AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ಕೋಟಿ ರೂ. ಲಾಟರಿ ಗೆದ್ದರೂ ನೆಮ್ಮದಿ ಇಲ್ಲ: ಅಳಲು ತೋಡಿಕೊಂಡ ಕೇರಳದ ಆಟೋ ಚಾಲಕ

ಕೇರಳದ ಆಟೋ ಚಾಲಕ 25 ಕೋಟಿ ಲಾಟರಿ ಗೆದ್ದರೂ ಮನಸ್ಸಿನ ನೆಮ್ಮದಿ ಇಲ್ಲದಂತಾಗಿದೆ. ಈ ಬಗ್ಗೆ ಸ್ವತಃ ಅವರೇ ಅಳಲು ತೋಡಿಕೊಂಡಿದ್ದಾರೆ.

25 ಕೋಟಿ ರೂ. ಲಾಟರಿ ಗೆದ್ದರೂ ನೆಮ್ಮದಿ ಇಲ್ಲ: ಅಳಲು ತೋಡಿಕೊಂಡ ಕೇರಳದ ಆಟೋ ಚಾಲಕ
Kerala lottery
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Sep 28, 2022 | 3:37 PM

Share

ತಿರುವನಂತಪುರಂ: ಮುಖ್ಯವಾಗಿ ಮನಷ್ಯನಿಗೆ ನೆಮ್ಮದಿ ಮುಖ್ಯ. ಮನಸ್ಸಿಗೆ ನೆಮ್ಮದಿಯೇ ಇಲ್ಲ ಅಂದ ಮೇಲೆ ಎಷ್ಟು ಶ್ರೀಮಂತಿಕೆ ಶ್ರೀಮಂತಿಕೆ ಇದ್ದರೇನು ಅಲ್ವೇ? ಇದೀಗ ಇಂತಹ ಸ್ಥಿತಿ ಇತ್ತೀಚೆಗೆ 25 ಕೋಟಿ ರೂ ಗೆದ್ದ ಕೇರಳದ ಆಟೋ ಚಾಲಕನಿಗೆ ಬಂದಿದೆ.  ಕೇರಳ ಸರ್ಕಾರ ನಡೆಸುವ ಓಣಂ ಬಂಪರ್​ ಲಾಟರಿಯಲ್ಲಿ ಆಟೋ ಚಾಲಕ ಅನೂಪ್​ ಪ್ರಥಮ ಬಹುಮಾನವಾಗಿ 25 ಕೋಟಿ ರೂ.ಗಳನ್ನು ಗೆದ್ದಿದ್ದಾರೆ. ಇದು ಕೇರಳ ಇತಿಹಾಸದಲ್ಲಿಯೇ ಲಾಟರಿ ಟಿಕೆಟ್​ನಲ್ಲಿ ನೀಡಿದ ಅತಿದೊಡ್ಡ ಮೊತ್ತವಾಗಿದೆ. ಡ್ರಾ ದಿನಾಂಕ ಮುನ್ನಾ ದಿನ ಅನೂಪ್ ಮಗನ ಪಿಗ್ಗಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನೂ ಸೇರಿಸಿ 500 ರೂ.ನ ಲಾಟರಿ ಟಿಕೆಟ್​ ಖರೀದಿಸಿದ್ದರು. ಅದ್ರೆ, ಇದೀಗ  25 ಕೋಟಿ ಲಾಟರಿ ಗೆದ್ದರೂ ಅನೂಪ್​ಗೆ ನೆಮ್ಮದಿ ಇಲ್ಲದಂತಾಗಿದೆಯಂತೆ.

ಅಳಲು ತೋಡಿಕೊಂಡ ಅನೂಪ್

ಸಹಾಯ ಯಾಚಿಸುವವರು ಪ್ರತಿದಿನ ಮನೆಗೆ ಬರುತ್ತಿದ್ದು, ಮನೆಯಲ್ಲಿ ನೆಮ್ಮದಿಯಿಂದಿರಲು ಸಾಧ್ಯವಾಗುತ್ತಿಲ್ಲ’ ಎಂದು ಕೇರಳ ಸರಕಾರದ ತಿರುವೋಣಂ ಬಂಪರ್‌ ಲಾಟರಿ ವಿಜೇತ ತಿರುವನಂತಪುರಂ ಶ್ರೀವರಾಹಂ ನಿವಾಸಿ, ರಿಕ್ಷಾ ಚಾಲಕ ಅನೂಪ್‌ ವಿಡಿಯೋ ಮಮೂಲಕ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ₹12 ಕೋಟಿ ಗೆದ್ದ ಆಟೋ ಚಾಲಕ; ಕೇರಳ ತಿರುವೋಣಂ ಬಂಪರ್ ಲಾಟರಿ ವಿಜೇತ ಯಾರು ಎಂಬ ಪ್ರಶ್ನೆಗೆ ಕೊನೆಗೂ ಸಿಕ್ಕಿತು ಉತ್ತರ

