AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಕೊಠಡಿಯಲ್ಲೇ ವಿದ್ಯಾರ್ಥಿಗಳ ಮದುವೆ: ಬಾಲ್ಯ ವಿವಾಹ ಪ್ರಕರಣ ದಾಖಲು

17 ವರ್ಷದ ಹುಡುಗ ತನ್ನೊಂದಿಗೆ ಓದುತ್ತಿರುವ ಹುಡುಗಿಗೆ ಮಂಗಳಸೂತ್ರ ಕಟ್ಟಿದ್ದಾನೆ. ಮದುವೆಯ ನಂತರ ಫೋಟೊ ಕ್ಲಿಕ್ಕಿಸಿಕೊಂಡ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾಲೇಜು ಕೊಠಡಿಯಲ್ಲೇ ವಿದ್ಯಾರ್ಥಿಗಳ ಮದುವೆ: ಬಾಲ್ಯ ವಿವಾಹ ಪ್ರಕರಣ ದಾಖಲು
ಆಂಧ್ರ ಪ್ರದೇಶದ ರಾಜಮಹೇಂದ್ರವರಂನ ಕಾಲೇಜಿನಲ್ಲಿ ಮದುವೆಯಾದವರು
shruti hegde
| Edited By: |

Updated on: Dec 07, 2020 | 1:49 PM

Share

ರಾಜಮಹೇಂದ್ರವರಂ (ಆಂಧ್ರ ಪ್ರದೇಶ): ತರಗತಿಯಲ್ಲಿಯೇ ತನ್ನ ಸಹಪಾಠಿಯೊಂದಿಗೆ ಬಾಲಕನೊಬ್ಬ ವಿವಾಹ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂ ಕಾಲೇಜಿನಲ್ಲಿ ನಡೆದಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ವಿವಾಹ ಅನೂರ್ಜಿತಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

17 ವರ್ಷದ ಹುಡುಗ ತನ್ನೊಂದಿಗೆ ಓದುತ್ತಿರುವ ಹುಡುಗಿಯ ಕೊರಳಿಗೆ ಮಂಗಳಸೂತ್ರ ಕಟ್ಟಿ, ಹಣೆಗೆ ಸಿಂಧೂರ ಹಚ್ಚಿದ. ಮದುವೆಯ ನಂತರ ದಂಪತಿಗಳು ಫೋಟೊ ಕ್ಲಿಕ್ಕಿಸಿಕೊಂಡ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಾಲಕಿಯ ಸ್ನೇಹಿತೆ ವಿಡಿಯೊ ಮಾಡಿ, ತನ್ನ ಇತರ ಸ್ನೇಹಿತರೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾಳೆ. ಘಟನೆ ಎಲ್ಲಾ ಕಡೆಗಳಲ್ಲಿ ಸುದ್ದಿಯಾಯಿತು. ಕಾಲೇಜಿನ ಆಡಳಿತ ಮಂಡಳಿಯು ಇವರಿಬ್ಬರ ದಾಖಲಾತಿಯನ್ನು ರದ್ದುಪಡಿಸಿ, ವರ್ಗಾವಣೆ ಪ್ರಮಾಣಪತ್ರವನ್ನು ನೀಡಿದೆ.

ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರಿಂದ ಘಟನೆ ಬೆಳಕಿಗೆ ಬಂದಿದೆ. ನಗರ ಠಾಣೆ​ ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಇವರಿಬ್ಬರು ಒಂದೇ ತರಗತಿಯಲ್ಲಿ ಓದುತ್ತಿದ್ದಾರೆ. ಬಾಲಕಿಗೆ ನಮ್ಮ ಆಯೋಗವು ಆಶ್ರಯ ನೀಡುತ್ತದೆ. ಹುಡುಗಿಯ ಪೋಷಕರು ಮನೆಗೆ ಕರೆದುಕೊಳ್ಳಲು ಒಪ್ಪುತ್ತಿಲ್ಲ. ಆಕೆಯನ್ನು ಕೌನ್ಸಲಿಂಗ್​ಗಾಗಿ ಕಳುಹಿಸಲಾಗಿದೆ. ಬಾಲಕನ ಪೋಷಕರೊಂದಿಗೆ ಮಹಿಳಾ ಆಯೋಗದ ಸಿಬ್ಬಂದಿ ಮಾತನಾಡಿ ಸಲಹೆಗಳನ್ನು ನೀಡಿದ್ದಾರೆ ಎಂದು ಆಂದ್ರಪ್ರದೇಶದ ಮಹಿಳಾ ಆಯೋಗದ ಅಧ್ಯಕ್ಷ ವಾಸಿರೆಡ್ಡಿ ಪದ್ಮಾ ಹೇಳಿದರು.

ತರಗತಿಯಲ್ಲಿ ನಡೆದ ಘಟನೆ ವಿದ್ಯಾರ್ಥಿಗಳಲ್ಲಿ ಕಾನೂನು ಜ್ಞಾನ ಎಷ್ಟಿದೆ ಎಂಬುದನ್ನು ತಿಳಿಸುತ್ತದೆ. ಮಹಿಳಾ ಆಯೋಗವು ಬಾಲ್ಯವಿವಾಹದ ವಿರುದ್ಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಲೇ ಬಂದಿದೆ. ಶಿಕ್ಷಣ ಹಕ್ಕು ಕಾಯ್ದೆಯ ಕುರಿತಾಗಿಯೂ ತಿಳಿ ಹೇಳುತ್ತಿದೆ ಎಂದು ಮಹಿಳಾ ಆಯೋಗದ ನಿರ್ದೇಶಕ ಆರ್. ಸೂಯೆಜ್ ಹೇಳಿದರು.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮತ್ತೆ ತಲೆ ಎತ್ತಿದ ಬಾಲ್ಯ ವಿವಾಹ ಪದ್ಧತಿ, 6 ತಿಂಗಳಲ್ಲಿ 1,791ಕೇಸ್ ದಾಖಲು

Follow Us
shruti hegde
shruti hegde
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​