AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ಬಿಟ್ಟು ತೊಲಗುವಂತೆ ಕೆನಡಾದ 6 ರಾಜತಾಂತ್ರಿಕ ಅಧಿಕಾರಿಗಳಿಗೆ ಭಾರತ ಡೆಡ್​ಲೈನ್!

ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ ಇದೀಗ ಭಾರತ ಹಾಗೂ ಕೆನಡಾ ನಡುವೆ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಿದೆ. ಭಾರತ ಸರ್ಕಾರದ ಏಜೆಂಟರೇ ನಿಜ್ಜರ್‌ನನ್ನು ಹತ್ಯೆ ಮಾಡಿದರು ಎಂದು ಕೆನಡಾ ಪ್ರಧಾನಿ ಹೇಳಿಕೆ ನೀಡಿದ ಬಳಿಕ, ಈ ವಿಚಾರ ಜಾಗತಿಕವಾಗಿ ಭಾರೀ ಚರ್ಚೆಗೀಡಾಗಿದೆ. ಇದರ ಬೆನ್ನಲ್ಲೇ ಭಾರತ ಸರ್ಕಾರ, ಕೆನಾಡದಲ್ಲಿರವ ಭಾರತದ ರಾಜತಾಂತ್ರಿಕರನ್ನು ವಾಪಸ್ ಕರೆಯಿಸಿಕೊಂಡಿದೆ. ಅಲ್ಲದೇ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಭಾರತದಲ್ಲಿರುವ ಕೆನಡಾದ 6 ರಾಜತಾಂತ್ರಿಕರನ್ನು ದೇಶದಿಂದ ವಾಪಸ್ ಕಳುಹಿಸಲು ತೀರ್ಮಾನಿಸಿದೆ.

ದೇಶ ಬಿಟ್ಟು ತೊಲಗುವಂತೆ ಕೆನಡಾದ 6 ರಾಜತಾಂತ್ರಿಕ ಅಧಿಕಾರಿಗಳಿಗೆ ಭಾರತ ಡೆಡ್​ಲೈನ್!
ಕೆನಡಾ-ಭಾರತ
Follow us
ರಮೇಶ್ ಬಿ. ಜವಳಗೇರಾ
|

