. ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದೆ.

ಮಹಾರಾಷ್ಟ್ರದಲ್ಲಿ ಸಾಲುಸಾಲು ವೈರಸ್​ಗಳು; ಮೊದಲ ಝಿಕಾ ಪ್ರಕರಣ ಪತ್ತೆ, 25 ಮಂದಿಯಲ್ಲಿ ಚಿಕೂನ್​ಗುನ್ಯಾ, ಡೆಂಘೆ ಆತಂಕ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Aug 01, 2021 | 12:59 PM

Share

ಪುಣೆ: ಮಹಾರಾಷ್ಟ್ರ (Maharashtra)ದಲ್ಲಿ ಮೊದಲ ಝಿಕಾ ವೈರಸ್ (Zika Virus)​ ಪ್ರಕರಣ ಪತ್ತೆಯಾಗಿದೆ. ಪುಣೆಯ ಪುರಂದರ ಏರಿಯಾದ 50 ವರ್ಷದ ಮಹಿಳೆಯೊಬ್ಬರಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಅಷ್ಟೇ ಅಲ್ಲ, ಇವರಿಗೆ ಚಿಕೂನ್​ಗುನ್ಯಾ(Chikungunya) ಕೂಡ ಕಾಣಿಸಿಕೊಂಡಿದೆ. ಸದ್ಯ ಮಹಿಳೆ ಬಹುತೇಕ ಚೇತರಿಕೆ ಕಂಡಿದ್ದು, ಆಕೆಯ ಮನೆಯಲ್ಲಿ ಮತ್ಯಾರಿಗೂ ಝಿಕಾ ಲಕ್ಷಣಗಳಿಲ್ಲ ಎಂದು ಆರೋಗ್ಯ ಇಲಾಖೆ (Health Department) ತಿಳಿಸಿದೆ. ಪುರಂದರ ತೆಹ್ಸಿಲ್​​ನ ಬೆಲ್ಸಾರ್ ಗ್ರಾಮದಲ್ಲಿ ಜುಲೈ ಮೊದಲ ವಾರದಿಂದಲೂ ಹಲವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಅದರಲ್ಲಿ ಅನುಮಾನ ಹುಟ್ಟಿಸಿದ್ದ ಐವರ ಮಾದರಿಗಳನ್ನು ತಪಾಸಣೆಗಾಗಿ ಪುಣೆಯ ವೈರಾಲಜಿಯ ನ್ಯಾಶನಲ್​ ಇನ್​ಸ್ಟಿಟ್ಯೂಟ್​ಗೆ (NIV) ಕಳಿಸಲಾಗಿತ್ತು. ಮೂವರಿಗೆ ಚಿಕೂನ್​ಗುನ್ಯಾ ಪಾಸಿಟಿವ್​ ಬಂದಿತ್ತು.

ಚಿಕೂನ್​ಗುನ್ಯಾ ಪ್ರಕರಣ ಹೆಚ್ಚುತ್ತಿರುವುದು ಕಂಡುಬಂದ ಬೆನ್ನಲ್ಲೇ ಎನ್​ಐವಿಯ ತಜ್ಞರ ತಂಡ ಬೆಲ್ಸಾರ್​ ಮತ್ತು ಪರಿಂಚೆ ಗ್ರಾಮಗಳಿಗೆ ಭೇಟಿ ನೀಡಿ, 41 ಮಂದಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ, ತೆಗೆದುಕೊಂಡು ಹೋಗಿ ತಪಾಸಣೆ ಮಾಡಿತ್ತು. ಅದರಲ್ಲೀಗ 25 ಜನರಲ್ಲಿ ಚಿಕೂನ್​ಗುನ್ಯಾ ಪಾಸಿಟಿವ್ ಬಂದಿದೆ. ಮೂವರಲ್ಲಿ ಡೆಂಘೆ ಜ್ವರ ಕಾಣಿಸಿಕೊಂಡಿದೆ ಹಾಗೂ 50ವರ್ಷದ ಈ ಮಹಿಳೆಯಲ್ಲಿ ಝಿಕಾ ವೈರಸ್​ ಪತ್ತೆಯಾಗಿದೆ.

ಹೀಗೆ ಡೆಂಘೆ, ಝಿಕಾ, ಚಿಕೂನ್​ಗುನ್ಯಾ ಕಾಯಿಲೆಗಳು ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದ ಕ್ಷಿಪ್ರ ಪ್ರತಿಕ್ರಿಯಾ ತಂಡ ಹಳ್ಳಿಗಳಿಗೆ ತೆರಳಿ, ಸ್ಥಳೀಯರ ಬಳಿ ಮಾತುಕತೆ ನಡೆಸಿದೆ. ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದೆ. ಪ್ರತಿ ಮನೆಗೂ ಹೋಗಿ ಸರ್ವೇ ನಡೆಸುತ್ತಿದೆ. ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನೂ ತೆಗೆದುಕೊಂಡು, ಸೊಳ್ಳೆ ನಿರ್ಮೂಲನೆ ಮಾಡಲಾಗುವುದು ಜನರು ಯಾವ ಕಾರಣಕ್ಕೂ ಗಾಬರಿಗೊಳ್ಳಬಾರದು ಎಂದು ಪುಣೆ ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ: ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು: ಮಾಲೀಕನನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

The first Zika virus Case detect In Maharashtra

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?