AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ/ಎಸ್​ಟಿ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಕೇಂದ್ರದಿಂದ ಸಹಾಯವಾಣಿ; ನಂಬರ್​ ಯಾವುದು? ಕರೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ದೇಶದ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಹಾಯವಾಣಿ ಲಭ್ಯವಿರಲಿದ್ದು, ಹಿಂದಿ, ಇಂಗ್ಲಿಷ್​ ಮತ್ತು ಆಯಾ ಭಾಗದ ಪ್ರಾದೇಶಿಕ ಭಾಷೆಯಲ್ಲಿ ಸೇವೆ ಲಭ್ಯವಿರಲಿದೆ.

ಎಸ್​ಸಿ/ಎಸ್​ಟಿ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಕೇಂದ್ರದಿಂದ ಸಹಾಯವಾಣಿ; ನಂಬರ್​ ಯಾವುದು? ಕರೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 13, 2021 | 9:23 AM

Share

ದೇಶಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989ರ ಸರಿಯಾದ ಅನುಷ್ಠಾನವಾಗಿದೆಯಾ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಹಾಯವಾಣಿ ಪ್ರಾರಂಭ ಮಾಡಲಿದೆ. ಈ ಬಗ್ಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ದೌರ್ಜನ್ಯಗಳ ವಿರುದ್ಧ ರಾಷ್ಟ್ರೀಯ ಸಹಾಯವಾಣಿ (National Helpline Against Atrocities (NHAA) ಪ್ರಾರಂಭ ಮಾಡಲಾಗುವುದು. ಇದು ದೇಶಾದ್ಯಂತ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ ಮತ್ತು 14566 ಇದರ ನಂಬರ್​ ಎಂದು ತಿಳಿಸಿದೆ. ಯಾವುದೇ ಟೆಲಿಕಾಂ ಆಪರೇಟರ್​​ಗಳ ಮೊಬೈಲ್​ ಅಥವಾ ಲ್ಯಾಂಡ್​ಲೈನ್​​ ನಂಬರ್​ನಿಂದ ಇದಕ್ಕೆ ಧ್ವನಿ ಕರೆ ಮಾಡಬಹುದು ಎಂದು ಸಚಿವಾಲಯ ಮಾಹಿತಿ ನೀಡಿದೆ. 

ದೇಶದ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಹಾಯವಾಣಿ ಲಭ್ಯವಿರಲಿದ್ದು, ಹಿಂದಿ, ಇಂಗ್ಲಿಷ್​ ಮತ್ತು ಆಯಾ ಭಾಗದ ಪ್ರಾದೇಶಿಕ ಭಾಷೆಯಲ್ಲಿ ಸೇವೆ ಲಭ್ಯವಿರಲಿದೆ. ಇನ್ನು ಈ ಸಹಾಯವಾಣಿ (NHAA)ಯ ಮೊಬೈಲ್ ಆ್ಯಪ್​ ಕೂಡ ಬಳಕೆಗೆ ಬರಲಿದೆ ಎಂದೂ ಕೇಂದ್ರ ಸಚಿವಾಲಯ ಮಾಹಿತಿ ನೀಡಿದೆ. ಹಾಗೇ, ದೇಶಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ನಿಬಂಧನೆ ಬಗ್ಗೆ ತಿಳಿಸುವುದು, ತಾರತಮ್ಯವನ್ನು ಕೊನೆಗಾಣಿಸಿ, ಎಲ್ಲರಿಗೂ ರಕ್ಷಣೆ ನೀಡುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.

ದೌರ್ಜನ್ಯದ ವಿರುದ್ಧ ನೀಡಲಾದ ಪ್ರತಿ ದೂರಿಗೂ ಸಂಬಂಧಪಟ್ಟಂತೆ ಎಫ್​ಐಆರ್ ದಾಖಲಿಸಲಾಗಿದೆ, ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದೆ, ನೀಡಲಾದ ದೂರುಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಮತ್ತು ಆರೋಪಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಅಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಮತ್ತು ಈ ಎಲ್ಲವೂ ಕಾಯ್ದೆ ನೀಡಿದ ಸಮಯ ಮಿತಿಯೊಳಗೇ ಆಗುತ್ತಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಸಹಾಯವಾಣಿ ತಂದಿದ್ದಾಗಿ ಹೇಳಿದೆ.  ಅಂದಹಾಗೇ ದೇಶಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಗೆ 2018ರಲ್ಲಿ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದ್ದು, ಅಂಥ ವರ್ಗದ ವ್ಯಕ್ತಿಗಳ ವಿರುದ್ಧ ಯಾರಾದರೂ ಜಾತಿ ನಿಂದನೆ ಮಾಡಿದರೆ ಪ್ರಾಥಮಿಕ ತನಿಖೆ ನಡೆಸದೆಯೂ ಅವರನ್ನು ಬಂಧಿಸಬಹುದಾಗಿದೆ.

ಇದನ್ನೂ ಓದಿ: ಚಂದನ್ ಶೆಟ್ಟಿ ಜತೆ ರಚಿತಾ ರಾಮ್​ ‘ಲಕ ಲಕ ಲ್ಯಾಂಬೋರ್ಗಿನಿ’; ಪೋಸ್ಟರ್​ ಮೂಲಕ ಹೆಚ್ಚಿತು ಕ್ರೇಜ್​

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