Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ದಿನಪತ್ರಿಕೆಯೊಂದರ ವಿರುದ್ಧ ಭಾರತೀಯ ಹೈಕಮೀಷನ್​ ಕೆಂಡಾಮಂಡಲ; ಮುಖ್ಯಸಂಪಾದಕನಿಗೆ ಪತ್ರ

ಆಸ್ಟ್ರೇಲಿಯನ್​ ದಿನಪತ್ರಿಕೆ Modi leads India out of lockdown... and into a viral apocalypse ಎಂಬ ತಲೆಬರಹದಡಿ ಭಾರತದಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬರ್ಥದ ವರದಿ ಪ್ರಕಟಿಸಿತ್ತು.

ಆಸ್ಟ್ರೇಲಿಯಾದ ದಿನಪತ್ರಿಕೆಯೊಂದರ ವಿರುದ್ಧ ಭಾರತೀಯ ಹೈಕಮೀಷನ್​ ಕೆಂಡಾಮಂಡಲ; ಮುಖ್ಯಸಂಪಾದಕನಿಗೆ ಪತ್ರ
ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಹೈಕಮೀಷನ್ ಕಚೇರಿ
Follow us
Lakshmi Hegde
|

Updated on: Apr 27, 2021 | 12:06 PM

ದೆಹಲಿ: ಭಾರತದಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕಿಗೆ ಇಲ್ಲಿನ ಕೇಂದ್ರಸರ್ಕಾರ, ಪ್ರಧಾನಮಂತ್ರಿ ಮೋದಿಯವರೇ ಕಾರಣ ಎಂದು ಆಸ್ಟ್ರೇಲಿಯಾದ ದಿನಪತ್ರಿಕೆಯೊಂದು ವರದಿ ಬರೆದಿದ್ದು, ಅದೀಗ ಭಾರತದ ಕೆಂಗಣ್ಣಿಗೆ ಗುರಿಯಾಗಿದೆ. ಇದೊಂದು ದುರುದ್ದೇಶಪೂರಿತ ವರದಿ ಎಂದು ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಹೈಕಮೀಷನ್​ ಕಚೇರಿ ಆರೋಪಿಸಿದೆ.

ಆಸ್ಟ್ರೇಲಿಯನ್​ ದಿನಪತ್ರಿಕೆ Modi leads India out of lockdown… and into a viral apocalypse ಎಂಬ ತಲೆಬರಹದಡಿ ಭಾರತದಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬರ್ಥದ ವರದಿ ಪ್ರಕಟಿಸಿತ್ತು. ರೂಪಾಂತರ ಕೊರೊನಾ ವೈರಸ್​ ವಿಚಾರದಲ್ಲಿ ತಜ್ಞರು ನೀಡಿರುವ ಸಲಹೆಯನ್ನು ನಿರ್ಲಕ್ಷಿಸಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಸಾವಿರಾರು ಜನರು ಸೇರಲು ಅವಕಾಶ ಮಾಡಿಕೊಟ್ಟಿದ್ದು, ಕುಂಭಮೇಳದಂಥ ದೊಡ್ಡ ಕಾರ್ಯಕ್ರಮಗಳಿಗೆ ಅನುಮತಿ ಭಾರತದ ಸರ್ಕಾರದ ವೈಫಲ್ಯತೆ ತೋರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಲ್ಲದೆ, ಇಲ್ಲಿನ ಆಕ್ಸಿಜನ್, ಲಸಿಕೆ ಅಭಾವದ ಬಗ್ಗೆಯೂ ಬರೆದಿತ್ತು.

