AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಕೊಠಡಿಯಲ್ಲೇ ವಿದ್ಯಾರ್ಥಿಗಳ ಮದುವೆ: ಬಾಲ್ಯ ವಿವಾಹ ಪ್ರಕರಣ ದಾಖಲು

17 ವರ್ಷದ ಹುಡುಗ ತನ್ನೊಂದಿಗೆ ಓದುತ್ತಿರುವ ಹುಡುಗಿಗೆ ಮಂಗಳಸೂತ್ರ ಕಟ್ಟಿದ್ದಾನೆ. ಮದುವೆಯ ನಂತರ ಫೋಟೊ ಕ್ಲಿಕ್ಕಿಸಿಕೊಂಡ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾಲೇಜು ಕೊಠಡಿಯಲ್ಲೇ ವಿದ್ಯಾರ್ಥಿಗಳ ಮದುವೆ: ಬಾಲ್ಯ ವಿವಾಹ ಪ್ರಕರಣ ದಾಖಲು
ಆಂಧ್ರ ಪ್ರದೇಶದ ರಾಜಮಹೇಂದ್ರವರಂನ ಕಾಲೇಜಿನಲ್ಲಿ ಮದುವೆಯಾದವರು
Follow us
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 07, 2020 | 1:49 PM

ರಾಜಮಹೇಂದ್ರವರಂ (ಆಂಧ್ರ ಪ್ರದೇಶ): ತರಗತಿಯಲ್ಲಿಯೇ ತನ್ನ ಸಹಪಾಠಿಯೊಂದಿಗೆ ಬಾಲಕನೊಬ್ಬ ವಿವಾಹ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂ ಕಾಲೇಜಿನಲ್ಲಿ ನಡೆದಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ವಿವಾಹ ಅನೂರ್ಜಿತಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

17 ವರ್ಷದ ಹುಡುಗ ತನ್ನೊಂದಿಗೆ ಓದುತ್ತಿರುವ ಹುಡುಗಿಯ ಕೊರಳಿಗೆ ಮಂಗಳಸೂತ್ರ ಕಟ್ಟಿ, ಹಣೆಗೆ ಸಿಂಧೂರ ಹಚ್ಚಿದ. ಮದುವೆಯ ನಂತರ ದಂಪತಿಗಳು ಫೋಟೊ ಕ್ಲಿಕ್ಕಿಸಿಕೊಂಡ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಾಲಕಿಯ ಸ್ನೇಹಿತೆ ವಿಡಿಯೊ ಮಾಡಿ, ತನ್ನ ಇತರ ಸ್ನೇಹಿತರೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾಳೆ. ಘಟನೆ ಎಲ್ಲಾ ಕಡೆಗಳಲ್ಲಿ ಸುದ್ದಿಯಾಯಿತು. ಕಾಲೇಜಿನ ಆಡಳಿತ ಮಂಡಳಿಯು ಇವರಿಬ್ಬರ ದಾಖಲಾತಿಯನ್ನು ರದ್ದುಪಡಿಸಿ, ವರ್ಗಾವಣೆ ಪ್ರಮಾಣಪತ್ರವನ್ನು ನೀಡಿದೆ.

ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರಿಂದ ಘಟನೆ ಬೆಳಕಿಗೆ ಬಂದಿದೆ. ನಗರ ಠಾಣೆ​ ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಇವರಿಬ್ಬರು ಒಂದೇ ತರಗತಿಯಲ್ಲಿ ಓದುತ್ತಿದ್ದಾರೆ. ಬಾಲಕಿಗೆ ನಮ್ಮ ಆಯೋಗವು ಆಶ್ರಯ ನೀಡುತ್ತದೆ. ಹುಡುಗಿಯ ಪೋಷಕರು ಮನೆಗೆ ಕರೆದುಕೊಳ್ಳಲು ಒಪ್ಪುತ್ತಿಲ್ಲ. ಆಕೆಯನ್ನು ಕೌನ್ಸಲಿಂಗ್​ಗಾಗಿ ಕಳುಹಿಸಲಾಗಿದೆ. ಬಾಲಕನ ಪೋಷಕರೊಂದಿಗೆ ಮಹಿಳಾ ಆಯೋಗದ ಸಿಬ್ಬಂದಿ ಮಾತನಾಡಿ ಸಲಹೆಗಳನ್ನು ನೀಡಿದ್ದಾರೆ ಎಂದು ಆಂದ್ರಪ್ರದೇಶದ ಮಹಿಳಾ ಆಯೋಗದ ಅಧ್ಯಕ್ಷ ವಾಸಿರೆಡ್ಡಿ ಪದ್ಮಾ ಹೇಳಿದರು.

ತರಗತಿಯಲ್ಲಿ ನಡೆದ ಘಟನೆ ವಿದ್ಯಾರ್ಥಿಗಳಲ್ಲಿ ಕಾನೂನು ಜ್ಞಾನ ಎಷ್ಟಿದೆ ಎಂಬುದನ್ನು ತಿಳಿಸುತ್ತದೆ. ಮಹಿಳಾ ಆಯೋಗವು ಬಾಲ್ಯವಿವಾಹದ ವಿರುದ್ಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಲೇ ಬಂದಿದೆ. ಶಿಕ್ಷಣ ಹಕ್ಕು ಕಾಯ್ದೆಯ ಕುರಿತಾಗಿಯೂ ತಿಳಿ ಹೇಳುತ್ತಿದೆ ಎಂದು ಮಹಿಳಾ ಆಯೋಗದ ನಿರ್ದೇಶಕ ಆರ್. ಸೂಯೆಜ್ ಹೇಳಿದರು.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮತ್ತೆ ತಲೆ ಎತ್ತಿದ ಬಾಲ್ಯ ವಿವಾಹ ಪದ್ಧತಿ, 6 ತಿಂಗಳಲ್ಲಿ 1,791ಕೇಸ್ ದಾಖಲು

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?