AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ.. ಸಂಭವಿಸಿತು ಅನಾಹುತ

ಬಲೂನು ಹಿಡಿದು ಆಡುತ್ತಿರುವಾಗ ಉಸಿರುಗಟ್ಟಿ 4 ವರ್ಷದ ಬಾಲಕ ದೇವರಾಜ್ ಸೂರಜ್ ಭಾನುವಾರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಂಧೇರಿಯಲ್ಲಿ ನಡೆದಿದೆ.

ನಿದ್ದೆ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ.. ಸಂಭವಿಸಿತು ಅನಾಹುತ
ಸಾಂದರ್ಭಿಕ ಚಿತ್ರ
shruti hegde
| Edited By: ಸಾಧು ಶ್ರೀನಾಥ್​|

Updated on:Dec 03, 2020 | 12:00 PM

Share

ಮುಂಬೈ: ಬಲೂನು ಹಿಡಿದು ಆಡುತ್ತಿರುವಾಗ ಉಸಿರುಗಟ್ಟಿ 4 ವರ್ಷದ ಬಾಲಕ ದೇವರಾಜ್ ಸೂರಜ್ ಭಾನುವಾರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಂಧೇರಿಯಲ್ಲಿ ನಡೆದಿದೆ. ಬಾಲಕ ತನ್ನ ಅಕ್ಕನ ಜೊತೆ ಆಟವಾಡುತ್ತಿದ್ದ. ನಿದ್ದೆಯ ಮಂಪರಿನಲ್ಲಿದ್ದ ಬಾಲಕ ಬಲೂನು ಊದುತ್ತಿರುವಾಗ ಧ್ವನಿ ಪೆಟ್ಟಿಗೆಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ರಾತ್ರಿ 11 ಗಂಟೆಗೆ ಈ ಘಟನೆ ಸಂಭವಿಸಿದೆ. ಬಾಲಕ ದೇವರಾಜ್ ಸೂರಜ್ ಬಲೂನು ಊದಿ ಸ್ಪೋಟಗೊಳಿಸಲು ಪ್ರಯತ್ನಿಸುತ್ತಿದ್ದ. ಬಲೂನು ಧ್ವನಿ ಪೆಟ್ಟಿಗೆಯಲ್ಲಿ ಸಿಲುಕಿಕೊಂಡು ಉಸಿರಾಟ ಸಮಸ್ಯೆ ಉಂಟಾಯಿತು ಎಂದು ದೇವರಾಜ್​ ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಹುಡುಗ ಕೆಮ್ಮಲು ಆರಂಭಿಸಿದಾಗ ತಂದೆ ಸೂರಜ್ ನಾಗ್ ಮತ್ತು ಚಿಕ್ಕಪ್ಪ ರಾಜಾರಾಮ್ ಬಲೂನು ತೆಗೆಯಲು ಪ್ರಯತ್ನಿಸಿದರು. ಆದರೂ ಬಾಲಕನ ಗಂಟಲಿನಿಂದ ಬಲೂನು ಹೊರತೆಗೆಯಲು ಕಷ್ಟವಾಗಿದೆ. ತಕ್ಷಣವೇ, ಆಸ್ಪತ್ರೆ ಕರೆದೊಯ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ದೇವರಾಜ್ ಸಾವನ್ನಪ್ಪಿದ್ದಾನೆ. ಬಾಲಕನ ಶವವನ್ನು ಶವಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲು..

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು, ಆಡುತ್ತಾ ಕುಳಿತಿದ್ದ 6 ವರ್ಷದ ಬಾಲಕ ಸಾವು

Published On - 11:57 am, Thu, 3 December 20

Follow Us
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