ಈ ವರದಿ ಎಲ್ಲೆಡೆ ಪ್ರಚಾರ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಹೈಕಮೀಷನ್​ ಆಕ್ರೋಶ ವ್ಯಕ್ತಪಡಿಸಿದೆ. ಆಸ್ಟ್ರೇಲಿಯಾದ ಈ ಸುದ್ದಿಪತ್ರಿಕೆಯ ಮುಖ್ಯಸಂಪಾದಕ ಕ್ರಿಸ್ಟೋಪರ್ ಡೋರ್​ಗೆ ಪತ್ರ ಬರೆದು, ನಿಮ್ಮ ವರದಿ ಆಧಾರರಹಿತವಾಗಿ, ದುರುದ್ದೇಶಪೂರಿತವಾಗಿದೆ ಎಂದು ಹೇಳಿದೆ. ಅಷ್ಟೇ ಅಲ್ಲ, ಭಾರತದ ಬಗ್ಗೆ ಮಾಡುತ್ತಿರುವ ಅಪಪ್ರಚಾರ ಎಂದೂ ಆರೋಪಿಸಿದೆ. ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಭಾರತ ಸರ್ಕಾರ ಕೈಗೊಂಡಿರುವ ಕ್ರಮಗಳು ವಿಶ್ವಮಟ್ಟದಲ್ಲಿ ಗುರುತಿಸಲ್ಪಟ್ಟು, ಒಳ್ಳೆಯ ಅಭಿಪ್ರಾಯವನ್ನು ಹೊಂದಿವೆ. ಕಳೆದ ಮಾರ್ಚ್​ನಲ್ಲಿ ಮಾಡಲಾಗಿದ್ದ ಲಾಕ್​ಡೌನ್​ನಿಂದ ಹಿಡಿದು ಇಂದಿನ ಲಸಿಕೆ ಅಭಿಯಾನದವರೆಗಿನ ಕ್ರಮವನ್ನು ಬೇರೆ ರಾಷ್ಟ್ರಗಳು ಹೊಗಳುತ್ತಿವೆ. ಇದನ್ನು ಸಹಿಸಿಕೊಳ್ಳಲಾಗದೆ, ಭಾರತದ ಮೇಲೆ ಉಳಿದವರು ಇಟ್ಟ ನಂಬಿಕೆ, ಮೆಚ್ಚುಗೆಯ ಭಾವನೆಯನ್ನು ದುರ್ಬಲಗೊಳಿಸಲು ಹೀಗೆ ವರದಿ ಮಾಡಿದ್ದೀರಿ ಎಂದು ಹೇಳಿದೆ.

ದೇಶದಲ್ಲಿ ಕೊರೊನಾ ಸಂಕಷ್ಟ ಭಾರತದಲ್ಲಿ ಕೊರೊನಾ ಎರಡನೇ ಅಲೆ ತೀವ್ರ ಸಂಕಷ್ಟ ತಂದೊಡ್ಡಿರುವುದು ಸತ್ಯ. ಈಗಂತೂ ಪ್ರಸರಣದ ವೇಗ ಹೆಚ್ಚಾಗಿದ್ದು, ಇದರಿಂದಾಗಿ ಹಲವು ರೀತಿಯ ಸಂಕಷ್ಟಗಳು ಎದುರಾಗುತ್ತಿವೆ. ಆಕ್ಸಿಜನ್​, ಲಸಿಕೆಗಳ ಕೊರತೆ ಎದುರಾಗಿದೆ. ಬೆಡ್​ಗಳು ಸಿಗುತ್ತಿಲ್ಲ ಎಂಬ ಗೋಳು ಕೇಳಿಬರುತ್ತಿದೆ. ಅದೂ ಬಿಡಿ, ಸೋಂಕಿನಿಂದ ಜೀವ ಕಳೆದುಕೊಂಡವರ ಅಂತ್ಯಸಂಸ್ಕಾರವೂ ಕೆಲವು ಕಡೆ ದೊಡ್ಡ ತಲೆನೋವಾಗಿಬಿಟ್ಟಿದೆ. ಹೀಗೆಲ್ಲ ಇದ್ದರೂ ಕೇಂದ್ರ ಸರ್ಕಾರ ಭರವಸೆ ಕೊಟ್ಟಿದ್ದು, ಜನರ ಸುರಕ್ಷತೆಯೇ ನಮ್ಮ ಆಧ್ಯತೆ. ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದಿದೆ.

ಇದನ್ನೂ ಓದಿ:ಖಾಸಗಿ ಆ್ಯಂಬುಲೆನ್ಸ್‌ಗಳಲ್ಲಿ ತಂದ ಶವಗಳಿಗೂ ಅಂತ್ಯಕ್ರಿಯೆ, ಮೇಡಿ ಅಗ್ರಹಾರ ಚಿತಾಗಾರದಲ್ಲಿ ಇಂದಿನಿಂದ ಮತ್ತೊಂದು ರೂಲ್ಸ್

ಜಿಂದಾಲ್​ಗೆ 3667 ಎಕರೆ ಭೂಮಿ ಕದ್ದುಮುಚ್ಚಿ ಮಾರುವುದು ಬಿಜೆಪಿ ಸಂಸ್ಕೃತಿನಾ? ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