ಲಾಟರಿ ಹೊಡೆದಾಗ ನನಗೆ ತುಂಬಾ ಖುಷಿಯಾಗಿತ್ತು. ಆದರೆ ಈಗಿನ ನನ್ನ ಪರಿಸ್ಥಿತಿ ನೋಡಿದರೆ, ಅದನ್ನು ನಾನು ಗೆಲ್ಲಲೇಬಾರದಿತ್ತು ಎಂದು ಅನಿಸುತ್ತಿದೆ. ಲಾಟರಿ ಗೆದ್ದ ಕಾರಣದಿಂದ ನನಗೆ ಹೊರಗಡೆ ಎಲ್ಲಿಯೂ ಹೋಗಲು ಸಾಧ್ಯವಾಗುತ್ತಿಲ್ಲ. ಪ್ರತಿದಿನ ಆರ್ಥಿಕ ಸಹಾಯಕ್ಕಾಗಿ ಮನೆ ಮುಂದೆ ಬರುವ ಜನರಿಂದ ತಪ್ಪಿಸಿಕೊಳ್ಳಲು ನಾನು ನನ್ನ ಸಹೋದರಿಯ ಮನೆ ಅಥವಾ ಇನ್ಯಾರದೋ ಮನೆಯಲ್ಲಿ ಇರಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ.

ಲಾಟರಿ ಗೆದ್ದ ಹಣ ನನಗೆ ಇನ್ನೂ ಬಂದಿಲ್ಲ. ಇದನ್ನು ನಾನು ಜನರಿಗೆ ಹೇಳಿದರೆ ನಂಬುತ್ತಿಲ್ಲ. ನಾನು ಲಾಟರಿ ಗೆದ್ದಿರುವ ಸುದ್ದಿ ಮಾಧ್ಯಮಗಳಲ್ಲಿ ಬಂದಾಗ ನಾನು ಸಂತೋಷಪಟ್ಟಿದ್ದೆ. ಆದರೆ ಅದರಿಂದ ನಾನು ಇಷ್ಟೊಂದು ತೊಂದರೆ ಅನುಭವಿಸುತ್ತೇನೆ ಎಂದು ಭಾವಿಸಿರಲಿಲ್ಲ. ತೆರಿಗೆಯ ಬಗ್ಗೆ ನನಗೇನೂ ಗೊತ್ತಿಲ್ಲ. ಸಿಕ್ಕ ಹಣವನ್ನು ಮುಂದಿನ ಎರಡು ವರ್ಷಗಳ ಅವಧಿಗೆ ನಾನು ಬ್ಯಾಂಕ್​ನ​ಲ್ಲಿ ಹಾಕುತ್ತೇನೆ ಎಂದಿದ್ದಾರೆ.

ಪ್ರತಿದಿನ ಮನೆಗೆ ಜನರು ಸಹಾಯ ಕೇಳಿಕೊಂಡು ಬರುತ್ತಾರೆ. ನಾನು ನನ್ನ ಮನೆಯನ್ನು ಈಗ ಇರುವಲ್ಲಿಂದ ಬೇರೆಡೆಗೆ ಸ್ಥಳಾಂತರಿಸಬೇಕು ಎಂದುಕೊಂಡಿದ್ದೇನೆ. ಎರಡನೇ ಅಥವಾ ಮೂರನೇ ಬಹುಮಾನ ಗೆದ್ದಿದ್ದರೆ ಚೆನ್ನಾಗಿರುತ್ತಿತ್ತು. ಈ ಮೊದಲ ಬಹುಮಾನದಿಂದಾಗಿ ನನ್ನ ಮನೆಗೆ ನಾನೇ ಹೋಗಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಸಂಬಂಧಿಕರ ಮನೆಯಲ್ಲಿ ಉಳಿಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Wed, 28 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್