Updated on:Oct 14, 2024 | 10:42 PM

ನವದೆಹಲಿ, (ಅಕ್ಟೋಬರ್ 14): ಖಲಿಸ್ತಾನ ಉಗ್ರ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಪಿತೂರಿಯಿದೆ ಎಂದು ಕೆನಡಾ ಆರೋಪಿಸಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವಿನ ಸಂಬಂಧ ಮತ್ತೆ ಹದಗೆಟ್ಟಿದೆ. ಸೋಮವಾರ ಈ ಹೇಳಿಕೆ ಪ್ರಕಟಗೊಂಡ ಬೆನ್ನಲ್ಲೇ ಭಾರತ ಅದನ್ನು ಖಂಡಿಸಿತ್ತು. ಇದೀಗ ಅಲ್ಲಿರುವ ಹೈಕಮಿಷನರ್ ಮತ್ತು ಇತರ ಉದ್ದೇಶಿತ ರಾಜತಾಂತ್ರಿಕರು ಮತ್ತು ಅಧಿಕಾರಿಗಳನ್ನು ವಾಪಸ್ ಕರೆಯಿಸಿಕೊಂಡಿದೆ. ಅಲ್ಲದೇ ಇದೀಗ ಭಾರತದಲ್ಲಿರುವ ಆರು ಕೆನಡಾ ರಾಜತಾಂತ್ರಿಕ ಅಧಿಕಾರಿಗಳು ದೇಶದಿಂದ ಹೊರಹಾಕಲು ನಿರ್ಧಿರಿಸಿದೆ. ಅಕ್ಟೋಬರ್ 19 ಶನಿವಾರ ರಾತ್ರಿ 11:59ರೊಳಗೆ ಅಥವಾ ಅದಕ್ಕೂ ಮೊದಲು ಭಾರತವನ್ನು ತೊರೆಯಲು ಸೂಚಿಸಲಾಗಿದೆ. ಈ ಬಗ್ಗೆ ವಿದೇಶಾಂಗ ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸ್ಟೀವರ್ಟ್ ರಾಸ್ ವೀಲರ್ (ಹಂಗಾಮಿ ಹೈ ಕಮಿಷನರ್) , ಪ್ಯಾಟ್ರಿಕ್ ಹೆಬರ್ಟ್ (ಡೆಪ್ಯುಟಿ ಹೈ ಕಮಿಷನರ್), ಮೇರಿ ಕ್ಯಾಥರೀನ್ ಜೋಲಿ, (ಫಸ್ಟ್ ಸೆಕ್ರೆಟರಿ) ಲ್ಯಾನ್ ರಾಸ್ ಡೇವಿಡ್ ಟ್ರೈಟ್ಸ್ (ಫಸ್ಟ್ ಸೆಕ್ರೆಟರಿ), ಆಡಮ್ ಜೇಮ್ಸ್ ಚುಪ್ಕಾ((ಫಸ್ಟ್ ಸೆಕ್ರೆಟರಿ) ಪೌಲಾ ಒರ್ಜುಯೆಲಾ (ಫಸ್ಟ್ ಸೆಕ್ರೆಟರಿ) ಈ ಆರು ಅಧಿಕಾರಿಗಳಿಗೆ ಅಕ್ಟೋಬರ್ 19 ಶನಿವಾರ ರಾತ್ರಿ 11:59ರೊಳಗೆ ಅಥವಾ ಅದಕ್ಕೂ ಮೊದಲು ಭಾರತವನ್ನು ತೊರೆಯಲು ಭಾರತ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ: ರಾಜತಾಂತ್ರಿಕ ಕಲಹ ಉಲ್ಬಣ; ಕೆನಡಾದಲ್ಲಿರುವ ರಾಯಭಾರಿಯನ್ನು ವಾಪಸ್ ಕರೆಸಲು ಭಾರತ ನಿರ್ಧಾರ 

ರಾಜತಾಂತ್ರಿಕರನ್ನು ವಾಪಸ್ ಕರೆಯಿಸಿಕೊಂಡ ಭಾರತ

ಸಿಖ್ ಉಗ್ರಗಾಮಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ತನಿಖೆಗೆ ರಾಯಭಾರಿಯನ್ನು ಸಂಪರ್ಕಿಸುವ ಕೆನಡಾದ ಆರೋಪಗಳನ್ನು ಬಲವಾಗಿ ತಳ್ಳಿಹಾಕಿದ ನಂತರ ಭಾರತ, ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಂಡಿದೆ. ಈ ವೇಳೆ ನಮ್ಮವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರಸ್ತುತ ಕೆನಡಾ ಸರ್ಕಾರದ ಬದ್ಧತೆಯಲ್ಲಿ ನಂಬಿಕೆ ಇಲ್ಲ ಎಂದು ಹೇಳಿದೆ.

ಉಗ್ರವಾದ ಮತ್ತು ಹಿಂಸಾಚಾರದ ವಿಚಾರದಲ್ಲಿ ಕೆನಡಾ ಪ್ರಧಾನಿ ಟ್ರುಡೊ ಸರ್ಕಾರದ ಕ್ರಮಗಳು ಅವರ ಸುರಕ್ಷತೆಗೆ ಅಪಾಯ ಎಂಬುದನ್ನು ಭಾರತ ಒತ್ತಿ ಹೇಳಿದೆ. ನಮ್ಮ ರಾಜತಾಂತ್ರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಕೆನಡಾ ಸರ್ಕಾರದ ಬದ್ಧತೆ ಬಗ್ಗೆ ನಮಗೆ ನಂಬಿಕೆ ಇಲ್ಲ. ಆದ್ದರಿಂದ, ಹೈಕಮಿಷನರ್ ಮತ್ತು ಇತರ ಉದ್ದೇಶಿತ ರಾಜತಾಂತ್ರಿಕರು ಮತ್ತು ಅಧಿಕಾರಿಗಳನ್ನು ಕರೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ವಿದೇಶಾಂಗ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:34 pm, Mon, 14 October 24

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್